Blog Archive

ಸುರತ್ಕಲ್ ಬೀಚ್ ನಲ್ಲಿ ಸಮುದ್ರ ಪಾಲಾದ ಶಿವಮೊಗ್ಗ ಮೂಲದ ಬಾಲಕ

Tuesday, March 2nd, 2021
surathkal Beach

ಮಂಗಳೂರು :  ಶಿವಮೊಗ್ಗ ಮೂಲದ ಬಾಲಕನೋರ್ವ ಸುರತ್ಕಲ್  ಗುಡ್ಡೆಕೊಪ್ಲ ಬೀಚ್ನಲ್ಲಿ ಸಮುದ್ರ ಪಾಲಾದ ಘಟನೆ ಸೋಮವಾರ ನಡೆದಿದೆ. ಬಾಲಕನ ತಂದೆಯನ್ನು ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮುಬಾರಕ್ (15) ಮಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ. ಈ ವೇಳೆ ಸಮುದ್ರ ವಿಹಾರಕ್ಕೆಂದು ಹೆತ್ತವರು ಹಾಗೂ ಸಂಬಂಧಿಕರೊಂದಿಗೆ ತೆರಳಿದ್ದ. ಸಮುದ್ರ ತೀರದಲ್ಲಿ ನೀರಿಗಿಳಿದು ಆಟವಾಡುತ್ತಿದ್ದಾಗ ಬೃಹತ್ ಗಾತ್ರದ ತೆರೆ ಅಪ್ಪಳಿಸಿ ಬಾಲಕ ಮುಬಾರಕ್ ನೀರು ಪಾಲಾಗಿದ್ದಾನೆ. ಈ ಸಂದರ್ಭ ಬಾಲಕನ ತಂದೆಯೂ ಅಲೆಯ ಸೆಳೆತಕ್ಕೆ ಸಿಲುಕಿದ್ದು, ತಕ್ಷಣ ಸ್ಥಳೀಯ […]

ಎಕ್ಕಾರಿನಲ್ಲಿ ನಿರ್ಮಾಣಗೊಳ್ಳಬೇಕಿದ್ದ ಕ್ಷಿಪ್ರ ಕಾರ್ಯಾಚರಣೆ ಪಡೆ ಸ್ಥಳಾಂತರ, ಜಿಲ್ಲೆಗೆ ಮಾಡಿದ ಮೋಸ

Tuesday, January 19th, 2021
muneerKatialla

ಮಂಗಳೂರು : ನಗರ ಹೊರವಲಯದ ಬಡಗ ಎಕ್ಕಾರಿನಲ್ಲಿ ನಿರ್ಮಾಣಗೊಳ್ಳಬೇಕಿದ್ದ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್ ಎಎಫ್) ಘಟಕ ಯಾರ ಅರಿವಿಗೂ ಬಾರದಂತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಗೆ ಸ್ಥಳಾಂತರಿಸಿ  ಶಿಲಾನ್ಯಾಸ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿಂದೆ ಕರಾವಳಿಯ ಬ್ಯಾಂಕುಗಳು ಉತ್ತರ ಭಾರತದ ಬ್ಯಾಂಕುಗಳೊಂದಿಗೆ ವಿಲೀನ, ಮಂಗಳೂರು ವಿಮಾನ ನಿಲ್ದಾಣ ಅದಾನಿ ಕಂಪೆನಿಗೆ ಹಸ್ತಾಂತರ, ಇದೀಗ ಕ್ಷಿಪ್ರ ಕಾರ್ಯಾಚರಣೆ ಪಡೆಯ ಘಟಕ ಸ್ಥಳಾಂತರ ಸಂಸದ ನಳಿನ್ ಕುಮಾರ್ ಕಟೀಲ್ ವೈಫಲ್ಯ ಎಂದು ಮುನೀರ್‌ ಕಾಟಿಪಳ್ಳ ಆರೋಪಿಸಿದ್ದಾರೆ. ಈ ವೈಫಲ್ಯದ ಜವಾಬ್ದಾರಿಯನ್ನು […]

