Blog Archive

ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ಅವರು ದಾಳಿ ನಡೆಸಿದ್ದು ರಾಜಕೀಯ ಆಗಿತ್ತಾ: ಶೋಭಾ ಕರಂದ್ಲಾಜೆ

Thursday, June 21st, 2018
shobha-karandlaje

ಚಿಕ್ಕಮಗಳೂರು: ದೇಶದ ಎಲ್ಲ ರಾಜ್ಯಗಳಲ್ಲಿರುವ ಹಲವಾರು ಸರ್ಕಾರಿ ಸಂಸ್ಥೆಗಳು ಸ್ವಯಂ ಪ್ರೇರಿತವಾಗಿ ಅವರವರ ಕೆಲಸ ನೋಡಿಕೊಂಡು ತೆರಿಗೆ ದಾಳಿ ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹಲವಾರು ದಾಳಿ ನಡೆಸುತ್ತಾರೆ. ಕರ್ನಾಟಕದಲ್ಲಿ ಮಾತ್ರ ಅಲ್ಲವೆಂದು ಸಚಿವ ಡಿ ಕೆ ಶಿವಕುಮಾರ್‌ ವಿರುದ್ಧ ಪ್ರಕರಣ ಕುರಿತು ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದರು. ನಗರದಲ್ಲಿ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಮಾಡಿದ ಅವರು, ದೇಶದಲ್ಲಿ 70 ವರ್ಷಗಳಿಂದ ತನಿಖಾ ವ್ಯವಸ್ಥೆ ನಡೆದುಕೊಂಡು ಬಂದಿದೆ. ಆದ್ರೆ ಕಾಂಗ್ರೆಸ್ ಮುಖಂಡರು ಸಚಿವ […]

ದನಕಳವು ಮಾಡುವ ವ್ಯಕ್ತಿ ಸಾವು… ಬಿಜೆಪಿ, ಸಂಘಪರಿವಾರದ ತಲೆಗೆ ಕಟ್ಟುವ ಯತ್ನ :ಶೋಭಾ ಕರಂದ್ಲಾಜೆ

Thursday, June 7th, 2018
shobha-karandlaje

ಬೆಂಗಳೂರು: ದನಗಳ ಕಳವು ಮಾಡುತ್ತಿದ್ದ ವೇಳೆ ಹಿಡಿದುಕೊಟ್ಟ ವ್ಯಕ್ತಿ ಪೊಲೀಸ್ ಜೀಪಿನಲ್ಲೇ ಸಾವನ್ನಪ್ಪಿದ್ದರೂ ಅದನ್ನು ಬಿಜೆಪಿ ಹಾಗೂ ಸಂಘ ಪರಿವಾರದ ತಲೆಗೆ ಕಟ್ಟುವ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಉಡುಪಿ, ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ದನಗಳ ಕಳವು ನಡೆಯುತ್ತಿದೆ.ಸ್ಕಾರ್ಪಿಯೋ ಒಂದು ಪ್ರತಿ‌ದಿನ ರಾತ್ರಿ ಸಂಚರಿಸುತ್ತಿದ್ದು ದನ ಕಳವು ಮಾಡುತ್ತಿದೆ ಎನ್ನುವ ಮಾಹಿತಿಯನ್ನು ನಮ್ಮ ಕಾರ್ಯಕರ್ತರು ಪೊಲೀಸರಿಗೆ ನೀಡಿದ್ದರು. ಅದರಂತೆ ಮಧ್ಯರಾತ್ರಿ ಪೊಲೀಸ್ […]

