Blog Archive

ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶ ಖಂಡಿಸಿ ಮಂಗಳೂರಿನಲ್ಲಿ ಶಬರಿಮಲೆ ಸಂರಕ್ಷಣಾ ಪಾದಯಾತ್ರೆ

Tuesday, October 16th, 2018
vadvyas-kamath

ಮಂಗಳೂರು: ಕೇರಳದ ತಿರುವನಂತಪುರದಲ್ಲಿ ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶ ಹಾಗೂ ಅಲ್ಲಿನ ಪಿಣರಾಯಿ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಮಂಗಳೂರಿನಲ್ಲಿ ಶಬರಿಮಲೆ ಸಂರಕ್ಷಣಾ ಪಾದಯಾತ್ರೆ ನಡೆಯಿತು. ಕೇರಳ ರಾಜ್ಯ ಬಿಜೆಪಿ ಸಹಪ್ರಭಾರಿಯೂ, ದಕ್ಷಿಣ ಕನ್ನಡ ಲೋಕಸಭಾ ಸದಸ್ಯರೂ ಆದ ನಳಿನ್ ಕುಮಾರ್ ಕಟೀಲ್, ಶಾಸಕರುಗಳಾದ ಡಿ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಎಸ್ ಅಂಗಾರ, ಉಮಾನಾಥ ಕೋಟ್ಯಾನ್, ಸಂಜೀವ್ ಮಠಂದೂರು ಡಾ|ಭರತ್ ಶೆಟ್ಟಿ, ಹರೀಶ್ ಪೂಂಜಾ ಹಾಗೂ ಮತ್ತಿತ್ತರರು ಪಾದಯಾತ್ರೆಯಲ್ಲಿ ಭಾಗವಹಿಸಿದರು.

ಬಜರಂಗ ದಳ ಕಾರ್ಯಕರ್ತರಿಗೆ 4 ಲಕ್ಷ ರೂ. ನಗದು ನೀಡಿದ ಸಚಿವ ಜಮೀರ್ ಅಹ್ಮದ್

Thursday, October 11th, 2018
zameer

ಮಂಗಳೂರು: ಕೊಡಗು ನೆರೆ ಪರಿಹಾರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ನಾಲ್ವರು ಬಜರಂಗದಳ ಕಾರ್ಯಕರ್ತರಿಗೆ ಸಚಿವ ಜಮೀರ್ ಅಹ್ಮದ್ ತಮ್ಮ ಸ್ವಂತ 4 ಲಕ್ಷ ರೂ. ನಗದು ನೀಡಿ ಅಭಿನಂದಿಸಿದ್ದಾರೆ. ಕಾನೂನು ಮಾಪನ ಶಾಸ್ತ್ರ ಇಲಾಖೆ ದ.ಕ. ಇದರ ವತಿಯಿಂದ ಕಾನೂನು ಮಾಪನ ಶಾಸ್ತ್ರ ಇಲಾಖೆಗಳ ಕಚೇರಿಗಳ ಸಂಕೀರ್ಣ ಮಾಪನ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಚಿವ ಜಮೀರ್ ಅಹ್ಮದ್ ಈ ನಗದು ಕೊಡುಗೆಯನ್ನು ನೀಡಿದರು. ಈ ಸಂದರ್ಭ ಸಚಿವ ಜಮೀರ್ ಅಹ್ಮದ್ ಮಾತನಾಡಿ, ಇತ್ತೀಚೆಗೆ ಕೊಡಗಿನಲ್ಲಿ ನಡೆದ ಪ್ರಕೃತಿ […]

ವಾಜಪೇಯಿ ನಿಧನರಾದ ಹಿನ್ನೆಲೆ..ಬಿಜೆಪಿ ಕಚೇರಿಯಲ್ಲಿ ಶೃದ್ದಾಂಜಲಿ!

