Blog Archive

ಸಿಎಂ ತವರಿಗೆ ಸುವರ್ಣ ಭಾಗ್ಯ

Saturday, March 8th, 2014
Siddaramaiah

ಮೈಸೂರು: ಮೈಸೂರು ತಾಲೂಕು ಸಿದ್ದರಾಮನಹುಂಡಿಯ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಒಂಬತ್ತೂವರೆ ತಿಂಗಳುಗಳಾಗಿದ್ದರೂ ಈವರೆಗೆ ಸ್ವಗ್ರಾಮಕ್ಕೆ ಭೇಟಿ ನೀಡಲು ಆಗಿಲ್ಲ. ಆದರೆ ಅಭಿವೃದ್ಧಿ ಭಾಗ್ಯ ದೊರೆತಿದೆ. ಸಿದ್ದರಾಮನಹುಂಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳನ್ನು ಸುವರ್ಣ ಗ್ರಾಮೋದಯ ಯೋಜನೆಯಲ್ಲಿ ಅಭಿವೃದ್ಧಿಪಡಿಸಲು 9.60 ಕೋಟಿ ಬಿಡುಗಡೆ ಮಾಡಲಾಗಿದೆ. ಸುವರ್ಣ ಗ್ರಾಮೋದಯ ಯೋಜನೆಯ 5ನೇ ಹಂತದಲ್ಲಿ ಮೈಸೂರು ತಾಲೂಕಿಗೆ ರಾಜ್ಯ ಸರ್ಕಾರ 6.86 ಕೋಟಿ ನಿಗದಿಪಡಿಸಿತ್ತು. ಇದಕ್ಕಾಗಿ ಒಟ್ಟು 32,845 ಜನಸಂಖ್ಯೆ ಇರುವ 16 ಗ್ರಾಮಗಳನ್ನು ಆಯ್ಕೆ ಮಾಡಲಾಗಿತ್ತು. ಈ ಪೈಕಿ ಸಿದ್ದರಾಮನಹುಂಡಿ ಹಾಗೂ […]

ಅಕ್ರಮಕ್ಕೆ ಅಡ್ಡಿಯಾದ ಅಧಿಕಾರಿಗೆ ರಜೆ ಸಜೆ!

Thursday, March 6th, 2014
Siddaramaiah

ಬೆಂಗಳೂರು: ರಜೆ ಬೇಕೆ, ಪ್ರಾಮಾಣಿಕವಾಗಿ ಕೆಲಸ ಮಾಡಿ! ರಾಜ್ಯ ಸರ್ಕಾರ ಪ್ರಾರಂಭಿಸಿರುವ ನೂತನ ‘ರಜಾ ಭಾಗ್ಯ’ ಯೋಜನೆಯ ಪ್ರಥಮ ಷರತ್ತಿದು! ಕಾಂಗ್ರೆಸ್ ಪ್ರಣಾಳಿಕೆ ಅಥವಾ ಬಜೆಟ್‌ನಲ್ಲಿ ಘೋಷಿಸದೇ ಅನುಷ್ಠಾನಕ್ಕೆ ತಂದಿರುವ ವಿನೂತನ ಯೋಜನೆ!! ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಭ್ರಷ್ಟಾಚಾರ ನಿಗ್ರಹದ ರೀತಿಯಿದು! ಸರ್ಕಾರದ ಹಿರಿಯ ಅಧಿಕಾರಿಗಳಿಗೆ ಒಂದು ದಿನ ರಜೆ ಸಿಗುವುದೇ ದೊಡ್ಡ ಮಾತು. ಆದರೆ ಒಬ್ಬ ಹಿರಿಯ ಹಾಗೂ ಪ್ರಾಮಾಣಿಕ […]

ನೀತಿ ಸಂಹಿತೆ ಜಾರಿ ಭಯ ಕಡತಗಳಿಗೆ ತರಾತುರಿ ಸಹಿ, 18 ಕೈಗಾರಿಕೆಗಳಿಗೆ ಸಿದ್ದು ಗ್ರೀನ್ ಸಿಗ್ನಲ್

Wednesday, March 5th, 2014
Siddaramaiah

ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಯೋಜನೆಗಳ ಕಡತ ವಿಲೇವಾರಿ ತ್ವರಿತಗೊಳಿಸಿದ್ದು, ಮಂಗಳವಾರ ನಡೆದ ಉನ್ನತಮಟ್ಟದ ಸಭೆಯಲ್ಲಿ 13770 ಕೋಟಿ ಮೊತ್ತದ 18 ಕೈಗಾರಿಕಾ ಕಾಮಗಾರಿಗಳಿಗೆ ಒಪ್ಪಿಗೆ ನೀಡಿದ್ದಾರೆ. ನೀತಿ ಸಂಹಿತೆ ಜಾರಿಯಾದ ನಂತರ ಯೋಜನೆ ಆರಂಭಕ್ಕೆ ಅಡ್ಡಿಯಾಗುವ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ಸಿಎಂ ಸಿದ್ದರಾಮಯ್ಯ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ವಿಶೇಷ ಒತ್ತು ನೀಡುತ್ತಿದ್ದಾರೆ. ಮಂಗಳವಾರ ಇದಕ್ಕೆ ಇನ್ನಷ್ಟು ವೇಗ ನೀಡಿದ ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ಹಲವು […]

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷೆಯಾಗಿ ಜಯಮಾಲ?