‘ಪೇಜಾವರ ಶ್ರೀ ಟಿವಿ ನೋಡಲ್ಲ, ಹಾಗಾಗಿ ಮೋದಿ ಅಭಿವೃದ್ಧಿ ಬಗ್ಗೆ ಗೊತ್ತಿಲ್ಲ’: ಶೋಭಾ ಕರಂದ್ಲಾಜೆ

Wednesday, June 6th, 2018
shobha-karandlaje

ಮಂಗಳೂರು: ಪೇಜಾವರ ಸ್ವಾಮೀಜಿಯವರು ಸನ್ಯಾಸಿಗಳು. ಅವರು ಹೆಚ್ಚಾಗಿ ಟಿವಿ ನೋಡೋದಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳು ಹಾಗೂ ಸಾಧನೆಗಳ ಬಗ್ಗೆ ಅವರಿಗೆ ಅರಿವಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ನಿರೀಕ್ಷಿತ ಮಟ್ಟದ ಸಾಧನೆ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರಕಾರ ದಾಖಲೆ ಪ್ರಮಾಣದ ಸಾಧನೆಗಳನ್ನು ಮಾಡಿದೆ. ಅಂತರಾಷ್ಟ್ರೀಯ […]

ಸಂಘ ಪರಿವಾರದ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ: ಶೋಭಾ ಕರಂದ್ಲಾಜೆ

Tuesday, June 5th, 2018
shobha-karandlaje-MP

ಮಂಗಳೂರು: ಉಡುಪಿ ಪೆರ್ಡೂರಿನ ದನದ ವ್ಯಾಪಾರಿ ಹುಸೇನಬ್ಬ ಸಾವು ಪ್ರಕರಣದಲ್ಲಿ ಸಂಘಪರಿವಾರದ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಶೋಭಾ, ಗೋಸಾಗಾಟ ಸಂದರ್ಭದಲ್ಲಿ ಸಂಘಪರಿವಾರ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವಾಹನ ಅಡ್ಡಗಟ್ಟಿದ ಸಂದರ್ಭದಲ್ಲಿ ದನಸಾಗಾಟದ ವಾಹನ ರಿವರ್ಸ್ ಹೋಗಿ ಅಪಘಾತ ಸಂಭವಿಸಿದೆ. ಈ ಸಂದರ್ಭದಲ್ಲಿ ಸೆರೆಸಿಕ್ಕ ಹುಸೇನಬ್ಬ ಪೊಲೀಸ್ ಜೀಪಿನಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಸಂಘಪರಿವಾರದ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ. […]

ರಾಜ್ಯದ ಮೈತ್ರಿ ಸರ್ಕಾರದಲ್ಲಿ ಕಿತ್ತಾಟ ಮುಖ್ಯಮಂತ್ರಿ ಜನರ ಬಳಿ ಕ್ಷಮೆ ಕೇಳಬೇಕು : ಶೋಭಾ ಕರಂದ್ಲಾಜೆ

Wednesday, May 30th, 2018
shobha-karandlaje

ಚಿಕ್ಕಮಗಳೂರು: ಹಾಲು ಕೊಡುವ ಹಸು ಯಾರಿಗೆ ಸೇರಬೇಕೆಂದು ರಾಜ್ಯದ ಮೈತ್ರಿ ಸರ್ಕಾರದಲ್ಲಿ ಕಿತ್ತಾಟ ನಡೆಯುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಖಾತೆಗಳಿಗಾಗಿ ಹಗ್ಗ-ಜಗ್ಗಾಟ ನಡೆಸ್ತಿರೋ ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ಮುಖ್ಯಮಂತ್ರಿಯಂದ್ರೆ ಓರ್ವ ದೊರೆಯ ಜಾಗ. ಅಂತಹ ಜಾಗದಲ್ಲಿರೋ ಮುಖ್ಯಮಂತ್ರಿ ನಾನು ನಾಡಿನ ಜನರ ಮುಲಾಜಿನಲ್ಲಿ ಇಲ್ಲ, ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ ಎಂದಿರೋದು ರಾಜ್ಯದ ಜನತೆಗೆ ಮಾಡಿರೋ ಅಪಮಾನ. ಕೂಡಲೇ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ಸಿಗೆ ಎಲ್ಲಾ ಇಲಾಖೆಯಲ್ಲಿ ಭ್ರಷ್ಟಾಚಾರ ಮಾಡಿ ಅಭ್ಯಾಸವಾಗಿದೆ. ಅದೇ […]

