Blog Archive

ಸಂಸದ ಸ್ಥಾನಕ್ಕೆ ಯಡಿಯೂರಪ್ಪ, ಶ್ರೀರಾಮುಲು ರಾಜೀನಾಮೆ

Saturday, May 19th, 2018
yeddi-shrii

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಕಾರಣ ತಮ್ಮ ಲೋಕಸಭಾ ಸದಸ್ಯತ್ವಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಹಾಗೆಯೇ ಶ್ರೀರಾಮುಲು ಅವರು ಸಹ ರಾಜೀನಾಮೆ ನೀಡಿದ್ದಾರೆ. 2014 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕ್ರಮವಾಗಿ ಶಿವಮೊಗ್ಗ ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿದ್ದ ಬಿ ಎಸ್ ಯಡಿಯೂರಪ್ಪ ಮತ್ತು ಶ್ರೀರಾಮುಲು ಅವರ ರಾಜೀನಾಮೆಯನ್ನು ಸ್ಪೀಕರ್ ಅನುಮೋದಿಸಿದ್ದಾರೆ. ಮೇ 12 ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ […]

ಹತಾಶೆಯಲ್ಲಿ ಕಾಂಗ್ರೆಸ್ಸಿಗರು… ಬಿಜೆಪಿಗೆ ಬಹುಮತ ಸಿಗುವುದು ಖಚಿತ: ಶ್ರೀರಾಮುಲು

Saturday, May 19th, 2018
shri-ramulu

ಬೆಂಗಳೂರು: ಸೋಲುವ ಹತಾಶೆಯಲ್ಲಿ ಕಾಂಗ್ರೆಸ್ಸಿಗರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇಂದು ಸಂಜೆ ಸ್ಪಷ್ಟ ಬಹುಮತ ಸಾಬೀತುಪಡಿಸಿ, ಸರ್ಕಾರವನ್ನು ರಚಿಸಲಿದ್ದೇವೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಭರವಸೆ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ಕ್ಷಣಗಣನೆ ಆರಂಭವಾಗಿರುವ ಮಧ್ಯೆ ಟ್ವೀಟ್ ಮಾಡಿರುವ ಶ್ರೀರಾಮುಲು, ಬಹುಮತ ಸಾಬೀತು ಪಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೋಲುವ ಹತಾಶೆಯಲ್ಲಿ ಕಾಂಗ್ರೆಸ್ಸಿಗರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ.ಇಂದು ಸಂಜೆ ಬಿಜೆಪಿಗೆ ಸ್ಪಷ್ಟ ಬಹುಮತ ಸಾಬೀತು ಆಗಲಿದೆ ಮತ್ತು ಸರ್ಕಾರವನ್ನು ರಚಿಸಲಿದ್ದೇವೆ ಆ ಮೂಲಕ ಕರ್ನಾಟಕವನ್ನು ಅಭಿವೃದ್ಧಿಯ ಪಥದಲ್ಲಿ ಒಯ್ಯಲಿದ್ದೇವೆ. […]

ದೇವರ, ರೈತರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಿಎಸ್‌ವೈ

Thursday, May 17th, 2018
yedeyurappa

ಬೆಂಗಳೂರು: ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ದೇವರ ಮತ್ತು ರೈತರ ಹೆಸರಲ್ಲಿ ಬಿಎಸ್‌ವೈ ಪದಗ್ರಹಣ ಮಾಡಿದರು. ರಾಜ್ಯಪಾಲ ವಜುಭಾಯ್ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಜಗದೀಶ್ ಶೆಟ್ಟರ್, ಈಶ್ವರಪ್ಪ, ಶ್ರೀರಾಮುಲು, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಮುಖ್ಯಮಂತ್ರಿಯಾಗಿ ಬಿಎಸ್‌ವೈ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತು.

