ಜಾದೂ ಕಲಾವಿದ ಚಿಂತನ್ ವಿಧಿ ವಶ
Saturday, August 8th, 2020ಮಂಗಳೂರು: ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಜಾದು ಕಲಿತು ರಾಜ್ಯ ಮತ್ತು ರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದ ಪ್ರತಿಭಾನ್ವಿತ ಜಾದೂ ಕಲಾವಿದ ಕಾಸರಗೋಡಿನ ಮಾಸ್ಟರ್ ಚಿಂತನ್ ದೀರ್ಘ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು. ತನ್ನ 11 ನೇ ವಯಸ್ಸಿಗೆ ತಂದೆಯಾದ ಕಾಸರಗೋಡಿನ ಹಿರಿಯ ಜಾದೂಗರ ನಾರ್ತ್ ಮಲಬಾರ ಮ್ಯಾಜಿಕ್ ಫೌಂಡೇಶನ್ ಅಧ್ಯಕ್ಷರಾದ ಪ್ರೊ.ಮಾಧವ್ ಇವರಿಂದ ಜಾದೂ ಕಲಿಕೆ ಆರಂಭಮಾಡಿದ್ದ ಮಾಸ್ಟರ್ ಚಿಂತನ್ ಎಂದು ಪ್ರಸಿದ್ದಿ ಪಡೆದಿದ್ದರು. ಜಾದೂಗಾರ ಕುದ್ರೋಳಿ ಗಣೇಶ್ ಇವರ ಶಿಷ್ಯರಾಗಿದ್ದರು. ಅಪಾರ ಕೈಚಳಕದ ಅಗತ್ಯವಿರುವ ಮ್ಯಾಜಿಪ್ಯುಲೇಶನ ಜಾದೂ […]