Blog Archive

ಅದ್ದೂರಿ ಮದುವೆ ಬಗ್ಗೆ ಟೀಕಿಸುತ್ತಿದ್ದ ಸಿಎಂ ಸಿದ್ದರಾಮಯ್ಯ ಈ ದುಂದು ವೆಚ್ಚ ಮಾಡಿದ್ದು ಸರಿಯೇ: ಎಚ್.ಡಿ.ಕುಮಾರಸ್ವಾಮಿ

Wednesday, November 23rd, 2016
siddaramaiah

ಬೆಳಗಾವಿ: ಅದ್ದೂರಿ ಮದುವೆ ಎಂಬ ಕಾರಣಕ್ಕೆ ಬಿಜೆಪಿಯ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರಿ ಬ್ರಹ್ಮಿಣಿ ಮದುವೆಯಿಂದ ದೂರ ಉಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅದೇ ಕಾರಣಕ್ಕೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿ ರಮೇಶ್ ಜಾರಕಿಹೊಳಿ ಅವರ ಪುತ್ರನ ಮದುವೆ ಸಂಭ್ರಮದಿಂದ ದೂರ ಉಳಿದಿದ್ದರು. ಆದರೆ ಇದೀಗ ಅದ್ದೂರಿ ಮದುವೆ ಹೋಗಲ್ಲ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಜಾರಕಿಹೊಳಿ ಮಗನ ಮದುವೆಗೆ ಶುಭಾಶಯ ಹೇಳಲು ಖಾಸಗಿ ಹೆಲಿಕಾಪ್ಟರ್ ಬಳಸುವ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ. ಸಿಎಂ ಅವರು […]

ಮಗನನ್ನು ಮತದಾರರಿಗೆ ಪರಿಚಯಿಸಿದ್ದರಲ್ಲಿ ತಪ್ಪೇನಿದೆ : ಸಿದ್ದರಾಮಯ್ಯ

Monday, October 10th, 2016
cm airport

ಮಂಗಳೂರು: ಕಾವೇರಿ ಕಣಿವೆ ವ್ಯಾಪ್ತಿಯ ಜಲಾಶಯಗಳನ್ನು ಪರಿಶೀಲನೆ ನಡೆಸಿರುವ ಕೇಂದ್ರ ತಜ್ಞರ ತಂಡಕ್ಕೆ ರಾಜ್ಯದ ಸಂಕಷ್ಟ ಪರಿಸ್ಥಿತಿ ಅರ್ಥವಾಗಿದ್ದು, ರಾಜ್ಯಕ್ಕೆ ನ್ಯಾಯ ಸಿಗುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದ.ಕ. ಜಿಲ್ಲೆಯಲ್ಲಿ ರವಿವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭ ಬಜಪೆ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಬಗ್ಗೆ ಎರಡೂ ರಾಜ್ಯಗಳಲ್ಲಿರುವ ವಸ್ತುಸ್ಥಿತಿ ಅಧ್ಯಯನ ನಡೆಸಲು ಒಂದು ತಜ್ಞರ ತಂಡ ಕಳುಹಿಸುವಂತೆ ನಾವೇ ಕೇಳಿದ್ದು. ಕರ್ನಾಟಕ ಹಾಗೂ ತಮಿಳುನಾಡಿನ […]

ಸಿದ್ದರಾಮಯ್ಯ,ಡಿವಿಎಸ್‌ ಮತ್ತು ಮೊಯ್ಲಿ ಅವರಿಗೆ ಕ್ರೀಡಾಪಟುಗಳಿಗೆ ನೀಡುವ ಖೇಲ್‌ ರತ್ನ ಪ್ರಶಸ್ತಿ ಕೊಡಬೇಕು: ಪೂಜಾರಿ