ಡಿ.ವಿ.ಸದಾನಂದ ಗೌಡ ಅಶ್ವಸ್ಥ, ಆಸ್ಪತ್ರೆಗೆ ದಾಖಲು

Sunday, January 3rd, 2021
sadananda Gowda

ಚಿತ್ರದುರ್ಗ : ಕೇಂದ್ರ ಸಚಿವ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರು ಲೋ ಶುಗರ್ ಉಂಟಾಗಿ ಚಿತ್ರದುರ್ಗದ ಬಸವೇಶ್ವರ  ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ಸಭೆ ಮುಗಿಸಿ ಬರುವಾಗ ಘಟನೆ ನಡೆದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸಹಜಸ್ಥಿತಿಗೆ ಬಂದಿದ್ದು ಕುಟುಂಬದವರ ಜೊತೆ ಮಾತಾಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗುವುದು ಎಂದು ಮೂಲಗಳು ತಿಳಿಸಿವೆ

ಶಿವಮೊಗ್ಗ: ಆಸ್ಪತ್ರೆಗೆ ಬಂದಿದ್ದ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದ ಸಾಮೂಹಿಕ ಅತ್ಯಾಚಾರ

Sunday, December 6th, 2020
Rape

ಶಿವಮೊಗ್ಗ: ತಾಯಿಯನ್ನು ನೋಡಿಕೊಳ್ಳಲು  ಆಸ್ಪತ್ರೆಗೆ ಬಂದಿದ್ದ ಬಾಲಕಿಗೆ ಊಟ ಕೊಡಿಸುವುದಾಗಿ ಹೇಳಿ ಕಾರಿನಲ್ಲಿ ಕರೆದೊಯ್ದ ಮೆಗ್ಗಾನ್ ಆಸ್ಪತ್ರೆ ವಾರ್ಡ್ ಬಾಯ್ ಮತ್ತು ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬಾಲಕಿ ತಾಯಿ ಆರೋಗ್ಯ ಸಮಸ್ಯೆ ಹಿನ್ನೆಲೆ  ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೈಕೆ ಮಾಡಲು ಬಾಲಕಿ ಕೆಲ ದಿನದಿಂದ ಆಸ್ಪತ್ರೆಯಲ್ಲಿದ್ದಳು. ತಾಯಿಯನ್ನು ವಾರ್ಡ್ ಗೆ ಕರೆದೊಯ್ಯುವುದು, ಚಿಕಿತ್ಸೆಗೆ ಕರೆದೊಯ್ಯುವಾಗ ವಾರ್ಡ್ ಬಾಯ್ ಮನೋಜ್ ಎಂಬಾತನ ಪರಿಚಯವಾಗಿದೆ. ವೀಲ್ ಚೇರ್ ತಂದು ಬಾಲಕಿಯ ತಾಯಿಯನ್ನು […]

ಮಂಗಳೂರು ದಸರಾಕ್ಕೆ ನವದುರ್ಗೆಯರು ಹಾಗೂ ಶಾರದಾಮಾತೆಯ ಮೂರ್ತಿಗಳನ್ನು ತಯಾರು ಮಾಡುವವರು ಯಾರು ಗೊತ್ತಾ ?

Wednesday, October 28th, 2020
Kubera

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಸಂಭ್ರಮಕ್ಕೆ ಪೂಜಿಸಲ್ಪಡುವ 12 ಮೂರ್ತಿಗಳನ್ನು ತಯಾರು ಮಾಡುವ ಕಲೆಗಾರರ ಬಗ್ಗೆ ನೀವು ಕೇಳಿರಲಿಕ್ಕಿಲ್ಲ ಗಣಪತಿ, ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾಮಾತೆಯ ಮಣ್ಣಿನ ಗಳನ್ನು ತಯಾರಿಸುವವರು ಶಿವಮೊಗ್ಗದ ಕುಬೇರ ಹಾಗೂ ಅವರ ಬಳಗ. ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಆರಂಭದ ದಿನಗಳಲ್ಲಿ ರಾಜಶೇಖರ್ ಹಾಗೂ ಅವರ ತಂಡದವರು ಮೂರ್ತಿ ರಚನೆ ಮಾಡುತ್ತಿದ್ದರು. ಅದೇ ತಂಡದಲ್ಲಿ ಕಲಾವಿದನಾಗಿ ತನ್ನ 13 ವರ್ಷದ ಪ್ರಾಯದಲ್ಲೇ ಕೆಲಸ ಆರಂಭಿಸಿದ್ದ ಅದ್ಭುತ ಕಲಾವಿದ ಶಿವಮೊಗ್ಗದ ಕುಬೇರ ಹಾಗೂ […]

