Blog Archive

ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಸಾವು

Thursday, March 25th, 2021
Sanu

ಮಂಗಳೂರು : ನೇತ್ರಾವತಿ ಸೇತುವೆಯ ಮೇಲೆ ಎರಡು ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಡಬ ನಿವಾಸಿ, ವಿದ್ಯಾರ್ಥಿ ಮಾರ್ಚ್ 24 ರ ಬುಧವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ನೇತ್ರಾವತಿ ಸೇತುವೆಯಲ್ಲಿ ಸೋಮವಾರ ರಾತ್ರಿ ಕಡಬ ತಾಲ್ಲೂಕಿನ ಮರ್ದಳ ಬಳಿಯ ಕೆಮ್ಮಾಯಿ ನಿವಾಸಿ ಸಾನು ಅಬ್ರಹಾಂ (21) ಅವರ ಬೈಕು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಅವರು ತೀವ್ರವಾಗಿ ಗಾಯಗೊಂಡಿದ್ದರು. ಸಾನು ಅಬ್ರಹಾಂ ನಗರದ ಖಾಸಗಿ ಹೋಟೆಲ್ ಮಾನೆಜ್‌ಮೆಂಟ್‌ ಕಾಲೇಜಿನ ವಿದ್ಯಾರ್ಥಿಯಾಗಿದ್ದರು. ಮೃತಪಟ್ಟ […]

ಬಂಗಾರಪಲ್ಕೆ ಗುಡ್ಡ ಕುಸಿತದಿಂದ ಮಣ್ಣಿನಡಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

Tuesday, February 16th, 2021
sanath

ಬೆಳ್ತಂಗಡಿ :  ಮಲವಂತಿಗೆ ಗ್ರಾಮದ ಬಂಗಾರಪಲ್ಕೆ ಜಲಪಾತದಲ್ಲಿ ಜ.25ರಂದು ಗುಡ್ಡ ಕುಸಿತದಿಂದ ಮಣ್ಣಿನಡಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ  ಮೃತದೇಹ ಮಂಗಳವಾರ ಪತ್ತೆಯಾಗಿದೆ. ಲಾಯಿಲ ಗ್ರಾಮದ ಕಾಶಿಬೆಟ್ಟು ವಾಸುದೇವ ಶೆಟ್ಟಿ ಅವರ ಪುತ್ರ ಸನತ್ ಶೆಟ್ಟಿ (20) ಅವರ ಮೃತದೇಹ ಮೂರು ವಾರಗಳ ನಂತರ ಪತ್ತೆಯಾಗಿದೆ. ಬಂಗಾರಪಲ್ಕೆ ಜಲಪಾತದಲ್ಲಿ ಕಾರ್ಯಾಚರಣೆ ನಡೆಸಲು ಬೇಕಾದ ಯಂತ್ರಗಳನ್ನು ಬಳಸಲು ಸರಿಯಾದ ವಾತಾವರಣವಿಲ್ಲದ ಕಾರಣ ಹಲವು ಸಮಯದವರೆಗೂ ಮೃತ ದೇಹ ಪತ್ತೆಯಾಗಿರಲಿಲ್ಲ. ಮಂಗಳವಾರ ಕಲ್ಲು ಬಂಡೆಯಡಿ ಮೃತದೇಹ ಲಭ್ಯವಾಗಿದೆ.  