Friday, August 17th, 2018
nalin-kumar

ಮಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ನಿಧನರಾದ ಹಿನ್ನೆಲೆಯಲ್ಲಿ ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಶೃದ್ದಾಂಜಲಿ ಅರ್ಪಿಸಲಾಯಿತು. ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಶೃದ್ದಾಂಜಲಿ ಸಭೆಯಲ್ಲಿ ವಾಜಪೇಯಿ ಅವರಿಗೆ ಪುಷ್ಪನಮನ ಸಲ್ಲಿಸಿ ನುಡಿನಮನ ಸಲ್ಲಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮಾಜಿ ಶಾಸಕ ಯೋಗೀಶ್ ಭಟ್ ಮೊದಲಾದವರು ನುಡಿನಮನ ಸಲ್ಲಿಸಿದರು.

ಪಾರ್ಕಿಂಗ್ ಸ್ಥಳಗಳಲ್ಲಿ ಡೋರ್ ನಂಬರ್ ನೀಡಿ ಕಟ್ಟಡ ಕಟ್ಟಲು ಅನುಮತಿ ನೀಡಬೇಡಿ

Thursday, June 28th, 2018
VV Kamath

ಮಂಗಳೂರು  : ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದೇ ಅಧಿಕಾರಿಗಳು ಕಾರ‍್ಯನಿರ್ವಹಿಸಬೇಕು. ಅದೇ ರೀತಿಯಲ್ಲಿ ಪಾಲಿಕೆಗೆ ಬರುತ್ತಿರುವ ಆದಾಯ ಸೋರಿಕೆಯಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆದೇಶಿಸಿದ್ದಾರೆ. ಅವರು ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ, ನಗರ ಯೋಜನೆ ಮತ್ತು ಲೆಕ್ಕಪತ್ರ ವಿಭಾಗದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಪಾಲಿಕೆಯ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಹೋರ‍್ಡಿಂಗ್ಸ್, ಹೋರ‍್ಡಿಂಗ್ಸ್ ಏಜೆನ್ಸಿಯವರಿಂದ ಬಾಕಿ ಇರುವ ಶುಲ್ಕ, ವಸೂಲಿ ಮಾಡಲು ತೆಗೆದುಕೊಂಡಿರುವ ಕ್ರಮಗಳ ಮಾಹಿತಿಯನ್ನು ಶೀಘ್ರದಲ್ಲಿ […]

ಪ್ರಕೃತಿ ವಿಕೋಪದ ನಷ್ಟಕ್ಕೆ ಪರಿಹಾರದ ಚೆಕ್ ಸಂತ್ರಸ್ತರಿಗೆ ಶೀಘ್ರ ನೀಡಿ : ವೇದವ್ಯಾಸ ಕಾಮತ್

Saturday, June 23rd, 2018
Vedavyas Kamath

ಮಂಗಳೂರು : ಮಳೆ, ನೆರೆ ಮತ್ತು ಪ್ರಕೃತಿ ವಿಕೋಪದಲ್ಲಿ ಆದ ನಷ್ಟಕ್ಕೆ ಪರಿಹಾರದ ಚೆಕ್ ಸಂತ್ರಸ್ತರಿಗೆ ಹಸ್ತಾಂತರಿಸುವ ಪ್ರಕ್ರಿಯೆಗೆ ಮಂಗಳೂರು ಮಹಾನಗರ ಪಾಲಿಕೆಯ ಕಡೆಯಿಂದ ವೇಗ ನೀಡಬೇಕು ಎಂದು ಮಂಗಳೂರು ನಗರ ದಕ್ಷಿಣದ ಶಾಸಕ ಡಿ ವೇದವ್ಯಾಸ ಕಾಮತ್ ಪಾಲಿಕೆ ಆಯುಕ್ತರಿಗೆ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗುರುವಾರ ಅವರು ಕಮೀಷನರ್, ಇಂಜಿನಿಯರಿಂಗ್ ಮತ್ತು ಆರೋಗ್ಯ ವಿಭಾಗದ ಅಧಿಕಾರಿಗಳ ಸಭೆ ನಡೆಸಿದರು. ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಡ್ರೈನೇಜ್ ಗೆ ಸಂಬಂಧಪಟ್ಟ ಯಾವ ಅಭಿವೃದ್ಧಿ […]