ಪಿಲಿಕುಳ ಮೃಗಾಲಯದ ವಿಕ್ರಮ್ ಹುಲಿ ಸಾವು

Tuesday, October 27th, 2020
Vikram

ಮಂಗಳೂರು: ಪಿಲಿಕುಳ ಮೃಗಾಲಯದ ಹಳೇ ತಲೆಮಾರಿನ ಹುಲಿ 21 ವರ್ಷ ಪ್ರಾಯದ ಹುಲಿ ವಿಕ್ರಮ್ ನಿನ್ನೆ ಸಾವನ್ನಪ್ಪಿದೆ. ವಿಕ್ರಮ್ ಹುಲಿಯನ್ನು 4 ವರ್ಷದ ಮರಿಯಾಗಿದ್ದ ಸಂದರ್ಭದಲ್ಲಿ 2003ರಲ್ಲಿ ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪ ಸಫಾರಿಯಿಂದ ತರಲಾಗಿತ್ತು. ಈ ಹುಲಿಗೆ 10 ಮರಿಗಳಿವೆ. ಕದಂಬ, ಕೃಷ್ಣ, ವಿನಯ, ಒಲಿವರ್, ಅಕ್ಷಯ, ಮಂಜು, ಅಮರ್, ಅಕ್ಬರ್, ಆಂಟನಿ ಮತ್ತು ನಿಷ ಎಂಬ ಮರಿಗಳಿವೆ‌. ಅವುಗಳನ್ನು ದೇಶದ ವಿವಿಧ ಮೃಗಾಲಯಗಳಾದ ರಾಜಸ್ಥಾನ, ಗುಜರಾತ್, ತೆಲಂಗಾಣ, ಆಂಧ್ರ ಪ್ರದೇಶ, ಮೈಸೂರು ಮೃಗಾಲಯಗಳಿಗೆ ಕಳುಹಿಸಿಕೊಡಲಾಗಿತ್ತು. ಸಂದರ್ಶಕರಿಗೆ ಸುಲಭವಾಗಿ […]

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕೋವಿಡ್ ಸೋಂಕು ದೃಢ

Tuesday, September 1st, 2020
eswarappa

ಶಿವಮೊಗ್ಗ : ಬಿಜೆಪಿ ಮುಖಂಡ  ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಕೋವಿಡ್ ಸೋಂಕು ದೃಢಪಟ್ಟಿರುವುದಾಗಿ ತಮ್ಮ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ. ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ಸಚಿವರ ಮನೆಯ ಸದಸ್ಯರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಚಿವರು ಸೇರಿದಂತೆ ಕುಟುಂಬದ ಸದಸ್ಯರೆಲ್ಲರೂ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಪರೀಕ್ಷಾ ವರದಿಯಲ್ಲಿ ಸಚಿವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಈ ಹಿಂದೆ ನಡೆಸಿದ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದ್ದು ಈ ಬಾರಿ ಪಾಸಿಟಿವ್ ಬಂದಿದೆ ಎನ್ನಲಾಗಿದೆ. ಸಚಿವರು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ […]