ಮಣಿಪಾಲ : ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಬಂಧನ

Thursday, October 15th, 2020
Fazal

ಉಡುಪಿ, : ಮಣಿಪಾಲದಲ್ಲಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಬಂಧಿಸುವಲ್ಲಿ ಉಡುಪಿ  ಪೊಲೀಸರು ಯಶಸ್ವಿಯಾಗಿದ್ದಾರೆ. ಅಕ್ರಮ ದಂಧೆಯಲ್ಲಿ ತೊಡಗಿದ ವ್ಯಕ್ತಿಯನ್ನು ಉಡುಪಿ ತಾಲೂಕಿನ ಬ್ರಹ್ಮಾವರದ ಮಹಮ್ಮದ್ ಫಝಲ್ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಆರೋಪಿ ಮಣಿಪಾಲದ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲೆಂದು ತಂದಿದ್ದ ನಿಷೇಧಿತ ಎಂಡಿಎಂಎ ಮಾತ್ರೆಗಳು, ಬ್ರೌನ್ ಶುಗರ್ ಪತ್ತೆಯಾಗಿದ್ದು ಅವುಗಳನ್ನು ಪೊಲೀಸರು ವಶಪಡಿಸಿಕೊಂದಿದ್ದಾರೆ. ಅಲ್ಲದೇ ಮಾರಾಟ ಸಂವಹನಕ್ಕೆಂದು ಬಳಸಲಾಗುತ್ತಿದ್ದ ಎರಡು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾದ ಡ್ರಗ್ಸ್ ಹಾಗೂ ಸೊತ್ತುಗಳ ಅಂದಾಜು ಮೌಲ್ಯ […]

ಕುಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

Monday, August 10th, 2020
anush

ಸುಬ್ರಹ್ಮಣ್ಯ: ಕಡಬ ತಾಲೂಕು ಕುಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನುಷ್ ಎ.ಎಲ್. 2019-20ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳನ್ನು ಪಡೆದುಕೊಂಡಿದ್ದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ. ಕೈಬೆರಳು ರಹಸ್ಯ, ನಿಮ್ಮ ಯಾವ ಬೆರಳಿನಲ್ಲಿ ಅದೃಷ್ಟವಿದೆ ನೋಡಿ ! ಇವರು ಬಳ್ಪ ಗ್ರಾಮದ ಲೊಕೇಶ್ ಮತ್ತು ಉಷಾ ಎಣ್ಣೆಮಜಲು ದಂಪತಿಗಳ ಪುತ್ರ. ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ. 71.80 ಫಲಿತಾಂಶ ಬಂದಿದೆ. […]

ವಿದ್ಯುತ್ ಪ್ರವಹಿಸಿ ಎಸೆಸೆಲ್ಸಿ ವಿದ್ಯಾರ್ಥಿ ಮೃತ್ಯು

Saturday, July 18th, 2020
Goutham

ಉಡುಪಿ : ಎಸೆಸೆಲ್ಸಿ ವಿದ್ಯಾರ್ಥಿಯೊಬ್ಬ ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಜು.17ರಂದು ರಾತ್ರಿ ವೇಳೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀನಗರ ಆರನೆ ಕ್ರಾಸ್‌ ನಲ್ಲಿ ನಡೆದಿದೆ. ಮೃತರನ್ನು ಲಕ್ಷ್ಮೀನಗರದ ಮಂಜುನಾಥ್ ನಾಯಕ್ ಎಂಬವರ ಮಗ ಗೌತಮ್(15) ಎಂದು ಗುರುತಿಸಲಾಗಿದೆ. ನೆರೆಮನೆಯವರು ತಮ್ಮ ಬಾವಿಯಿಂದ ಪಂಪ್‌ಸೆಟ್ ಮೇಲಕ್ಕೆತ್ತುವಾಗ ಅಲ್ಲೇ ಸಮೀಪದಲ್ಲಿ ಇದ್ದ ಗೌತಮ್ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲ್ಯಾಣಪುರ ಮಿಲಾಗ್ರಿಸ್ ಪ್ರೌಢಶಾಲೆಯ ಪ್ರತಿಭಾವಂತ ಎಸೆಸೆಲ್ಸಿ ವಿದ್ಯಾರ್ಥಿಯಾಗಿರುವ ಗೌತಮ್, ಇತ್ತೀಚೆಗೆ ನಡೆದ ಎಸೆಸೆಲ್ಸಿ […]