Saturday, September 3rd, 2016
Janardana-poojary

ಮಂಗಳೂರು : ಕಾಂಗ್ರೆಸ್‌ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ಮತ್ತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸುದ್ದಿಗೋಷ್ಠಿ ನಡೆಸಿ ಕಿಡಿಕಾರಿದ್ದಾರೆ. ನೇತ್ರಾವತಿ ನದಿ ತಿರುವು ಯೋಜನೆಯನ್ನು ವಿರೋಧಿಸಿ ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯನ್ನುದ್ದೇಸಿ ಮಾತನಾಡಿದ ಪೂಜಾರಿ ಅವರು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಸಂಸದ ವೀರಪ್ಪ ಮೊಯ್ಲಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದರು. ಎತ್ತಿನಹೊಳೆ ಯೋಜನೆಯನ್ನು ಅನುಷ್ಠಾನಕ್ಕೆ ತರುವಲ್ಲಿ ಬದ್ಧರಾಗಿರುವ ಸಿದ್ದರಾಮಯ್ಯನವರು ಯೋಜನೆಗೆ ಅಡ್ಡ ಬಂದರೆ ಅವರನ್ನು ನನ್ನ ಬಳಿ ಕಳುಹಿಸಿ […]

ಸಿಎಂ ಪುತ್ರ ರಾಕೇಶ್‌ ಅವರ ಅಂತಿಮ ವಿದಾಯ

Tuesday, August 2nd, 2016
Rakesh

ಮೈಸೂರು: ಅಕಾಲಿಕ ಮರಣಕ್ಕೆ ತುತ್ತಾದ ಸಿಎಂ ಪುತ್ರ ರಾಕೇಶ್‌ ಅವರ ಅಂತಿಮ ಸಂಸ್ಕಾರ ಮೈಸೂರು ತಾಲೂಕಿನ ಟಿ. ಕಾಟೂರಿನ ಫಾರಂಹೌಸ್‌ನಲ್ಲಿ ಸೋಮವಾರ ಸಂಜೆ ಹಾಲುಮತ ಸಂಪ್ರದಾಯದಂತೆ ನೆರವೇರಿತು. ದಸರಾ ವಸ್ತು ಪ್ರದರ್ಶನ ಆವರಣದಿಂದ ಫಾರಂ ಹೌಸ್‌ಗೆ ಪಾರ್ಥಿವ ಶರೀರವನ್ನು ತರಲಾಯಿತು. ಸಮಾಧಿಗೆ ಉಪ್ಪು, ವಿಭೂತಿ, ಬಿಲ್ವಪತ್ರೆ, ಅರಿಶಿಣ, ಕುಂಕುಮ ಹಾಕಿ ಪೂಜೆ ಸಲ್ಲಿಸಲಾಯಿತು. ರಾಕೇಶ್‌ ಅವರ ಬಾಯಿಗೆ ರುದ್ರಾಕ್ಷಿ ಹಾಕಲಾಯಿತು. ಅಕಾಲಿಕ ಮರಣ ಉಂಟಾಗಿರುವುದರಿಂದ ಅಷ್ಟ ದಿಕ್ಕುಗಳಿಗೂ ದಿಗ್ಬಂಧನ ಹಾಕಿ, ಮಂತ್ರಾಕ್ಷತೆ, ಅಂಕುರಾರ್ಪಣೆ ನೆರವೇರಿಸಿ ಎಂಟು ದಿಕ್ಕಿನಲ್ಲಿಯೂ […]

ಯೋಧರ ಮನೆ ಮಂದಿಯ ರಕ್ಷಣೆ ನನ್ನ ಕರ್ತವ್ಯ: ಡಾ| ಜಿ. ಪರಮೇಶ್ವರ್‌

Thursday, July 28th, 2016
Ekanatha-Shetty

ಬೆಳ್ತಂಗಡಿ: ನಾಪತ್ತೆಯಾಗಿರುವ ಸೇನಾ ವಿಮಾನದಲ್ಲಿದ್ದ ಗುರುವಾಯನಕೆರೆಯ ಯೋಧ ಕೆ. ಏಕನಾಥ ಶೆಟ್ಟಿ ಅವರ ಮನೆಗೆ ಗೃಹಸಚಿವ ಡಾ| ಜಿ. ಪರಮೇಶ್ವರ್‌ ದೂರವಾಣಿ ಕರೆ ಮಾಡಿದ್ದಾರೆ. ಯೋಧನ ಪತ್ನಿ ಶಿಕ್ಷಕಿ ಜಯಂತಿ ಅವರ ಜತೆ ಮಾತನಾಡಿದ ಸಚಿವರು ಮಾಜಿ ಹಾಗೂ ಹಾಲಿ ಯೋಧರ ಮನೆ ಮಂದಿಯ ರಕ್ಷಣೆ ನನ್ನ ಕರ್ತವ್ಯ. ನಾನು ಕರೆ ಮಾಡುವಾಗ ಆದ ವಿಳಂಬಕ್ಕೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ. ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದಕ್ಕೂ ಮುನ್ನ ಕೇಂದ್ರ ರಕ್ಷಣಾ ಸಚಿವ ಮನೋಹರ ಪಾರಿಕ್ಕರ್‌ ಕರೆ […]