ರಾಜ್ಯ ಸರಕಾರ ಕಾನೂನಿಗಿಂತ ಮಾನವೀಯತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪರಿಹಾರ ನೀಡಿ: ವೇದವ್ಯಾಸ ಕಾಮತ್

Friday, June 15th, 2018
desh-vedavyas

ಮಂಗಳೂರು: ರಾಜ್ಯ ಸರಕಾರ ಕಾನೂನಿಗಿಂತ ಮಾನವೀಯತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪರಿಹಾರ ನೀಡಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಕಂದಾಯ ಸಚಿವ ಆರ್ ವಿ ದೇಶಪಾಂಡೆಯವರಿಗೆ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಭೆಯ ಬಳಿಕ ಸಚಿವ ಆರ್ ವಿ ದೇಶಪಾಂಡೆಯವರಿಗೆ ಮಂಗಳೂರು ನಗರ ದಕ್ಷಿಣದಲ್ಲಿ ಆಗಿರುವ ಹಾನಿಯ ಸಂಪೂರ್ಣ ವರದಿಯನ್ನು ನೀಡಿ ವೇದವ್ಯಾಸ ಕಾಮತ್ ಮಾಧ್ಯಮಗಳೊಂದಿಗೆ ಮಾತನಾಡಿದರು. ಮಳೆಯಿಂದ ನಷ್ಟಕ್ಕೊಳಗಾದ ಸುಮಾರು 110 ಮನೆಗಳಿಗೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದೇನೆ.ಅನೇಕ […]

ಸಾಯಿಬಾಬಾ ಪಾದುಕೆ ದರ್ಶನ ಪಡೆದ ಭಕ್ತರು

Thursday, May 24th, 2018
sai-baba

ಮಂಗಳೂರು: ಶಿರಡಿಯಿಂದ ಮಂಗಳೂರಿನ ಉರ್ವ ಚಿಲಿಂಬಿಯ ಶಿರಡಿ ಸಾಯಿ ಬಾಬಾ ಮಂದಿರಕ್ಕೆ ಆಗಮಿಸಿದ ಸಾಯಿ ಬಾಬಾರ ಪವಿತ್ರ ಪಾದುಕಾ ದರ್ಶನ ಕಾರ್ಯಕ್ರಮದಲ್ಲಿ ಬುಧವಾರ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಸಾಯಿ ಬಾಬಾರವರು ಧರಿಸುತ್ತಿದ್ದ ಶ್ರೀ ಪಾದುಕೆಯನ್ನು ದರ್ಶನಾರ್ಥವಾಗಿ ಶಿರಿಡಿಯಿಂದ ಚಿಲಿಂಬಿಯ ಸಾಯಿ ಬಾಬಾ ಮಂದಿರಕ್ಕೆ ತರಲಾಗಿತ್ತು. ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಭಾಗವಹಿಸಿ ಪಾದುಕೆಯ ದರ್ಶನ ಪಡೆದರು. ಸಂಜೆ ಪಟ್ಲಸತೀಶ್ ಶೆಟ್ಟಿ ಮತ್ತು ಬಳಗದವರಿಂದ ಶ್ರೀ ಸಾಯಿ ಯಕ್ಷಾರಾಧನೆ ಕಾರ್ಯಕ್ರಮ ಕೂಡ ಆಯೋಜಿಸಲಾಗಿತ್ತು.