ತಾಯಿಯನ್ನು ನೋಡಿಕೊಳ್ಳಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

Friday, July 17th, 2020
Raviteja

ಶಿರಸಿ  : ತಾಯಿ ಮತ್ತು ಮಗ ಇಬ್ಬರೇ ಇದ್ದು ಮನೆಯಲ್ಲಿನ ಕಷ್ಟ ನೋಡಲಾಗದೇ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ‌ನೀರ್ನಳ್ಳಿಯಲ್ಲಿ‌ ನಡೆದಿದೆ. ನಿರ್ನಳ್ಳಿಯ ರವಿತೇಜ ಗಣಪತಿ ಭಟ್ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮನೆಯಲ್ಲಿ ತಾಯಿ ಮತ್ತು ಮಗ ಇಬ್ಬರೇ ಇದ್ದು ಮನೆಯ ನಿರ್ವಹಣೆ ಕಷ್ಟ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಮೊದಲು ತಿಮಿಟ್ ಸೇವಿಸಿ ನಂತರ ‌ನೇಣು‌ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ […]

ಎಸ್.ಎಸ್.ಎಲ್.ಸಿ. ಪರೀಕ್ಷೆ – ವಿದ್ಯಾರ್ಥಿಗಳ ಜವಾಬ್ದಾರಿ ಸರ್ಕಾರದ್ದು: ಸಚಿವ ಕೋಟ 

Monday, June 22nd, 2020
sslc

ಮಂಗಳೂರು : ವಿದ್ಯಾರ್ಥಿಗಳು ಸುರಕ್ಷಿತವಾಗಿ ಪರೀಕ್ಷೆ ಬರೆಯುವುದಕ್ಕೆ ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಸರ್ಕಾರ ಮತ್ತು ಜಿಲ್ಲಾಡಳಿತದಿಂದ ಕೈಗೊಂಡಿದ್ದು  ವಿದ್ಯಾರ್ಥಿಗಳು ಭಯ ಪಡುವ ಅಗತ್ಯವಿಲ್ಲ. ಪರಿಕ್ಷೆಗೆ ಹಾಜರಾಗುವ ಪತ್ರಿಯೊಬ್ಬ ವಿದ್ಯಾರ್ಥಿಯ ಜವಬ್ದಾರಿ ಸರ್ಕಾರದ ಮೇಲೆಯಿದ್ದು, ಪೋಷಕರು ಅಂತಕ ಒಳಗಾಗುವುದು ಬೇಡ. ಅವಶ್ಯಕತೆವಿದ್ದಲ್ಲಿ ಒಬ್ಬ ವಿದ್ಯಾರ್ಥಿ ಪರೀಕ್ಷೆ ಬರೆಯಲು ಒಂದು ಬಸ್ಸಿನ ವ್ಯವಸ್ಥೆ ಮಾಡಲೂ ಸರಕಾರ ಸಿದ್ದ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿಯಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವ ಸಿದ್ಧತಾ ಕ್ರಮಗಳ ಪರಿಶೀಲನಾ […]

ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಲ್ಲಿ ಉಳಿದಿದ್ದರೆ ಅಲ್ಲಿಂದಲೇ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ

Saturday, May 16th, 2020
suresh-kumar

ಬೆಂಗಳೂರು : ದ್ವಿತೀಯ ಪಿಯುಸಿ ಇಂಗ್ಲಿಷ್ ಭಾಷಾ ಪರೀಕ್ಷೆಯನ್ನು ಜೂನ್ ತಿಂಗಳಲ್ಲಿ ನಡೆಸಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಲಾಕ್‌ಡೌನ್‌ನಿಂದಾಗಿ ವಿದ್ಯಾರ್ಥಿಗಳು ಯಾವ ಯಾವ ಜಿಲ್ಲೆಗಳಲ್ಲಿ ಸಿಲುಕಿಕೊಂಡಿದ್ದಾರೋ  ಅಲ್ಲೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಶನಿವಾರ ಸುತ್ತೋಲೆ ಹೊರಡಿಸಿದೆ. ದೇಶದಲ್ಲಿ ಲಾಕ್‌ಡೌನ್ ಘೋಷಣೆಯಾಗುವ ಮುಂಚೆ ದ್ವಿತೀಯ ಪಿಯುಸಿ ಯ ಎಲ್ಲಾ ಪರೀಕ್ಷೆಗಳು ಮುಗಿದಿದ್ದವು. ಆದರೆ, ಆಂಗ್ಲ ಭಾಷೆ ಪತ್ರಿಕೆ ಮಾತ್ರ ಉಳಿದಿತ್ತು. ಈ ಸಂದರ್ಭದಲ್ಲಿ ಲಾಕ್‌ಡೌನ್‌ ಘೋಷಿಸಿದ ಪರಿಣಾಮ ಈ ಒಂದು ಪತ್ರಿಕೆಯ ಪರೀಕ್ಷೆಯನ್ನು […]

ಬೈಕ್ ಅಪಘಾತದಲ್ಲಿ ವಿದ್ಯಾರ್ಥಿ ಮೃತ್ಯು : ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

Saturday, March 14th, 2020
kushal

ಮಂಗಳೂರು : ನಗರದ ಬಿಜೈ ಬಳಿ ಬೈಕ್ ಸ್ಕಿಡ್‌ನಿಂದಾಗಿ ಗಂಭೀರ ಗಾಯಗೊಂಡ ನಗರದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ರಾಮನಗರ ಜಿಲ್ಲೆಯ ಕುಶಾಲ್ ಕುಮಾರ್ (19) ಮೃತಪಟ್ಟ ವಿದ್ಯಾರ್ಥಿ. ಗುರುವಾರ ಬೆಳಗ್ಗೆ ಕುಶಾಲ್ ಅವರು ತನ್ನ ಪಿಜಿಯಿಂದ ಬೈಕ್‌ನಲ್ಲಿ ಜಿಮ್‌ಗೆ ಹೋಗುತ್ತಿದ್ದಾಗ ಬಿಜೈ-ಕೆಎಸ್ಸಾರ್ಟಿಸಿ ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿದೆ. ಇದರ ಪರಿಣಾಮ ತಲೆಯ ಹಿಂಭಾಗಕ್ಕೆ ಗಂಭೀರ ಗಾಯವಾಗಿದ್ದು, ಕೂಡಲೇ ಸ್ಥಳೀಯರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ನಿಗಾ […]

ಪರೀಕ್ಷಾ ಭಯವನ್ನು ಮನಸ್ಸಿನಿಂದ ಹೋಗಲಾಡಿಸಿ : ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕಿವಿಮಾತು

Monday, March 2nd, 2020
madikeri

ಮಡಿಕೇರಿ : ವಿದ್ಯಾರ್ಥಿಗಳು ಪರೀಕ್ಷೆ ಬಗ್ಗೆ ಇರುವ ಭಯವನ್ನ ಮನಸಿನಿಂದ ಹೋಗಲಾಡಿಸಬೇಕು. ಭಯ ನಿಮ್ಮಲ್ಲಿದ್ದರೆ ಪರೀಕ್ಷೆ ಬರೆಯಲು ಕ?ವಾಗುತ್ತದೆ ಮತ್ತು ಓದಿದ ಪಾಠಗಳು ಮರೆತು ಹೋಗುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ತಿಳಿಸಿದರು. ಕೊಡಗು ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾಗಳ ಕಚೇರಿ ಮಡಿಕೇರಿ ತಾಲೂಕು ಮತ್ತು ಕೊಡಗು ವಿಕಸನ ಇವರ ಸಂಯುಕ್ತಾಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳೊಂದಿಗೆ ನಗರದ ಸಂತ ಜೋಸೆಫರ ಶಾಲೆಯಲ್ಲಿ ಶನಿವಾರ ನಡೆದ ಸಂವಾದ […]