ಯೋಗ ದಿನಾಚರಣೆಯ ಪೂರ್ವಭಾವಿ ತರಬೇತಿ ಶಿಬಿರ ಆರಂಭ
Tuesday, June 4th, 2024ಮಂಗಳೂರು : ನಗರದ ಮಂಗಳಾದೇವಿ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಮಠದಲ್ಲಿ ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಯೋಗ ತರಬೇತಿ ಶಿಬಿರ ಉದ್ಘಾಟನೆಗೊಂಡಿತು. ಬಳಿಕ ಸ್ವಾಮಿ ಜಿತಕಾಮಾನಂದಜೀ ಮಹಾರಾಜ್ ಆಶೀರ್ವಚನದಲ್ಲಿ ದೈಹಿಕ ಹಾಗೂ ಮಾನಸಿಕ ಚಿಕಿತ್ಸೆಯು ಯೋಗದ ಬಹುಮುಖ್ಯ ಸಾಧನೆಗಳಲ್ಲಿ ಒಂದು. ವಾಸ್ತವಿಕ ದೃಷ್ಟಿಯಿಂದ ನೋಡಿದಾಗ ದೇಹ ಮನಸ್ಸು ಹಾಗೂ ಭಾವನೆಗಳ ನಡುವೆ ಸಮತೋಲನ ಅಥವಾ ಸಾಮರಸ್ಯ ಸಾಧಿಸುವುದಕ್ಕೆ ಯೋಗವು ಒಂದು ಸಾಧನ. ಇದನ್ನು ಕ್ರಿಯೆಗಳು, ಆಸನ, ಪ್ರಾಣಾಯಾಮ, ಮುದ್ರಾ ಹಾಗೂ ಧ್ಯಾನಗಳ ಮೂಲಕ ಸಾಧಿಸಲಾಗುತ್ತದೆ ಎಂದು […]