ಸಿದ್ದರಾಮಯ್ಯ ಅವರ ಪುತ್ರ ರಾಕೇಶ್‌ ಶೀಘ್ರ ಗುಣಮುಖರಾಗಲಿ ಎಂದು ವಿಶೇಷ ಪ್ರಾರ್ಥನೆ

Thursday, July 28th, 2016
Rakesh-Siddaramaiah

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್‌ ಅನಾರೋಗ್ಯದಿಂದಾಗಿ ಬೆಲ್ಜಿಯಂನ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದು, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿ ಉಳ್ಳಾಲದ ಸಯ್ಯದ್ ಮದನಿ ದರ್ಗಾ ಸಮಿತಿ ವತಿಯಿಂದ ವಿಶೇಷ ಪ್ರಾರ್ಥನೆ ಮಾಡಲಾಯಿತು. ಸಯ್ಯದ್ ಮದನಿ ಅರಬಿಕ್ ಕಾಲೇಜಿನ ಪ್ರೊ. ಹಾಜಿ ಅಹ್ಮದ್ ಬಾವ ಮುಸ್ಲಿಯಾರ್ ಅವರು ಸಯ್ಯದ್ ಮದನಿ ದರ್ಗಾದಲ್ಲಿ ಪ್ರರ್ಥನೆ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್, ಉಪಾಧ್ಯಕ್ಷ ಯು.ಕೆ. ಮೋನು ಕೋಟೆಪುರ, ಪ್ರಧಾನ ಕಾರ್ಯದರ್ಶಿ ಹಾಜಿ ತ್ವಾಹ ಮೊಹಮ್ಮದ್, ಸಹ […]

ಸಿದ್ದರಾಮಯ್ಯನವರಿಂದ ಗುರುಪೀಠ ಉದ್ಘಾಟನೆ

Saturday, September 27th, 2014
Siddaramaiah-at-guru-peeta

ಬ್ರಹ್ಮಾವರ : ಇಲ್ಲಿನ ಬಾರಕೂರಿನ ಬೆಣ್ಣೆಕುದುರಿನಸಮಸ್ತ ಮೊಗವೀರರ ಕುಲದೇವರು   ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ  ನವೀಕೃತ ಗುರುಪೀಠವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ  ಬೆಳಗ್ಗೆ 11ಕ್ಕೆ  ಉದ್ಘಾಟಿಸಿದರು. ಸಚಿವರಾದ ವಿನಯ್‌ಕುಮಾರ್‌ ಸೊರಕೆ ,ಶಾಸಕ ಪ್ರಮೋದ್‌ ಮಧ್ವರಾಜ್‌ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಇದೀಗ ಮುಖ್ಯಮಂತ್ರಿಗಳು ಬ್ರಹ್ಮಾವರದ ಗಾಂಧೀ ಮೈದಾನದಲ್ಲಿ ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌, ಮೊಗವೀರ ಯುವ ವೇದಿಕೆ,ಮಣಿಪಾಲ ವಿ.ವಿ. ಸಹಯೋಗದಲ್ಲಿ ಕೊಡುವ ಜಿ. ಶಂಕರ್‌- ಮಣಿಪಾಲ ಆರೋಗ್ಯ ಕಾರ್ಡ್‌ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಬಳಿಕ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ […]

ಮೋದಿ ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಿದ್ದು ಬಿಜೆಪಿಯಲ್ಲ, ಆರೆಸ್ಸೆಸ್: ಸಿದ್ದು

