Blog Archive

ಬಿಜೆಪಿಯವರು ಊಸರವಳ್ಳಿ ಇದ್ದ ಹಾಗೆ: ಸಿದ್ದರಾಮಯ್ಯ ವ್ಯಂಗ್ಯ

Monday, January 8th, 2018
mangaluru

ಮಂಗಳೂರು: “ಬಿಜೆಪಿಯವರು ಊಸರವಳ್ಳಿ ಇದ್ದ ಹಾಗೆ; ಆಗಾಗ ಬಣ್ಣ ಬದಲಾಯಿಸುವವರು,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪುತ್ತೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು. “ಕೆಲವರಿಗೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ ಬರುತ್ತದೆ ಎಂದು ಭಯವಿದೆ. ನಾನು ಸರಕಾರ ಹಣದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಹೇಳುತ್ತಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಗುಜಾರಾತ್ ಹಾಗೂ ವಿದೇಶಕ್ಕೆ ತಮ್ಮ ಸ್ವಂತ ದುಡ್ಡಿನಲ್ಲಿ ಹೋಗುತ್ತಾರಾ?,” ಎಂದು ಪ್ರಶ್ನಿಸಿದರು . ದಕ್ಷಿಣ […]

ನಾಳೆ ಮೂರು ಕಡೆ ಸಿಎಂ ಸಮಾವೇಶ: ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ

Saturday, January 6th, 2018
mangaluru

ಮಂಗಳೂರು: ಅಹಿತಕರ ಘಟನೆಗಳ ನಡುವೆ ರವಿವಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಜಿಲ್ಲಾ ಬಂದ್‌ಗೆ ಕರೆ ನೀಡುವ ತವಕದಲ್ಲಿರುವ ಹಿಂದೂ ಸಂಘಟನೆಗಳು, ಕರಿಪತಾಕೆ ಹಿಡಿಯುತ್ತೇವೆ ಎಂದು ಸವಾಲೆಸೆದ ಜೆಡಿಎಸ್‌, ಇಷ್ಟಲ್ಲದೆ ಭದ್ರತೆ, ಕಾರ್ಯಕ್ರಮ ಜೋಡಣೆಯ ತಯಾರಿ ಪೊಲೀಸ್‌ ಇಲಾಖೆಯ ನಿದ್ದೆಗೆಡಿಸಿದೆ. ಜಿಲ್ಲೆಯ ಮೂರು ಕಡೆ ಬೃಹತ್‌ ಸಮಾವೇಶ ಆಯೋಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಅವಧಿಯ ಕೊನೆಯ ಭೇಟಿ ಇದಾಗಿದೆ. ಮುಂದಿನ ಕೆಲ ತಿಂಗಳಲ್ಲಿ ಚುನಾವಣೆ ಎದುರಿಸಲಿರುವ ಕಾರಣ, ಕಾಂಗ್ರೆಸ್‌ಗೆ ಇದು ಶಕ್ತಿ ಪ್ರದರ್ಶನದ ವೇದಿಕೆ. […]

ಬಶೀರ್‌ ಕೊಂಚ ಚೇತರಿಕೆ; ನಾಲ್ವರು ವಶಕ್ಕೆ

Saturday, January 6th, 2018
hospital

ಮಂಗಳೂರು: ಕೊಟ್ಟಾರ ಚೌಕಿಯಲ್ಲಿ ಬುಧವಾರ ರಾತ್ರಿ ಮಾರಕಾಯುಧಗಳಿಂದ ಹಲ್ಲೆಗೊಳಗಾಗಿ ತೀವ್ರ ಗಾಯಗೊಂಡಿದ್ದ ಆಕಾಶ ಭವನದ ಬಶೀರ್‌ (48) ಅವರ ಆರೋಗ್ಯ ಸ್ಥಿತಿ ತುಸು ಚೇತರಿಕೆ ಕಂಡಿದ್ದು, ಈ ಘಟನೆ ಕುರಿತಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಎಲ್ಲ ನಾಲ್ವರು ಆರೋಪಿಗಳು ಕ್ರಿಮಿನಲ್‌ ಹಿನ್ನೆಲೆ ಯವರಾಗಿದ್ದು, ಕಳೆದ ಜುಲೈ ತಿಂಗಳಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಡ್ಯಾರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಇಬ್ಬರು ವ್ಯಕ್ತಿಗಳ ಮೇಲೆ ನಡೆದ ಹಲ್ಲೆ ಕೃತ್ಯದಲ್ಲಿ ಭಾಗಿಯಾದವರು ಎನ್ನಲಾಗಿದೆ. ವಶಕ್ಕೆ ಪಡೆದವರಲ್ಲಿ ಇಬ್ಬರು ಪಡೀಲ್‌ನವರು, […]

ನಾಳೆಯಿಂದ ಎರಡು ದಿನ ಕರಾವಳಿಯಲ್ಲಿ ಸಿಎಂ

Saturday, January 6th, 2018
siddaramiah

ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಜ.7ರಿಂದ 2 ದಿನ ದ. ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದು, 200ಕ್ಕೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಈ ಭಾಗದಲ್ಲಿ ಮುಖ್ಯಮಂತ್ರಿಗಳ ಮಹತ್ವದ ಪ್ರವಾಸ ಇದು. ದಕ್ಷಿಣ ಕನ್ನಡ ಕಾರ್ಯಕ್ರಮ: ಪುತ್ತೂರು, ಬಂಟ್ವಾಳ ಹಾಗೂ ಮೂಡ ಬಿದಿರೆ ವಿ.ಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 200 ಕೋ. ರೂ. ವೆಚ್ಚದ ಕಾಮಗಾರಿ ಉದ್ಘಾಟನೆ, ಶಿಲಾನ್ಯಾಸ ಮಾಡಲಿದ್ದಾರೆ. ಪುತ್ತೂರು ವಿ. ಸಭಾ […]

ಬಳ್ಳಾರಿಯಲ್ಲಿ ಚುನಾವಣೆಗೆ ಸ್ಪರ್ಧಿಸಬೇಡಿ: ರಾಹುಲ್ ಗಾಂಧಿಗೆ ಬಿಎಸ್‌ವೈ ಎಚ್ಚರಿಕೆ

Saturday, January 6th, 2018
rahul-gandhi

ಬಳ್ಳಾರಿ: ಲೋಕಸಭಾ ಚುನಾವಣೆಗೆ ಬಳ್ಳಾರಿಯಿಂದ ಚುನಾವಣೆಗೆ ನಿಲ್ಲುವ ಪ್ರಯತ್ನದಲ್ಲಿರುವ ರಾಹುಲ್ ಗಾಂಧಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದು, ಚುನಾವಣೆಗೆ ನಿಂತರೆ ಸೋಲು ಖಚಿತ ಎಂದಿದ್ದಾರೆ. ಬಳ್ಳಾರಿಯಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು ರಾಹುಲ್ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿ ಅವರಂತೆ ಬಳ್ಳಾರಿಯಲ್ಲಿ ಲೋಕಸಭೆ ಚುನಾವಣೆಗೆ ನಿಂತು ಗೆಲ್ಲುವ ಪ್ರಯತ್ನದಲ್ಲಿದ್ದಾರೆ ಆದರೆ ಅವರು ಇಲ್ಲಿ ಚುನಾವಣೆಗೆ ನಿಂತರೆ ಒಂದು ಲಕ್ಷ ಮತಗಳ ಅಂತರದಿಂದ ಸೋಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಸಿದ್ದರಾಮಯ್ಯ […]

ಪೂಜಾರಿ ಆತ್ಮಚರಿತ್ರೆ ಬಿಡುಗಡೆಗೆ ಸಿದ್ಧ, ರಾಜ್ಯ ರಾಜಕಾರಣದಲ್ಲಿ ತಳಮಳ

Friday, January 5th, 2018
janardhan-poojary

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಬಿರುಸುಗೊಂಡಿದೆ. ಒಂದೆಡೆ ಬಿಜೆಪಿ ಪರಿರ್ವತನಾ ಯಾತ್ರೆ ಆರಂಭಿಸಿದ್ದರೆ, ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಾಧನಾ ಸಮಾವೇಶ ನಡೆಯುತ್ತಿದೆ. ಇವೆಲ್ಲದರ ಮಧ್ಯೆ ಕಾಂಗ್ರೆಸ್ ಪಾಳಯದಲ್ಲಿ ಈಗ ಭಾರೀ ತಳಮಳ ಆರಂಭವಾಗಿದೆ. ಇದಕ್ಕೆ ಕಾರಣ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿ. ನೇರ, ನಿಷ್ಠುರ ಮಾತುಗಳ ಸರಳ ಸಜ್ಜನಿಕೆಯ ರಾಜಕಾರಣಿ ಎಂದೇ ಗುರುತಿಸಿ ಕೊಂಡಿರುವ ಬಿ. ಜನಾರ್ಧನ ಪೂಜಾರಿ ಅವರ ಆತ್ಮಚರಿತ್ರೆ ಬಿಡುಗಡೆಗೆ ಸಿದ್ದವಾಗಿದೆ. ಈ ಹಿನ್ನೆಲೆಯಲ್ಲಿ […]

1.5 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ: ಸಿಎಂ ಘೋಷಣೆ

Wednesday, January 3rd, 2018
siddaramaih

ಬೆಂಗಳೂರು: ಜ್ಞಾನ ಮತ್ತು ಪ್ರತಿಭೆ ಯಾರ ಸ್ವತ್ತು ಅಲ್ಲ. ಅದು ಹುಟ್ಟಿನಿಂದಲೇ ಬರಬೇಕು. ನೀವು ಭವಿಷ್ಯದ ಪ್ರಜೆಗಳಾಗಬೇಕು ಎನ್ನುವುದು ‌ನನ್ನಾಸೆ. ನೀವೆಲ್ಲರೂ ಈ ಲ್ಯಾಪ್ ಟಾಪ್ ಸೌಲಭ್ಯವನ್ನು ಸದಪಯೋಗ ಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ನಡೆದ ಉಚಿತ ಲ್ಯಾಪ್ ಟಾಪ್ ವಿತರಣಾ ಸಮಾರಂಭದಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 2016-17ನೇ ಸಾಲಿನ ಪದವಿ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಿಎಂ‌ ಸಿದ್ದರಾಮಯ್ಯ […]

ಕರ್ನಾಟಕ ಅಭಿವೃದ್ಧಿ ಇತರರಿಗೆ ಮಾದರಿಯಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Tuesday, January 2nd, 2018
vision

ಬೆಂಗಳೂರು: ಕರ್ನಾಟಕ ರಾಜ್ಯದ ಅಭಿವೃದ್ಧಿ ಇತರರಿಗೆ ಮಾದರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. ‘ದಿ ನ್ಯೂ ಇಂಡಿಯನ್ ಎಕ್ಸ್’ಪ್ರೆಸ್ ಆಯೋಜಿಸಿದ್ದ ‘ವಿಷನ್ 2025’ ಸಮಾವೇಶದಲ್ಲಿ ಮಾತನಾಡಿರುವ ಅವರು, ನವ ಕರ್ನಾಟಕ-2025 ನಿರ್ಮಾಣಕ್ಕೆ ತಮ್ಮ ಸರ್ಕಾರ ಕೈಗೊಂಡಿರುವ ಉಪಕ್ರಮಗಳು ಹಾಗೂ ಅವರ ಜೀವನದ ಅನುಭವಗಳನ್ನು ಹಂಚಿಕೊಂಡರು. ಜೀವನದಲ್ಲಿ ಹಸಿವು, ಬಡತನ ಹಾಗೂ ನಿರುದ್ಯೋಗ ಸಮಸ್ಯೆಗಳನ್ನು ಅನುಭವಿಸಿದ್ದೇನೆ. ರಾಜ್ಯ ಬಜೆಟ್’ನ್ನು ಘೋಷಣೆ ಮಾಡುವ ವೇಳೆ ನನ್ನ ಅನುಭವಗಳೇ ನನಗೆ ಮಾರ್ಗದರ್ಶನ ನೀಡಿತ್ತು. ಬಸವೇಶ್ವರ, ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿಯವರು ರಚಿಸಿದ […]

‘ಕಾಂಗ್ರೆಸ್‌ನಿಂದ ದೇವಸ್ಥಾನ ರಾಜಕೀಯ’

Tuesday, January 2nd, 2018
Rahul-gandhi

ಮಂಗಳೂರು: ಕಾಂಗ್ರೆಸ್‌ ಮತ್ತು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚುನಾವಣಾ ದೃಷ್ಟಿಯಿಂದ ಹಿಂದೂ ದೇವರ ಮೇಲೆ ವಿಪರೀತ ನಂಬಿಕೆ ಇರುವಂತೆ ನಟಿಸುತ್ತಿದ್ದು, ಚುನಾವಣೆಗಾಗಿ ಗುಜರಾತಿನಲ್ಲಿ ರಾಹುಲ್ ಗಾಂಧಿ ದೇವಸ್ಥಾನಗಳಿಗೆ ಭೇಟಿ ನೀಡುವ ಗಿಮಿಕ್ ರಾಜಕೀಯ ರಾಜ್ಯದಲ್ಲೂ, ಅದರಲ್ಲೂ ಮಂಗಳೂರು ಕ್ಷೇತ್ರದಲ್ಲೂ ನಡೆಯುತ್ತಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಮಾಯಣ, ಮಹಾಭಾರತ ಎಂಬುದು ನಡೆದೇ ಇಲ್ಲ, ರಾಮಸೇತು ಕಾಲ್ಪನಿಕ ಎಂದವರು, ಪರಮ ಪಾವನ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಕೋಳಿ, […]

‘ಕಾಂಗ್ರೆಸ್‌ ಸರ್ಕಾರದಿಂದ ರೈತರಿಗೆ ಆತ್ಮಹತ್ಯೆ ಭಾಗ್ಯ’

Friday, December 29th, 2017
congress

ಮಂಗಳೂರು: ಜನರ ದುಡ್ಡಿನಲ್ಲಿ ಪಕ್ಷದ ಪ್ರಚಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈತರ ಬಗ್ಗೆ ನಿಜವಾದ ಕಾಳಜಿ ಇಲ್ಲ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ 3,500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾಗ್ಯಗಳ ಸರದಾರ ಸಿದ್ದರಾಮಯ್ಯ ಅವರು ರಾಜ್ಯದ ರೈತರಿಗೆ ಆತ್ಮಹತ್ಯೆ ಭಾಗ್ಯವನ್ನು ನೀಡಿದ್ದಾರೆ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನ್ನಭಾಗ್ಯ, ಕೃಷಿ ಭಾಗ್ಯ, ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ. […]