ಸಿದ್ದರಾಮಯ್ಯರಿಂದ ಕೊಲೆಗಡುಗರ ರಕ್ಷಣೆ: ಅಮಿತ್ ಶಾ ಆರೋಪ

Wednesday, May 9th, 2018
amit-shah

ಮಂಗಳೂರು: ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದವರನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣೆ ಮಾಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಪಾತಾಳದಲ್ಲಿದ್ದರೂ ಕೊಲೆಗಡುಕರನ್ನು ಹುಡುಕಿ ಬಂಧಿಸುತ್ತೇವೆ ಎಂದು ಹೇಳಿದ್ದಾರೆ. ನಗರದ ನವಭಾರತ್ ವೃತ್ತದಿಂದ ಡೊಂಗರಕೇರಿ ಮೂಲಕ ಕಾರ್‌ಸ್ಟ್ರೀಟ್ ತನಕ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರೊಂದಿಗೆ ರೋಡ್ ಶೋ ನಡೆಸಿದ ಬಳಿಕ ಅವರು ಮಾತನಾಡಿದರು. ಸಿದ್ದರಾಮಯ್ಯ ಸರಕಾರ ಅಭಿವೃದ್ಧಿ ವಿರೋಧಿ ಮತ್ತು ಗೂಂಡಾಗಿರಿಯ ಸರಕಾರ. ಕಾರ್ಯಕರ್ತರನ್ನು ಹತ್ಯೆ […]

ಮಂಗಳೂರಲ್ಲಿ ಅಮಿತ್ ಶಾ ರೋಡ್ ಶೋ

Tuesday, May 8th, 2018
amit-shah

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಭಾಷಣದ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ‌ ಅಧ್ಯಕ್ಷ ಅಮಿತ್ ಶಾ ಬಿಜೆಪಿ ಪಾಳಯಕ್ಕೆ ಬಲ ತುಂಬಲಿದ್ದಾರೆ. ಮಂಗಳೂರು ನಗರ ದಕ್ಷಿಣ ಮತ್ತು‌ ಉತ್ತರ ಕ್ಷೇತ್ರಗಲ್ಲಿ ಬೃಹತ್‌ ರೋಡ್ ಶೋ ಮಾಡಲಿರುವ ಅಮಿತ್ ಶಾ ಕೊನೇ ಕೆಲವೇ ದಿನಗಳಲ್ಲಿ ಪ್ರಚಾರ ಕಾರ್ಯಕ್ಕೆ ಫಿನಿಶಿಂಗ್ ಟಚ್ ನೀಡಲಿದ್ದಾರೆ. ಅವರ ರೋಡ್ ಶೋ ಕಾರ್ಯಕ್ರಮದ ವಿವರಗಳು ಹೀಗಿವೆ. 1. ಮಧ್ಯಾಹ್ನ 12.45 ವಿಮಾನ ನಿಲ್ದಾಣಕ್ಕೆ ಆಗಮನ 2. ಊಟ ವಿಶ್ರಾಂತಿ 2.15ರ ವರೆಗೆ. 3. ಮಧ್ಯಾಹ್ನ […]

ಬಿಜೆಪಿ ಅಭ್ಯರ್ಥಿ ಪರ ಮುಂಬೈ ಲೋಕಸಭಾ ಸದಸ್ಯ ಪ್ರಚಾರ

Monday, May 7th, 2018
gopal-shetty

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಇಂದು ಮುಂಬೈ ಲೋಕಸಭಾ ಸದಸ್ಯ ಗೋಪಾಲ ಶೆಟ್ಟಿ ಪ್ರಚಾರ ನಡೆಸಿದರು. ಕರಾವಳಿಯಿಂದ ಮುಂಬೈಗೆ ಹೋಗಿ ನೆಲೆಸಿ ಅಲ್ಲಿ ಬಿಜೆಪಿಯಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಗೋಪಾಲ ಶೆಟ್ಟಿ ಬಿಜೆಪಿ ಪರ ಮತಯಾಚನೆ ತವರು ಜಿಲ್ಲೆಗೆ ಆಗಮಿಸಿದ್ದಾರೆ. ಮಂಗಳೂರಿನ ಕಂಕನಾಡಿ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಮತಯಾಚನೆ ಮಾಡಿದರು. ಮನೆ ಮನೆಗೆ ತೆರಳಿ ಪ್ರಚಾರ ನಡೆಸುವ ವೇಳೆ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ […]