Blog Archive

ಮಂಗಳೂರು : ಕಾನೂನು ಕೈಗೆತ್ತಿಕೊಳ್ಳುವವರಿಗೆ ಪ್ರವೇಶವಿಲ್ಲ; ಮಾಜಿ ಶಾಸಕ ಮೊಯ್ದಿನ್ ಬಾವಾ ಎಚ್ಚರಿಕೆ

Wednesday, December 25th, 2019
Moihdin-bava

ಮಂಗಳೂರು : ಜನವರಿ 4 ರಂದು ಎನ್ಆರ್ಸಿ ಹಾಗೂ ಸಿಎಎ ವಿರುದ್ಧ ಪ್ರತಿಭಟನೆ ನಡೆಸಲಾಗುವುದು. ಈ ಸಂದರ್ಭದಲ್ಲಿ ಯಾವ ಯುವಕರು ಕಾನೂನು ಕೈಗೆತ್ತಿಕೊಳ್ಳುತ್ತಾರೋ ಅವರಿಗೆ ಈ ಮಣ್ಣಿನಲ್ಲಿರುವ ಹಕ್ಕಿಲ್ಲ ಎಂದು ಮಾಜಿ ಶಾಸಕ ಮೊಯ್ದಿನ್ ಬಾವಾ ಖಡಕ್‌ ಆಗಿ ಸೂಚನೆ ಕೊಟ್ಟರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಈ ಆರು ತಿಂಗಳ ಒಳಗೆ ಮುಸ್ಲಿಮರ ವಿರುದ್ಧ ಅನೇಕ ಕಾನೂನುಗಳು ಜಾರಿಗೊಂಡರೂ ನಾವು ಪ್ರತಿಭಟನೆ ನಡೆಸಲಿಲ್ಲ. ಆದರೆ ಎನ್ಆರ್‌ಸಿ ಹಾಗೂ ಸಿಎಎ ಕಾಯ್ದೆ ವಿರೋಧಿಸಿ ದೇಶಾದ್ಯಂತ ಹೋರಾಟಗಳು […]

ಸಿಎಎ ಹೆಸರಲ್ಲಿ ಹಿಂದುತ್ವದ ಬಗ್ಗೆ ಅವಹೇಳನಾಕಾರಿ ಪೋಸ್ಟರ್ ಪ್ರದರ್ಶಿಸಿದ್ದ ಎಂಟು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Saturday, December 21st, 2019
Hindu

ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ನಗರದಲ್ಲಿ ಪ್ರತಿಭಟನೆ ನಡೆಸುವ ವೇಳೆ ಧಾರ್ಮಿಕ ಭಾವನೆಗಳನ್ನು ಕೆರಳಿಸುವಂತೆ ಹಿಂದುತ್ವದ ಬಗ್ಗೆ ಅವಹೇಳನಾಕಾರಿ ಪೋಸ್ಟರ್ ಪ್ರದರ್ಶಿಸಿದ್ದ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ನಗರದ ಸರ್ಕಾರಿ ಕಲಾ ಕಾಲೇಜಿನ ಆವರಣದಲ್ಲಿ ಶುಕ್ರವಾರ ಸಂಜೆ ವಿದ್ಯಾರ್ಥಿಗಳ ಗುಂಪೊಂದು ಸಿಎಎ ವಿರುದ್ಧ ಪ್ರತಿಭಟನೆ ನಡೆಸಿತ್ತು. ಆ ವೇಳೆ ಹಿಂದುತ್ವವನ್ನು ಅವಾಚ್ಯವಾಗಿ ನಿಂದಿಸುವ ಪೋಸ್ಟರ್ ಪ್ರದರ್ಶಿಸಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. […]