ಶೋಭಾ ತಪ್ಪು ಮಾಡಿದರೆ ಮುಲಾಜಿಲ್ಲದೇ ಪೊಲೀಸರು ಬಂಧಿಸುತ್ತಾರೆ: ಸಿಎಂ
Monday, December 25th, 2017ಹಾವೇರಿ: ತಾಕತ್ತಿದ್ದರೆ ಸಿದ್ದರಾಮಯ್ಯ ಸರಕಾರ ನನ್ನನ್ನು ಬಂಧಿಸಲು ಪೊಲೀಸರಿಗೆ ಆದೇಶ ನೀಡಲಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮಾಡಿದ ಸವಾಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಿದ್ದರಾಮಯ್ಯ, ಕಾನೂನಿಗಿಂತ ಈ ನೆಲದಲ್ಲಿ ಯಾರೂ ದೊಡ್ಡವರಲ್ಲ. ಶೋಭಾ ಅವರು ಉದ್ವೇಗದಿಂದ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ. ಜೊತೆಗೆ, ಶೋಭಾ ಕರಂದ್ಲಾಜೆಯವರು ತಪ್ಪು ಮಾಡಿದು ಸಾಬೀತಾದರೆ ಯಾವುದೇ ಮುಲಾಜಿಲ್ಲದೇ ಪೊಲೀಸರು ಬಂಧಿಸುತ್ತಾರೆಯೇ ಹೊರತು ನಾವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮಹದಾಯಿ […]