Blog Archive

ಬರಿಗಾಲಲ್ಲಿ ಬೆಟ್ಟ ಹತ್ತಿ ಕೊರೊನಾ ತೊಲಗಿಸಲು ಚಾಮುಂಡಿಯ ಪ್ರಾರ್ಥಿಸಿದ ಶೋಭಾ ಕರಂದ್ಲಾಜೆ

Friday, July 17th, 2020
shobha karandlaje

ಮೈಸೂರು: ಮಹಾಮಾರಿ ಕೊರೊನಾ ತೊಲಗಿಸಲು ಶೋಭಾ ಕರಂದ್ಲಾಜೆ ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿದ್ದಾರೆ. ಆಷಾಢ ಮಾಸದ ಕೊನೆಯ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟ ಹತ್ತಿ, ನಾಡದೇವತೆ ದರ್ಶನ ಪಡೆದಿದ್ದಾರೆ. ಇಡೀ ವಿಶ್ವ ವ್ಯಾಪಿ ಕೊರೊನಾ ತಾಂಡವವಾಡುತ್ತಿದ್ದು, ಅತೀ ಶೀಘ್ರವೇ ಮಹಾಮಾರಿ ತೊಲಗಲಿ, ನಾಡಿನ ಜನತೆಗೆ ಆರೋಗ್ಯ, ಸುಖ ಶಾಂತಿ ಲಭಿಸಲಿ ಎಂದು ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಆಷಾಢ ಮಾಸದಲ್ಲಿ ಪ್ರತಿ ವರ್ಷ ಅವರು ಬೆಟ್ಟವನ್ನು ಬರಿಗಾಲಿನಲ್ಲಿ ಹತ್ತುವ ವಾಡಿಕೆ ಇದ್ದು, ಈ ವರ್ಷವು ಅದನ್ನು ಪೂರ್ಣಗೊಳಿಸಿದ್ದಾರೆ‌. […]

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ : ಸಂಸದೆ ಶೋಭಾ ಕರಂದ್ಲಾಜೆ

Saturday, February 8th, 2020
shobha

ಚಿಕ್ಕಮಗಳೂರು : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು. ಶನಿವಾರ ನಗರಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಅಶಾಂತಿ ಸೃಷ್ಟಿಸಿ ಕೇಂದ್ರ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದರು. ದೆಹಲಿ ಶಾಹಿನ್ ಬಾಗ್ ನಲ್ಲಿ ನಡೆಯುತ್ತಿರುವಪೌರತ್ವ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ಹೋರಾಟಕ್ಕೆ ಜನರನ್ನು ಹಣ ಕೊಟ್ಟು ಕರೆ ತಂದಿದ್ದಾರೆ ಎಂದರು. ಜಿಲ್ಲೆಯಲ್ಲಿ ಕರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮ […]

ಸಿದ್ದರಾಮಯ್ಯ ಮಾನಸಿಕ ಸ್ಥಿಮಿತವನ್ನೂ ಕಳೆದುಕೊಂಡಿದ್ದಾರೆ : ಶೋಭಾ ಕರಂದ್ಲಾಜೆ

Wednesday, October 30th, 2019
Shobha

ಉಡುಪಿ : ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಅಧಿಕಾರ ಕಳೆದುಕೊಂಡ ನಂತರ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತವನ್ನೂ ಕಳೆದುಕೊಂಡಿದ್ದಾರೆ. ಕಾಂಗ್ರೆಸನ್ನು ಬ್ಲ್ಯಾಕ್‍ಮೇಲ್ ಮಾಡಿ ವಿಪಕ್ಷದ ನಾಯಕರಾಗಿದರು. ಕಾಂಗ್ರೆಸ್ ಪಕ್ಷದ ಮೇಲೆ ಸಿದ್ದರಾಮಯ್ಯಗೆ ಯಾವುದೇ ಹಿಡಿತ ಇಲ್ಲ. ಕಾಂಗ್ರೆಸ್ ಬಣಗಳಾಗಿ ಒಡೆದಿದೆ. ಸಿದ್ದರಾಮಯ್ಯ ಬಣ, ಪರಮೇಶ್ವರ್ ಬಣ, ಡಿಕೆಶಿದ್ದು ಹೀಗೆ ಬೇರೆ ಬೇರೆ ಬಣಗಳನ್ನು ನಿಭಾಯಿಸಲಾಗದೆ. ಬಾಯಿಗೆ ಬಂದದ್ದು […]

