ನಿರಂತರ ಗೋಹತ್ಯೆ ಆರೋಪ : ಕುದ್ರೋಳಿ ಕಸಾಯಿಖಾನೆ ಮುಚ್ಚಲು ವಿಎಚ್ಪಿ ಆಗ್ರಹ
Monday, October 29th, 2018ಮಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನಿದೆ. ಆದರೆ ಮಂಗಳೂರು ಮಹಾನಗರ ಪಾಲಿಕೆಯ ಅಧೀನದಲ್ಲಿರುವ ಕುದ್ರೋಳಿ ಕಸಾಯಿಖಾನೆಯಲ್ಲಿ ಮನಪಾ ಅಧಿಕಾರಿಗಳ ಅನುಮೋದನೆಯಿಂದಲೇ ಗೋಮಾತೆಯನ್ನು ವಧಿಸಲಾಗುತ್ತಿದೆ. ತಕ್ಷಣ ಕುದ್ರೋಳಿ ಕಸಾಯಿಖಾನೆ ಮುಚ್ಚಬೇಕು ಎಂದು ವಿಶ್ವ ಹಿಂದೂ ಪರಿಷತ್ ರಾಜ್ಯ ಸರ್ಕಾರವನ್ನು ಆಗ್ರಹಿಸುವುದಾಗಿ ವಿಎಚ್ಪಿ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ. ನಗರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆದರೆ ಕುದ್ರೋಳಿ ಕಸಾಯಿಖಾನೆಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಹತ್ಯೆ ಮಾಡಲಾಗುತ್ತಿದೆ. ಅಲ್ಲಿ ನಿರಂತರ ಗೋಹತ್ಯೆ ನಡೆಯುತ್ತಿದೆ. ಪ್ರತಿ ತಿಂಗಳು 350-400 […]