ಸೇತುವೆಯಿಂದ ಜಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆ

Friday, August 14th, 2020
Tunga River

ಶಿವಮೊಗ್ಗ: ಇಲ್ಲಿನ ಬೈಪಾಸ್ ರಸ್ತೆಯ ಸೇತುವೆಯಿಂದ ಪ್ರೇಮಿಗಳಿಬ್ಬರು ತುಂಗಾ ನದಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುರುಳಿ ಹಳ್ಳಿ ಗ್ರಾಮದ ಸಂತೋಷ್ (25) ಹಾಗೂ ಕಾಕನಹಸುಡಿ ಗ್ರಾಮದ ಅನುಷಾ (20) ಅವರೇ ಆತ್ಮಹತ್ಯೆಗೆ ಶರಣಾಗಿರುವವರೆಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.  ನಗರದಲ್ಲಿರುವ ವಿಧಾತ್ರಿ ಭವನ ಹೊಟೇಲ್ ನಲ್ಲಿ ಸಂತೋಷ ಕೆಲಸಮಾಡುತ್ತಿದ್ದ. ಅನುಷಾ ಇತ್ತೀಚೆಗಷ್ಟೇ ಪಿ.ಯು. ಶಿಕ್ಷಣವನ್ನು ಮುಗಿಸಿದ್ದಳು. ಇವರಿಬ್ಬರು ಕೆಲವು ಸಮಯಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಂದು ಮಧ್ಯಾಹ್ನದ ಸಮಯದಲ್ಲಿ ಇವರಿಬ್ಬರು ಇದ್ದಕ್ಕಿದ್ದಂತೆಯೇ ತುಂಗಾ ನದಿಗೆ ಹಾರಿದ್ದಾರೆ, ಕೂಡಲೇ […]

ದಕ್ಷಿಣ ಕನ್ನಡ ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ

Thursday, July 30th, 2020
Rajendrakv

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಅಧಿಕಾರ ಹಸ್ತಾಂತರಿಸಿದರು. ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. 2013ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಇವರು ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಯಾಗಿದ್ದು, ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ […]

ಕೊರೋನಾ ನಿಯಮಗಳನ್ನು ಪಾಲಿಸಲು ರಸ್ತೆಯಲ್ಲಿಯೇ ಮದುವೆ ಮಾಡಿಕೊಂಡ ಜೋಡಿ

Wednesday, July 22nd, 2020
ಕೊರೋನಾ ನಿಯಮಗಳನ್ನು ಪಾಲಿಸಲು ರಸ್ತೆಯಲ್ಲಿಯೇ ಮದುವೆ ಮಾಡಿಕೊಂಡ ಜೋಡಿ

ಚಾಮರಾಜನಗರ : ಕೇರಳದ ವರ ಮತ್ತು ಶಿವಮೊಗ್ಗ ಜಿಲ್ಲೆಯ ವಧು ಈ ಜಿಲ್ಲೆಯ ಮೂಲೆಹೋಲ್ ಚೆಕ್ ಪೋಸ್ಟ್ ಬಳಿ  ರಸ್ತೆಯಲ್ಲಿಯೇ ಪರಸ್ಪರ ಹೂಮಾಲೆ ಬದಲಾಯಿಕೊಂಡು ಕೊರೋನಾ ನಿಯಮಗಳನ್ನು ಉಲ್ಲಂಘಿಸದಂತೆ ಮದುವೆ ಮಾಡಿಕೊಂಡರು. ಕೇರಳದೊಂದಿಗೆ ತನ್ನ ಗಡಿಯನ್ನು ಹಂಚಿಕೊಳ್ಳುವ ಚಾಮರಾಜನಗರ ಜಿಲ್ಲೆಯ ಗುಂಡಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಅಭಯಾರಣ್ಯದಲ್ಲಿರುವ ಕರ್ನಾಟಕ ಗಡಿಯ ಮೂಲೆಹೋಲ್‌ನಲ್ಲಿ ಜುಲೈ 21 ರ ಮಂಗಳವಾರ ಈ ಮದುವೆ ನಡೆಯಿತು. ಮಂಗಳವಾರ ಮಧ್ಯಾಹ್ನ, ಇಬ್ಬರು ಹೂಮಾಲೆಗಳನ್ನು ವಿನಿಮಯ ಮಾಡಿಕೊಂಡರು ಮತ್ತು ವರನು ಮಂಗಳಸೂತ್ರವನ್ನು ಹುಡುಗಿಯ ಕುತ್ತಿಗೆಗೆ ಕಟ್ಟಿದನು. ಕರೋನಾ ನಿಯಮವನ್ನು ಉಲ್ಲಂಘಿಸದಿರಲು […]