ತುಂಬಿ ಹರಿದ ಭದ್ರಾ ನದಿಗೆ ಬಾಗಿನ ಅರ್ಪಣೆ

Saturday, September 7th, 2019
shakuntala

ತರೀಕೆರೆ : ನೀರಿಲ್ಲದೆ ಮಾನವನ ಬದುಕೇ ಇಲ್ಲ. ಕೆಲವಡೆ ಅತಿವೃಷ್ಟಿ ಮತ್ತೆ ಕೆಲವೆಡೆ ಅನಾವೃಷ್ಟಿ ಕಾಡುತ್ತಿದೆ. ನೀರಿನ ಸದ್ಬಳಕೆ ಮಾಡಬೇಕು. ನೀರನ್ನು ಪೋಲು ಮಾಡಬಾರದು ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು. ಭದ್ರಾ ಜಲಾಶಯ ತುಂಬಿದ ಹಿನ್ನೆಲೆಯಲ್ಲಿ ಭದ್ರಾ ನದಿಗೆ ಗಂಗಾ ಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದ ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಪ್ರಕೃತಿ ವೈಪರೀತ್ಯದಿಂದಾಗಿ ಅನಾಹುತಗಳು ಸಂಭವಿಸಿವೆ. ಪ್ರಕೃತಿ ಮೇಲೆ ಮಾನವನಿಂದಾಗಿರುವ ತಪ್ಪುಗಳೇ ಇದಕ್ಕೆ ಕಾರಣ. ಪ್ರಕೃತಿ ನಮ್ಮ ನಿಯಂತ್ರಣದಲ್ಲಿಲ್ಲ. ಪ್ರಕೃತಿಯ ಮೇಲೆ […]

ಉಡುಪಿ : ಶೋಭಾ ಕರಂದ್ಲಾಜೆ 3,49,599 ಮತಗಳ ಅಂತರದಿಂದ ಗೆಲುವು

Thursday, May 23rd, 2019
Shobha

ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಎರಡನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಪ್ರಮೋದ್ ಮಧ್ವರಾಜ್ ಅವರನ್ನು 3,49,599 ಮತಗಳ ಅಂತರದಿಂದ ಸೋಲಿಸಿದ್ದಾರೆ. ಪಕ್ಷದ ಟಿಕೆಟ್ ಹಂಚುವ ಮೊದಲೇ ಸ್ವಪಕ್ಷೀಯದವರಿಂದಲೇ ಗೋ ಬ್ಯಾಕ್ ಶೋಭಾ ಎಂಬ ಅಭಿಯಾನ ಆರಂಭಿಸಿ ತೀವ್ರ ಮುಖಭಂಗ ಅನುಭವಿಸಿದ್ದ ಶೋಭಾ ಇದೀಗ ಮೋದಿ ಅಲೆಯಲ್ಲಿ ಮತ್ತೆ ಗೆದ್ದು ವಿಜಯದ ನಗುಬೀರಿದ್ದಾರೆ. ಮೋದಿ ಅಲೆ ಮುಂದೆ ಕಾಂಗ್ರೆಸ್‌ – ಜೆಡಿಎಸ್ ನ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಸೋಲನ್ನಪ್ಪಿದ್ದಾರೆ. ಶೋಭಾ […]

ಉಡುಪಿ ಚಿಕ್ಕಮಗಳೂರು – ಶೋಭಾ ಕರಂದ್ಲಾಜೆಗೆ 1,18,339 ಸಾವಿರ ಮತಗಳ ಮುನ್ನಡೆ

Thursday, May 23rd, 2019
Shobha

ಉಡುಪಿ : ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭೆ ಚುನಾವಣೆಯಲ್ಲಿ ಪ್ರಮೋದ್ ಮಧ್ವರಾಜ್ ವಿರುದ್ಧ ಶೋಭಾ ಕರಂದ್ಲಾಜೆಗೆ  1,18,339 ಸಾವಿರ ಮತಗಳ  ಅಂತರದಿಂದ ಮುನ್ನಡೆ  ಯಲ್ಲಿದ್ದಾರೆ  .  ಶೋಭಾ ಕರಂದ್ಲಾಜೆಗೆ 234451 ಮತಗಳು . ಪ್ರಮೋದ್ ಮಧ್ವರಾಜ್ಗೆ 116112 ಮತಗಳು. Karnataka-Udupi Chikmagalur Results O.S.N. Candidate Party EVM Votes Postal Votes Total Votes % of Votes 1 SHOBHA KARANDLAJE BJP 234451 0 234451 63.08 2 MAGGALAMAKKI GANESHA IND 1265 0 1265 […]