ಕಾಂಗ್ರೆಸ್ ಗೆ ನಾಳೆ ಸದನವನ್ನು ಎದುರಿಸುವ ಧೈರ್ಯವಿಲ್ಲ: ಶೋಭಾ ಕರಂದ್ಲಾಜೆ

Friday, May 18th, 2018
shobha-karandlaje

ಬೆಂಗಳೂರು: ಕಾಂಗ್ರೆಸ್ ಗೆ ಸದನ ಎದುರಿಸುವ ಧೈರ್ಯವಿಲ್ಲ. ಕಾಂಗ್ರೆಸ್ ನ ಶಾಸಕರು ಹತಾಶರಾಗಿದ್ದಾರೆ. ಭಯಗೊಂಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಮುಖಂಡರು ಹಂಗಾಮಿ ಸ್ಪೀಕರ್ ಆಗಿ ಕೆ.ಜಿ. ಬೋಪಯ್ಯ ಅವರ ನೇಮಕವನ್ನು ವಿರೋಧಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ. ಹಂಗಾಮಿ ಸ್ಪೀಕರ್ ಆಗಿ ಕೆ.ಜಿ. ಬೋಪಯ್ಯ ನೇಮಕಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೋಪಯ್ಯ ಅವರು 4ನೇ ಬಾರಿ ಆಯ್ಕೆಯಾಗಿದ್ದಾರೆ. ಸ್ಪೀಕರ್ ಆಗಿ ಕೆಲಸ ಮಾಡಿದ ಅನುಭವವಿದೆ. ಹಿಂದೆ ವಿಧಾನಸಭೆಯ […]

ಇನ್ನ ಎರಡು ಮೂರು ದಿನದಲ್ಲಿ ಯಡಿಯೂರಪ್ಪ ಬಹುಮತ ಸಾಬೀತು ಪಡಿಸ್ತಾರೆ: ಶೋಭಾ ಕರಂದ್ಲಾಜೆ

Thursday, May 17th, 2018
shobha-karandlaje

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಬಹುದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಇದ್ರಿಂದ ಬೇರೆ ಪಕ್ಷಗಳು ರೆಸಾರ್ಟ್‌ ರಾಜಕಾರಣ ಮಾಡ್ತಿದಾರೆ. ಜೆಡಿಎಸ್‌ನಲ್ಲಿ ಬಂಡಾಯ ಎದ್ದವರನ್ನು ಪಕ್ಷಕ್ಕೆ ಮತ್ತೆ ಸೇರಿಸಿಕೊಂಡಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಈಗಲಾದ್ರು ಬುದ್ಧಿ ಬರಬೇಕಿತ್ತು. ಸಿದ್ದರಾಮಯ್ಯರದು ದುರಾಂಕಾರ, ಜಾತಿ , ಷಡ್ಯಂತ್ರದ ರಾಜಕಾರಣ. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸದಂತೆ ಕುತಂತ್ರ ನಡೆಸಿದ್ರು. ಆದರೆ ಯಾರು ಏನೇ ಮಾಡಿದ್ರು ಇನ್ನ ಎರಡು ಮೂರು ದಿನದಲ್ಲಿ ಯಡಿಯೂರಪ್ಪ ಬಹುಮತ […]

ಉಡುಪಿಯ ಕೃಷ್ಣಮಠದಲ್ಲಿ ಪ್ರಧಾನಿಗೆ ಭದ್ರತೆ ಇಲ್ಲ ಎಂದರೆ ಶ್ರೀಕೃಷ್ಣನನ್ನೇ ಅವಮಾನಿಸಿದಂತೆ: ಮಧ್ವರಾಜ್

Thursday, May 3rd, 2018
pramod-madhwaraj

ಉಡುಪಿ: ಉಡುಪಿಯ ಕೃಷ್ಣಮಠದಲ್ಲಿ ಪ್ರಧಾನಿಗೆ ಭದ್ರತೆ ಇಲ್ಲ ಎಂದರೆ ಶ್ರೀಕೃಷ್ಣನನ್ನೇ ಅವಮಾನಿಸಿದಂತೆ. ಇದು ಉಡುಪಿ ಜಿಲ್ಲೆಯ ಜನತೆಗೂ ಮಾಡಿದ ಅವಮಾನ ಎಂದು ರಾಜ್ಯ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಅವರು ಸಂಸದೆ ಶೋಭಾಗೆ ಟಾಂಗ್ ನೀಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಪ್ರಮೋದ್ ಮಧ್ವರಾಜ್, ಭದ್ರತಾ ಕೊರತೆ ಹಿನ್ನೆಲೆ‌ಯಲ್ಲಿ ಪ್ರಧಾನಿ ಮೋದಿಯವರ ಕೃಷ್ಣಮಠ ಭೇಟಿ ರದ್ದಾಗಿದೆ ಎಂದು ಹೇಳಿಕೆ ನೀಡಿದ್ದ ಶೋಭಾ ಕರಂದ್ಲಾಜೆ ಅವರಿಗೆ ಟಾಂಗ್ ನೀಡಿದರು. ಕಾನೂನು‌‌ ಸುವ್ಯವಸ್ಥೆಯಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ನಂಬರ್ ವನ್ ಆಗಿದೆ. ಇದರ […]

ಸುಳ್ಳು ಹೇಳೊದರಲ್ಲಿ ಕಾಂಗ್ರೆಸಿಗರು ನಿಸ್ಸೀಮರು: ಶೋಭಾ

Wednesday, March 7th, 2018
shobha-karandlaje

ಕಾಪು: ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು. ಚುನಾವಣೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಗಳನ್ನು ಮಾಡಲಾಗುತ್ತಿದೆ. ಇದು ಪಿತೂರಿ. ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕಾಪುವಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ, ಯೋಗಿ ಆದಿತ್ಯನಾಥರ ವಿರುದ್ಧವೂ ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಯೋಗಿ ಉತ್ತರ ಪ್ರದೇಶದಲ್ಲಿ ದರೋಡೆಕೋರರು ಹಾಗೂ ಕ್ರಿಮಿನಲ್‌ಗಳ ಹೆಡೆಮುರಿ ಕಟ್ಟಿದ್ದಾರೆ. ಆದರೆ ರಾಜ್ಯದಲ್ಲಿ ಕೆಎಫ್‌ಡಿ ಹಾಗೂ ಪಿಎಫ್‌ಐ ಕಾರ್ಯಕರ್ತರನ್ನು ಬಿಡುಗಡೆ ಮಾಡಲಾಗುತ್ತದೆ. ಇದೇ […]

ಕಾಂಗ್ರೆಸ್‌ನದ್ದು ರಾಜಕೀಯದ ಭಕ್ತಿ, ಹಿಂದುತ್ವ

Wednesday, January 24th, 2018
udupi-BJP

ಉಡುಪಿ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಚುನಾವಣೆ ಮತ್ತು ರಾಜಕೀಯ ಉದ್ದೇಶದಿಂದ ಮಾಡುತ್ತಿರುವ ಹಿಂದುತ್ವ ಮತ್ತು ದೇವರ ಮೇಲಿನ ಭಕ್ತಿಗೆ ಗುಜರಾತ್‌ನ ಜನ ಪಾಠ ಕಲಿಸಿದ್ದಾರೆ. ಕರ್ನಾಟಕ ದಲ್ಲಿಯೂ ಇದೇ ರೀತಿಯಾಗಲಿದೆ ಎಂದು ಕೇಂದ್ರ ಸಚಿವ, ಕರ್ನಾಟಕ ಬಿಜೆಪಿಯ ಚುನಾವಣಾ ಸಂಚಾಲಕ ಪ್ರಕಾಶ್‌ ಜಾಬ್ಡೇಕರ್‌ ಹೇಳಿದರು. ಜ.23ರಂದು ಉಡುಪಿಯಲ್ಲಿ ಬಿಜೆಪಿ ಪ್ರಮುಖರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಹುಲ್‌ಗಾಂಧಿ ಅವರಿಗೆ ಈಗ ಹಿಂದುತ್ವದ ಮೇಲೆ ಪ್ರೀತಿ, ಭಕ್ತಿ ಮೂಡಿದೆ. ಅವರ ಹೇಳಿಕೆಯ ಅನಂತರ ಸಿದ್ದರಾಮಯ್ಯ ಕೂಡ ತಾನೂ ಓರ್ವ […]