ಶ್ರೀರಾಮುಲು ವಿರುದ್ಧ ಪ್ರಚಾರ ಮಾಡ್ತಿಲ್ಲ… ಸುದೀಪ್ ಸ್ಟಷ್ಟನೆ

Saturday, May 5th, 2018
sriramulu

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಚಿತ್ರನಟ-ನಟಿಯರು ಪ್ರಚಾರ ಕಾರ್ಯದಲ್ಲಿ ಭಾಗವಹಿಸೋದ್ರಲ್ಲಿ ಸಖತ್ ಬ್ಯುಸಿಯಾಗಿರ್ತಾರೆ. ಸುದೀಪ್, ಯಶ್ ಸೇರಿದಂತೆ ಅನೇಕರು ಈಗಾಗಲೇ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ, ಬದಾಮಿಯ ಪ್ರಚಾರದ ಬಗ್ಗೆ ಒಂದಷ್ಟು ಗೊಂದಲಗಳು ಹರಿದಾಡುತ್ತಿದ್ದವು. ಬದಾಮಿಯಲ್ಲಿ ಸುದೀಪ್ ಸಿಎಂ ಸಿದ್ಧರಾಮಯ್ಯ ಪರ ಪ್ರಚಾರಕ್ಕೆ ಬರ್ತಾರೆ ಎನ್ನುವ ಮಾತು ಕೇಳಿ ಬರುತ್ತಿತ್ತು. ಇದಕ್ಕೆ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ಶ್ರೀರಾಮುಲು ಬೆಂಬಲಿಗರು ಮತ್ತು ವಾಲ್ಮೀಕಿ ಜನಾಂಗದವರು ಸಿಎಂ ಪರ ಸುದೀಪ್ ಪ್ರಚಾರವನ್ನು ವಿರೋಧಿಸಿದ್ದರು. ಇದಕ್ಕೆ ಸುದೀಪ್ ಪ್ರತಿಕ್ರಿಯೆ ನೀಡಿದ್ದು ತಾನು ಶ್ರೀರಾಮುಲು […]

ಪ್ರಮಾಣವಚನ ಸ್ವೀಕರಿಸಿದ ಬಳಿಕ ರೈತರ ಸಾಲಮನ್ನಾ: ಬಿಎಸ್‌ವೈ

Wednesday, May 2nd, 2018
yedeyurappa

ಶಿವಮೊಗ್ಗ: ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ನಿರ್ಧಾರವಾಗಿ ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕ್‌‌ಗಳಲ್ಲಿನ ಬೆಳೆ ಸಾಲಮನ್ನಾ ಮಾಡುತ್ತೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು. ಪ್ರೆಸ್ ಟ್ರಸ್ಟ್‌ನಲ್ಲಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನೀರಾವರಿಗೆ ನಮ್ಮ ಸರ್ಕಾರ ವಿಶೇಷ ಆದ್ಯತೆ ನೀಡಲಿದ್ದು, 1 ಲಕ್ಷ ಕೋಟಿ ರೂ. ಹಣ ನಿಗದಿ ಮಾಡುತ್ತೇವೆ ಎಂದರು. ಬಿಜೆಪಿ ಪ್ರಣಾಳಿಕೆಯನ್ನು ಮೇ4 ರಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಗುವುದು. ಪ್ರಣಾಳಿಕೆ ಬಿಡುಗಡೆಯಾದ ಮೇಲೆ ಕನಿಷ್ಠ ಶೇ.3 ರಷ್ಟು ಬಿಜೆಪಿ […]

ಶ್ರೀರಾಮುಲು ನಾಮಪತ್ರ ಸಲ್ಲಿಕೆ… ಎಂಪಿ ಸಿಎಂ, ಬಿಎಸ್‌ವೈ, ಜನಾರ್ದನ ರೆಡ್ಡಿ ಸಾಥ್‌

Saturday, April 21st, 2018
shri-ramalu

ಚಿತ್ರದುರ್ಗ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಬಿಜೆಜೆ ಅಭ್ಯರ್ಥಿ ಬಿ.ಶ್ರೀರಾಮುಲು ಇಂದು ನಾಮಪತ್ರ ಸಲ್ಲಿಸಿದರು. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಇತ್ತೀಚೆಗೆ ಪಕ್ಷ ಸೇರಿರುವ ಎನ್.ವೈ.ಗೋಪಾಲಕೃಷ್ಣ ಉಪಸ್ಥಿತರಿದ್ದು ಗಮನ ಸೆಳೆದರು. ಸ್ನೇಹಿತ ಶ್ರೀರಾಮುಲುಗೆ ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್ ಘೋಷಣೆ ಆಗುವ ಮೊದಲೇ ಕ್ಷೇತ್ರದಲ್ಲಿ ಜನಾರ್ದನ ರೆಡ್ಡಿ ಕಾಣಿಸಿಕೊಂಡು ಗಮನ ಸೆಳೆದಿದ್ದರು. ಟಿಕೆಟ್ ಘೋಷಣೆ ನಂತರ ಪಟ್ಟಣದ ಹೊರವಲಯದಲ್ಲಿ ಮನೆ ಬಾಡಿಗೆ ಪಡೆದು ನೆಲೆಯೂರಿದ್ದಾರೆ. ಮೊಳಕಾಲ್ಮೂರು ಪಟ್ಟಣದಲ್ಲಿ […]