Thursday, March 13th, 2014
Siddaramaiah

ಬೆಂಗಳೂರು: ಮೋದಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿದ್ದು ಬಿಜೆಪಿಯಲ್ಲ. ಬದಲಾಗಿ ಆರೆಸ್ಸೆಸ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದೆ. ಮೋದಿ ಆರೆಸ್ಸೆಸ್ ಮನುಷ್ಯ. ಆರೆಸ್ಸೆಸ್ ಹೇಳಿದಂತೆ ಕೇಳುತ್ತಾರೆ ಹೊರತು ಬಿಜೆಪಿ ಹೇಳಿದಂತಲ್ಲ. ಬಿಜೆಪಿಯಲ್ಲಿ ಸಾಕಷ್ಟು ಹಿರಿಯ ನಾಯಕರಿದ್ದರು. ಲಾಲ್‌ಕೃಷ್ಣ ಆಡ್ವಾಣಿ, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಅವರನ್ನೆಲ್ಲ ಬಿಟ್ಟು ಮೋದಿಯನ್ನು ಪ್ರಧಾನಿ ಅಭ್ಯರ್ಥಿ ಮಾಡಲು ಆರೆಸ್ಸೆಸ್ಸೇ ಕಾರಣ. ಚುನಾವಣೆ ಸಿದ್ಥತೆಯ ನಡುವೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ಸಾಮೂಹಿಕ ಸಂದರ್ಶನ ನೀಡಿದರು. ಸಂದರ್ಶನದುದ್ದಕ್ಕೂ ದ್ವಂದ್ವ ನೀತಿಯ ಮಾತುಗಳಿಗೆ […]

ಸಿಎಂ ಸಿದ್ದರಾಮಯ್ಯಗೆ ಬಿತ್ತು ಟಾರ್ಗೆಟ್ ಇಪ್ಪತ್ತು

Wednesday, March 12th, 2014
Siddaramaiah

ಬೆಂಗಳೂರು: ಲೋಕಸಭಾ ಚುನಾವಣೆ ಇನ್ನೂ ಕಾವೇರದ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಪಿಂಗ್ ಮೂಡಿನಲ್ಲಿರುವಾಗ ಕಾಂಗ್ರೆಸ್ ಹೈಕಮಾಂಡ್ ಬಿಸಿ ಮುಟ್ಟಿಸಿದೆ. ಹಾಲಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಕನಿಷ್ಠ 20 ಸ್ಥಾನಗಳನ್ನು ಪಕ್ಷಕ್ಕಾಗಿ ಗೆಲ್ಲಿಸಿಕೊಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದುಗೆ ಸ್ಪಷ್ಟ ಟಾರ್ಗೆಟ್ ನೀಡಿದೆ ಎಂದು ತಿಳಿದುಬಂದಿದೆ. ಸಿಎಂ ಸಿದ್ದರಾಮಯ್ಯಗೆ ಬಿತ್ತು ಟಾರ್ಗೆಟ್ ಇಪ್ಪತ್ತು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೆಪಿಸಿಸಿ ಅಧ್ಯಕ್ಷ ಡಾ […]

ಸಿದ್ದರಾಮಯ್ಯ ಸಮಾಜವನ್ನು ಅಚ್ಚುಕಟ್ಟಾಗಿ ಒಡೆಯುತ್ತಿದ್ದಾರೆ

Tuesday, March 11th, 2014
HD-Deve-Gowda

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಜಾತಿ ಸಮಾವೇಶವನ್ನೂ ಬಾಕಿ ಉಳಿಸಿಲ್ಲ. ಸಮಾಜವನ್ನು ಒಡೆಯುವ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ. ಹಿಂದುಳಿದ ವರ್ಗಗಳಲ್ಲಿನ ಸಣ್ಣ ಸಮಾಜಗಳನ್ನೂ ಭಾಗ ಮಾಡಿದ್ದಾರೆ. ಮಠಗಳಿಗೆ ಸಮಾಜದ ಹೆಸರಿನಲ್ಲಿ 50 ಲಕ್ಷ, ಒಂದು ಕೋಟಿ ಹಣ ನೀಡಿ ಅವರನ್ನೂ ವಿಭಜನೆ ಮಾಡಿದ್ದಾರೆ. ಇವರ ಉದ್ದೇಶ ಒಂದೇ- ಸಮಾಜ ಒಡೆಯುವುದು. ಹಿಂದುಳಿದವರನ್ನು ಬಾಳುವುದಕ್ಕೂ ಬಿಡುತ್ತಿಲ್ಲ. ಈ ಎಲ್ಲ ಸಮಾಜಗಳನ್ನು ಛಿದ್ರ ಛಿದ್ರ ಮಾಡಲು ಮುಂದಾಗಿದ್ದಾರೆ… ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಸರ್ವನಾಶ ಮಾಡುತ್ತೇನೆ ಎಂದಿದ್ದಾರೆ. ಅವರ ಬಳಿ ಅಧಿಕಾರ […]