Tuesday, March 4th, 2014
Jayalalitha

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷೆಯಾಗಿ ಹಿರಿಯ ನಟಿ ಡಾ. ಜಯಮಾಲ ಅವರು ನೇಮಕವಾಗುವುದು ಬಹುತೇಕ ಖಚಿತವಾಗಿದೆ. ಜಯಮಾಲ ಅವರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದು, ಈ ಸಂಬಂಧ ಒಂದೆರಡು ದಿನಗಳಲ್ಲಿ ಸರ್ಕಾರದ ಅಧಿಕೃತ ಅದೇಶ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಬಿಜೆಪಿ ಸರ್ಕಾರ ವಿಧಾನ ಪರಿಷತ್ ಸದಸ್ಯರೂ ಆಗಿರುವ ನಟ ತಾರಾ ಅವರನ್ನು ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, […]

ವಿವಾದದ ನಡುವೆ ಬಿತ್ತು ಎತ್ತಿನಹೊಳೆಗೆ ಅಡಿಗಲ್ಲು

Tuesday, March 4th, 2014
Yettinaholege

ಮಂಗಳೂರು: ಬಂದ್ ಹಾಗೂ ಪ್ರತಿಭಟನೆ ನಡುವೆಯೇ ವಿವಾದಿತ ಎತ್ತಿನಹೊಳೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಎತ್ತಿನಹೊಳೆ ಯೋಜನೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಬಂದ್ ಆಚರಿಸಿದರೆ, ಚಿಕ್ಕಬಳ್ಳಾಪುರದಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಕಪ್ಪು ಪಟ್ಟಿ ಹಾಗೂ ಖಾಲಿ ಪೈಪುಗಳನ್ನು ಪ್ರದರ್ಶಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು. ಈ ವೇಳೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿ, ಬಿಡುಗಡೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ನಗರದ ಹೊರ ವಲಯದ ಬಿ.ಬಿ. ರಸ್ತೆಯಲ್ಲಿರುವ (ಆದಿಚುಂಚನಗಿರಿ ಶಾಖಾ […]

ನನ್ನ ಬಜೆಟ್ ಸುಳ್ಳಿನ ಸರಮಾಲೆ ಅಲ್ಲ, ಸಾಧನೆಗಳ ಸರಮಾಲೆ: ಸಿಎಂ

Wednesday, February 26th, 2014
Siddaramaiah

ಬೆಂಗಳೂರು: ತಮ್ಮ ಬಜೆಟ್‌ನ್ನು ಸುಳ್ಳಿನ ಸರಮಾಲೆ ಎಂದಿದ್ದ ಪ್ರತಿಪಕ್ಷದ ನಾಯಕರಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನನ್ನ ಬಜೆಟ್ ಸುಳ್ಳಿನ ಸರಮಾಲೆ ಅಲ್ಲ. ಸಾಧನೆಗಳ ಸರಮಾಲೆ ಎಂದು ಬುಧವಾರ ಹೇಳಿದ್ದಾರೆ. ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಸಿಎಂ, ನಮ್ಮದು ನಡಿದಂತೆ ನಡೆಯುವ ಸರ್ಕಾರ. ಮೊದಲು ನೀವು ಬಜೆಟ್ ನೋಡುವ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳಿ ಎಂದು ಪ್ರತಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿದರು. ನನ್ನ ಬಜೆಟ್ ಸುಳ್ಳಿನ ಸರಮಾಲೆ […]

ಲೋಕಾ ವ್ಯಾಪ್ತಿಗೆ ಮುಖ್ಯಮಂತ್ರಿ ಸಂಪುಟ ಸದಸ್ಯರು

Saturday, February 22nd, 2014
Siddaramaiah

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಲೋಕಪಾಲ ಕಾಯಿದೆ ಹಿನ್ನೆಲೆಯಲ್ಲಿ ರಾಜ್ಯದ ಲೋಕಾಯುಕ್ತ ಕಾಯ್ದೆಯನ್ನು ಬಲಪಡಿಸುವ ವಿಧೇಯಕವನ್ನು ಸೋಮವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸುವ ಮಹತ್ವದ ನಿರ್ಧಾರಕ್ಕೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಹೊಸ ಕಾನೂನಿನ ಪ್ರಕಾರ ಮುಖ್ಯಮಂತ್ರಿ ಕಚೇರಿಯನ್ನೂ ಲೋಕಾಯುಕ್ತ ವ್ಯಾಪ್ತಿಗೆ ಒಳಪಡಿಸಲು ನಿರ್ಧರಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿ, ಸಂಪುಟದ ಇತರೆ ಎಲ್ಲ ಸದಸ್ಯರು, ಮುಖ್ಯ ಕಾರ್ಯದರ್ಶಿಯನ್ನು […]

ಕೃಷ್ಣಾ; ಸುಪ್ರೀಂಗೆ ಮೊರೆ

Wednesday, February 19th, 2014
Siddaramaiah

ಬೆಂಗಳೂರುಃ ಕೃಷ್ಣಾ ನದಿ ನೀರು ಹಂಚಿಕೆ ವಿಷಯದಲ್ಲಿ ಕೃಷ್ಣಾ ಜಲವಿವಾದ ನ್ಯಾಯಾಧಿಕರಣ ಮುಂದುವರಿದ ವರದಿಯಲ್ಲಿ ನೀಡಿರುವ ಕೆಲವು ಸ್ಪಷ್ಟೀಕರಣ ಹಾಗೂ ಮಾರ್ಪಾಡುಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಅನುಮತಿ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನ್ಯಾಯಾಧಿಕರಣದ ತೀರ್ಪಿನ ನಂತರ ರಾಜ್ಯ ಸರ್ಕಾರ ಕಾನೂನು ಮತ್ತು ತಾಂತ್ರಿಕ ಪರಿಣಿತರೊಂದಿಗೆ ಚರ್ಚೆ ನಡೆಸಿದ ನಂತರ ವಿಶೇಷ ಅನುಮತಿಗೆ ಸುಪ್ರೀಂಕೋರ್ಟ್‌ಗೆ ಹೋಗುವುದು ಸೂಕ್ತ ಎಂಬ ಸಲಹೆ ಬಂದಿದೆ. ಹೀಗಾಗಿ ಅರ್ಜಿ ಸಲ್ಲಿಸಲಾಗುತ್ತಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದರು. ಕೃಷ್ಣಾ […]

ಕೆಂಪೇಗೌಡ ಬಡಾವಣೆ 5000 ನಿವೇಶನ ಹಂಚಿಕೆಗೆ ಬಿಡಿಎ ಶೀಘ್ರ ಅರ್ಜಿ ಆಹ್ವಾನ

Saturday, February 8th, 2014
siddaramaiah

ಬೆಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜಧಾನಿ ಜನತೆಗೆ ನಿವೇಶನ ಭಾಗ್ಯ ದೊರಕಿಸಲು ತೀರ್ಮಾನಿಸಿದೆ. ಬಿಡಿಎ ನಿರ್ಮಿಸುತ್ತಿರುವ ಕೆಂಪೇಗೌಡ ಬಡಾವಣೆಯಲ್ಲಿ 5000 ನಿವೇಶನ ಹಂಚಿಕೆ ಮಾಡಲು ಮಾರ್ಚ್ ಅಂತ್ಯದೊಳಗೆ ಅರ್ಜಿ ಅಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಬಿಡಿಎ ನಿರ್ಮಿಸಿದ ವಿವಿಧ ಪ್ರಮುಖ ರಸ್ತೆಗಳ ಕೆಳ ಸೇತುವೆಗಳನ್ನು ಶುಕ್ರವಾರ ಉದ್ಘಾಟಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಿಡಿಎ ಕಳೆದ 10 ವರ್ಷಗಳಿಂದ ನಗರದ ಜನತೆಗೆ ನಿವೇಶನ ನೀಡಿಲ್ಲ. ಇನ್ನುಮುಂದೆ ಹೀಗಾಗ ಬಾರದೆಂದು ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನ […]

ಬೆಂವಿವಿ ವಿಭಜನೆ ಅಗತ್ಯ

Thursday, February 6th, 2014
siddaramaiah

ಬೆಂಗಳೂರು:  ಬೆಂಗಳೂರು ವಿಶ್ವವಿದ್ಯಾಲಯ ಅತ್ಯಂತ ದೊಡ್ಡದಾಗಿರುವುದರಿಂದ ವಿಭಜಿಸುವುದು ಅವಶ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಬೆಂವಿವಿ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸುವರ್ಣ ಮಹೋತ್ಸವ ಆಚರಣೆ ಚಟುವಟಿಕೆಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 3.5ಲಕ್ಷ ವಿದ್ಯಾರ್ಥಿಗಳು: ಈ ಹಿಂದೆ ವಿವಿ 32 ಕಾಲೇಜು ಹೊಂದಿತ್ತು. 16,300 ವಿದ್ಯಾರ್ಥಿಗಳಿದ್ದರು. ಇಂದು 3.5ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 650ಕ್ಕೂ ಹೆಚ್ಚಿನ ಕಾಲೇಜುಗಳು ಇಂದು ಸಂಯೋಜನೆ ಪಡೆದಿರುವುದರಿಂದ ವಿವಿ ವ್ಯಾಪ್ತಿ ಬಹಳ ದೊಡ್ಡದಾಗಿದೆ. ಈ ಹಿನ್ನೆಲೆಯಲ್ಲಿ ವಿವಿ […]