ಜಾರಕಿಹೊಳಿ ಯಾವಾಗ ಪಕ್ಷಕ್ಕೆ ರಾಜೀನಾಮೆ ಕೊಡುತ್ತಾರೋ ಆಗ ಮಾತ್ರ ಮಾತುಕತೆ: ಶೋಭಾ ಕರಂದ್ಲಾಜೆ

Monday, December 24th, 2018
shobha-karandlaje

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಯಾವೊಬ್ಬ ಶಾಸಕರಾದರೂ ತಮ್ಮ ಪಕ್ಷ ತೊರೆದರೆ ಮಾತ್ರ ಅವರೊಂದಿಗೆ ಮಾತುಕತೆ ನಡೆಸುತ್ತೇವೆ ಎಂದು ಎಂದು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾವು ಮಾಜಿ ಸಚಿವ ರಮೇಶ್ ಕುಮಾರ್ ಅವರನ್ನು ಸಂಪರ್ಕಿಸಿಲ್ಲ, ಪಕ್ಷಕ್ಕೆ ಆಹ್ವಾನವನ್ನೂನೀಡಿಲ್ಲ, ಯಾವಾಗ ಅವರು ತಮ್ಮ ಪಕ್ಷಕ್ಕೆ ರಾಜೀನಾಮೆ ಕೊಡುತ್ತಾರೋ ಆಗ ಮಾತ್ರ ನಾವು ಮಾತನಾಡಿಸುತ್ತೇವೆ ಎಂದರು. ರಮೇಶ್ ಜಾರಕಿಹೊಳಿ ನೋವಿನ ಮಾತುಗಳು ಕಾಂಗ್ರೆಸ್ ಆಂತರಿಕ ಭಾವನೆ. ಕಾಂಗ್ರೆಸ್ – ಜೆಡಿಎಸ್ […]

ಅಯ್ಯಪ್ಪ ಸ್ವಾಮಿ ಭಕ್ತರ ಮೇಲೆ ಕೇರಳ ಸರ್ಕಾರ ದೌರ್ಜನ್ಯ ನಡೆಸುತ್ತಿದೆ: ಶೋಭಾ ಕರಂದ್ಲಾಜೆ

Wednesday, November 21st, 2018
shobha-karandlaje

ಬೆಂಗಳೂರು: ಅಯ್ಯಪ್ಪ ಸ್ವಾಮಿ ಭಕ್ತರ ಮೇಲೆ ಕೇರಳ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮೌರ್ಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಧರಣಿ ನಡೆಸಿದರು. ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಅಯ್ಯಪ್ಪ ಭಕ್ತರು ಇಂದು ಸಂಕಷ್ಟದಲ್ಲಿ ಇದ್ದಾರೆ, ದೇವಸ್ಥಾನದಲ್ಲಿ ಇರಬೇಕಾದ ಭಕ್ತರು ಪೋಲಿಸ್ ಸ್ಟೇಷನ್ನಲ್ಲಿ ಇದ್ದಾರೆ, ಪೋಲಿಸ್ ಸ್ಟೇಷನ್ ಇರಬೇಕಾದ ಪೋಲಿಸರು ಅಯ್ಯಪ್ಪ ದೇವಸ್ಥಾನದಲ್ಲಿ ಇದ್ದಾರೆ ಎಂದು ಟೀಕಿಸಿದರು. ಕೇರಳದ ಕಮ್ಯುನಿಸ್ಟ್ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಕೇಸ್ ನಡೆಯಬೇಕಾದರೆ ಮೌನವಹಿಸಿತು ಇದರ […]

ರಾಹುಲ್ ಗಾಂಧಿ ಕೂಡಲೇ ದೇಶದ ಜನತೆಯ ಕ್ಷಮೆ ಯಾಚಿಸಬೇಕು: ಶೋಭಾ ಕರಂದ್ಲಾಜೆ

Friday, September 21st, 2018
shobha-karandlaje

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಳ್ಳ ಎಂದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡಲೇ ದೇಶದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸ ಧವಳಗಿರಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರಿಗೆ ರಾಹುಲ್ ಗಾಂಧಿ ಕಳ್ಳ ಎಂದು ಕರೆದಿರುವುದು ಕಾಂಗ್ರೆಸ್ ‌ಪಕ್ಷಕ್ಕೆ ಶೋಭೆ ತರುವುದಿಲ್ಲ. ಈ ಹಿಂದಿನ ಯಾವ ಕಾಂಗ್ರೆಸ್ ಅಧ್ಯಕ್ಷರು ಈ ರೀತಿ ನಡೆದುಕೊಂಡಿರಲಿಲ್ಲ. ಆದ್ರೆ ರಾಹುಲ್ ಗಾಂಧಿ ಬಚ್ಚಾ ರೀತಿ ವರ್ತಿಸಿ […]

ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಶೋಭಾ ಕರದ್ಲಾಂಜೆ

Friday, July 27th, 2018
shobha-karandlaje

ಮೈಸೂರು : ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಸಂಸದೆ ಶೋಭಾ ಕರದ್ಲಾಂಜೆ ಹೇಳಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ನಗುತ್ತಲೇ ಹೇಳಿಕೆ ನೀಡುವ ಮೂಲಕ ಎಲ್ಲ ಅಚ್ಚರಿಗೆ ಕಾರಣವಾಗಿದ್ದಾರೆ. ಆಶಾಢ ಮಾಸದ ಎರಡನೇ ಶುಕ್ರವಾರವಾದ ಇಂದು ಸಂಸಸೆ ಶೋಭಾ ಕರಂದ್ಲಾಜೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ನಡೆದುಕೊಂಡೇ ಮೆಟ್ಟಿಲು ಏರಿದ ಅವರು, ಇದಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿ ಈ ಸ್ಫೋಟಕ ವಿಷಯ ಹೊರಗಡೆವಿ ಅಚ್ಚರಿಗೆ ಕಾರಣವಾದರು. ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯನ್ನು ಸರ್ವೇ […]