Blog Archive

ನೌಶಿದಾ ಅಪಹರಣ ಕಟ್ಟುಕಥೆ : ಕ್ರಿಮಿನಲ್ ಪ್ರಕರಣ ದಾಖಲಿಸಲು ಪೊಲೀಸರಿಗೆ ಸೂಚನೆ

Tuesday, October 1st, 2013
Noushida Kidnap

ಪುತ್ತೂರು : ಮಾಡಾವು ಕೈಕಂಬ ನಿವಾಸಿ ನೌಶಿದಾಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಸೂಚನೆ ನೀಡಿದ್ದೇನೆ ಎಂದು ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ತಿಳಿಸಿದ್ದಾರೆ. ಅಪಹರಣದ ನಾಟಕ ಮಾಡುವ ಮೂಲಕ ಸಮಾಜದಲ್ಲಿ ಗೊಂದಲ ಉಂಟುಮಾಡಿ ಪುತ್ತೂರಿನಲ್ಲಿ ಕೋಮು ದ್ವೆಶದ ಪರಿಸ್ಥಿತಿ ಉಂಟಾಗಿತ್ತು ಎಂದು ಅವರು ಹೇಳಿದರು. ನೌಶಿದಾ ತನ್ನನ್ನು ಅಪಹರಣ ಮಾಡಲಾಗಿದೆ ಎಂಬ ಕಟ್ಟುಕಥೆಯಿಂದ ಪುತ್ತೂರಿನಲ್ಲಿ ಶಾಂತಿಯನ್ನು ಕದಡುವ ಪ್ರಯತ್ನ ನಡೆದಿತ್ತು. ಮುಂದೆ ಇಂತಹ ನಕಲಿ ಪ್ರಕರಣಗಳು ನಡೆಯಬಾರದು. ಈ ರೀತಿಯ ಮೋಸಗಳನ್ನು […]

ಬಂಟರ ಗುದ್ದಾಟ : ಕೈಯಲ್ಲಿ ಮತ್ತೇ ತಳಮಳ

Monday, March 25th, 2013
Kripa Alva Shakuntala Shetty

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ ಇಬ್ಬರು ಬಂಟ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ನೀಡುವುದು ಕಾಂಗ್ರೆಸ್ ನಲ್ಲಿ ಮೊದಲಿನಿಂದಲೂ ನಡೆದು ಬಂದ ಸಂಪ್ರದಾಯ. ಕಳೆದ ಅವಧಿಯಲ್ಲಿ ಸುರತ್ಕಲ್ ನಲ್ಲಿ ಅವಕಾಶ ತಪ್ಪಿದ್ದು ಗೊಂದಲಕ್ಕೆ ಕಾರಣವಾಗಿದ್ದು, ಈಗ ಮತ್ತೆ ಅದೇ ಗೊಂದಲ ಮುಂದುವರಿದಿದೆ. ಬಂಟರಿಗೆ ಅವಕಾಶ ಕೊಡಬೇಕು ಎಂಬ ಆಗ್ರಹ ಜೋರಾಗಿದೆ. ಆದರೆ ಎಲ್ಲಿ ಎಂಬ ಪ್ರಶ್ನೆಯೂ ಕಾಡುತ್ತಿದೆ. ಇದೇ ಸಂದರ್ಭದಲ್ಲಿ ಮಹಿಳೆಯರು ತಮಗೆ ಅವಕಾಶ ಕೊಡಲೇಬೇಕು ಎಂದು ರಾಜ್ಯ ಮಟ್ಟದಲ್ಲಿ ಹೋರಾಟಕ್ಕಿಳಿದಿದ್ದಾರೆ. ಈ ಬೆಳವಣಿಗೆ ಕೂಡ […]

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಡಿ.ವಿ

Wednesday, March 6th, 2013
DV Sadananda Gowda

ಮಂಗಳೂರು : ವೈಯಕ್ತಿಕ ಕಾರಣಗಳಿಂದಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಹೇಳಿದ್ದಾರೆ. ಮಂಗಳೂರಿನಲ್ಲಿ ಮಂಗಳವಾರ ತನ್ನನ್ನು ಭೇಟಿಯಾದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲಿರುವ ಬಿಜೆಪಿಯ 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 25ರ ಒಳಗೆ ಪ್ರಕಟಿಸಲಾಗುವುದು. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದ ಬಳಿಕ ರಾಜ್ಯದ ಬಿಜೆಪಿ ನಾಯಕರು ಹಾಗೂ ಉನ್ನತ ಮಟ್ಟದ ನಾಯಕರ ಸಭೆ ನಡೆಸಲಾಗುವುದು. ಇದರಲ್ಲಿ ವಿಧಾನಸಭಾ ಅಭ್ಯರ್ಥಿಗಳ ಮೊದಲ […]

ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ

Tuesday, February 26th, 2013
Shakuntala Shetty join Congress

ಪುತ್ತೂರು : ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಯವರು ಸೋಮವಾರ ಎಐಸಿಸಿ ಕಾರ್ಯದರ್ಶಿ ಹಾಗೂ ಮಾಜಿ ಸಂಸದ ವಿನಯ ಕುಮಾರ್‌ ಸೊರಕೆ ಅವರ ಸಮ್ಮುಖ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ  ಅಧಿಕೃತವಾಗಿ ಸೇರ್ಪಡೆಗೊಂಡರು ಆ ಮೂಲಕ ಇದುವರೆಗೂ ಇದ್ದ ರಾಜಕೀಯ ಊಹಾ ಪೋಹಗಳಿಗೆ ತೆರೆ ಎಳೆದಿದ್ದಾರೆ. ಯಾವುದೇ ಶರತ್ತು ಅಥವಾ ಬೇಡಿಕೆಯನ್ನು ಇರಿಸಿದೆ  ಕಾಂಗ್ರೆಸ್‌ ಪಕ್ಷ ಸೇರಿದ್ದಾಗಿ ತಿಳಿಸಿದ್ದಾರೆ. ಮತ್ತು  ಇಂದಿನಿಂದಲೇ  ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತೆಯಾಗಿ ಕೆಲಸ ಮಾಡುವುದಾಗಿ ಅವರು ಹೇಳಿದರು.ಕೆಲವು ದಿನಗಳ ಹಿಂದೆ ಜೆಡಿಎಸ್‌ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರು ಶಕುಂತಳಾ […]

ಹತ್ತೂರಿನ ಪುತ್ತೂರಿನಲ್ಲಿ ಡಿವಿಎಸ್ ವಿರುದ್ಧ ಕರಂದ್ಲಾಜೆ

Monday, January 28th, 2013
Sadananda Gowda, Shobha Karandlaje

ಮಂಗಳೂರು : ಸದಾನಂದ ಗೌಡ ಮೇಲೆ ಶೋಭಾ ಕರಂದ್ಲಾಜೆ ಆಕ್ರೋಶಿತರಾಗಿಯೇ ಇದ್ದಾರೆ. ಯಡಿಯೂರಪ್ಪರೊಂದಿಗೆ ಗುರುತಿಸಿಕೊಂಡ ನೆಪದಲ್ಲಿ ಶೋಭಾ ಕರಂದ್ಲಾಜೆಯ ಮಂತ್ರಿ ಸ್ಥಾನ ಕಿತ್ತುಕೊಳ್ಳಲು ಸದಾನಂದ ಗೌಡರು ಪಿತೂರಿ ನಡೆಸಿದ್ದರು ಎಂದು ಶೋಭಾರ ಹಿಂಬಾಲಕರು ನಂಬಿದ್ದಾರೆ. ಇದೇ ಕೋಪದಲ್ಲಿ ಡಿ.ವಿ. ವಿರುದ್ಧ ಪುತ್ತೂರಿನಲ್ಲಿ ಸ್ಪರ್ಧಿಸುತ್ತೇನೆ ಎಂದು ಶೋಭಾ ಎಚ್ಚರಿಕೆ ಸಂದೇಶವನ್ನೂ ನೀಡಿದ್ದರು. ಡಿ.ವಿ.ವಿರುದ್ಧ ಶೋಭಾ ಸ್ಪರ್ಧಿಸದೇ ಇದ್ದರೂ ಕೂಡ ಡಿ.ವಿ. ಗೆಲವು ತಡೆಯಲು ಹೋರಾಡದೆ ಇರಲಾರರು. ಶೋಭಾ ಪುತ್ತೂರಿನಲ್ಲಿ ಓಡಾಡಿದ್ದೇ ಆದರೆ ಒಕ್ಕಲಿಗ ಮತಗಳು ಒಡೆಯದಿರಲಾರವು ಎಂದು ಸದಾನಂದ […]