ಚುನಾವಣಾ ಅಖಾಡಕ್ಕೆ ಜನಾರ್ದನ ರೆಡ್ಡಿ… ಗೆಳೆಯನ ಪರ ಪ್ರಚಾರಕ್ಕೆ ರೆಡಿ

Wednesday, April 18th, 2018
janardhan-reddy

ತುಮಕೂರು: ಮೊಳಕಾಲ್ಮೂರು ಕ್ಷೇತ್ರದಲ್ಲಿ ಗೆಳೆಯ ಶ್ರೀರಾಮುಲು ಪರ ಜನಾರ್ದನ ರೆಡ್ಡಿ ಪ್ರಚಾರಕ್ಕೆ ಅಣಿಯಾಗಿದ್ದಾರೆ‌. ಇಂದು ತುಮಕೂರಿನ ಕ್ಯಾತ್ಸಂದ್ರದ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಮಾಜಿ ಸಚಿವ ಜನಾರ್ದನ ರೆಡ್ಡಿ, ಶ್ರೀಗಳ ಆಶೀರ್ವಾದ ಪಡೆದು ಶ್ರೀರಾಮುಲು ಪರ ಪ್ರಚಾರಕ್ಕೆ ತೆರಳಿದರು. ಇದೇ ವೇಳೆ ಮಾತನಾಡಿದ ಜನಾರ್ದನ ರೆಡ್ಡಿ, ಬಸವ ಜಯಂತಿ ಹಿನ್ನೆಲೆ ಮಠಕ್ಕೆ ಆಗಮಿಸಿ ಶ್ರೀಗಳ ದರ್ಶನ ಪಡೆದಿರುವೆ. ನಾನು ಮೂರನೇ ಬಾರಿ ಶ್ರೀಮಠಕ್ಕೆ ಬಂದಿದ್ದು, ನನ್ನ ಸ್ನೇಹಿತ ಶ್ರೀರಾಮುಲುಗೆ ಬೆಂಬಲ ನೀಡಿ, ಮೊಳಕಾಲ್ಮೂರು ಕ್ಷೇತ್ರದಲ್ಲಿ ಇಂದಿನಿಂದ ಪ್ರಚಾರ […]

ಬಿಎಸ್‍ವೈ- ಜನಾರ್ದನ ರೆಡ್ಡಿ ನಡುವಿನ ಬಾಂಧವ್ಯ ವೃದ್ಧಿಗೆ ಶ್ರೀರಾಮುಲು ಯತ್ನ

Wednesday, April 4th, 2018
shri-ramoolu

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಇಂದು ಸಂಸದ ಶ್ರೀರಾಮುಲು ವಿಶೇಷ ಮಾತುಕತೆ ನಡೆಸುವ ಸಾಧ್ಯತೆ ಇದೆ. ಜನಾರ್ದನ ರೆಡ್ಡಿ ರಾಜಕೀಯ ಮರುಪ್ರವೇಶದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲೇ ಬೇಕಿರುವ ಸಂದರ್ಭದಲ್ಲಿ ಈ ಭೇಟಿ ಅತ್ಯಂತ ಮಹತ್ವ ಪಡೆದುಕೊಂಡಿದ್ದು, ಬಿಜೆಪಿಗೂ, ಜನಾರ್ದನ ರೆಡ್ಡಿಗೂ ಯಾವುದೇ ಸಂಬಂಧವಿಲ್ಲ ಎಂದು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆಡಿರುವ ಮಾತಿನ ಕುರಿತು ಕೂಡ ಚರ್ಚೆ ನಡೆಯುವ ಸಾಧ್ಯತೆ ಇದೆ. ಸಭೆ ಎಲ್ಲಿ, ಯಾವ ಸಮಯಕ್ಕೆ ನಡೆಯಲಿದೆ ಎನ್ನುವ ಮಾಹಿತಿ […]

ಸೀಲಿಂಗ್‌ ಫ್ಯಾನ್‌ ಹಿಡಿದು ಬೀದಿಗಿಳಿದ ಶ್ರೀರಾಮುಲು

Thursday, November 17th, 2011
Sri Ramulu

ಬಳ್ಳಾರಿ: ಇಷ್ಟು ದಿನ ಬಿಜೆಪಿಯಲ್ಲಿದ್ದು  ಇದೀಗ ಬಳ್ಳಾರಿ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀರಾಮುಲು ತಮ್ಮ ಚಿಹ್ನೆ‌ ಸೀಲಿಂಗ್‌ ಫ್ಯಾನ್‌ ಹಿಡಿದು ಪ್ರಚಾರ ನಡೆಸಲು  ಬೀದಿಗಿಳಿದಿದ್ದಾರೆ. ಬಳ್ಳಾರಿ  ಜನರಿಗೆ ಶ್ರೀರಾಮುಲು ಅಂದರೆ ಬಿಜೆಪಿ ಹಾಗೂ ಕಮಲ ಎಂದರೆ ರಾಮುಲು ಎಂಬಾಂತಾಗಿತ್ತು. ಹೀಗಾಗಿ ಹಳ್ಳಿಗಾಡಿನ ಜನರಿಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಈ ಕ್ರಮ ಅನುಸರಿಸಲಾಗುತ್ತಿದೆ ಎಂದು ರಾಮುಲು ಮತದಾರರಿಗೆ ತನ್ನ  ಚುನಾವಣಾ ಪ್ರಚಾರದಲ್ಲಿ ತಿಳಿಸಿದರು. ಬುಧವಾರ ಮೋಕಾ, ಯರಗುಡಿ, ಬೆಣಕಲ್ಲು, ಸಿಂಧವಾಳ ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ […]