Blog Archive

ಬೆಂಗಳೂರು : ಸಿದ್ದರಾಮಯ್ಯ ವಿರುದ್ಧವೇ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

Tuesday, January 21st, 2020
siddaramaiah

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ನಾಯಕತ್ವಕ್ಕಾಗಿ ಪಕ್ಷದ ನಾಯಕರ ನಡುವಿನ ಮುಸುಕಿನ ಗುದ್ದಾಟ ಈಗ ಬೀದಿಗೆ ಬಂದಿದ್ದು, ಎರಡು ಹುದ್ದೆ ವಿಭಜನೆಗೆ ವಿರೋಧಿಸಿದ್ದ ಸಿದ್ದರಾಮಯ್ಯ ವಿರುದ್ಧ ಪರಮೇಶ್ವರ್‌, ಡಿ.ಕೆ.ಶಿವಕುಮಾರ್‌ ಬಹಿರಂಗವಾಗಿಯೇ ತಿರುಗೇಟು ನೀಡಿದ್ದಾರೆ. ಹೊಸ ಬೆಳವಣಿಗೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಕಾರ್ಯಕರ್ತರು ಪಕ್ಷದ ಕಚೇರಿ ಮುಂದೆಯೇ ಪ್ರತಿಭಟನೆ ಮಾಡುವ ಮೂಲಕ ನಾಯಕತ್ವದ ಗಲಾಟೆಯನ್ನು ಬೀದಿಗೆ ತಂದಿದ್ದಾರೆ. ಇದರ ಹಿಂದೆ ಡಿ.ಕೆ.ಶಿವಕುಮಾರ್‌ ಆಪ್ತರು ಸೇರಿಕೊಂಡಿದ್ದಾರೆಂದು ಆರೋಪಿಸಲಾಗಿದೆ. ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷದ ನಾಯಕ ಎರಡು ಹುದ್ದೆಗಳು ಪ್ರತ್ಯೇಕವಾಗಬೇಕೆಂದು ಪರಮೇಶ್ವರ್‌ […]

ಮಂಗಳೂರು : ಹಿಂಸಾಚಾರ ಪ್ರಕರಣ; ಸಿಐಡಿ ತನಿಖೆ ಸಿದ್ದರಾಮಯ್ಯ ಆಕ್ಷೇಪ

Monday, December 23rd, 2019
Siddaramaiah

ಮಂಗಳೂರು : ನಗರದಲ್ಲಿ ಇತ್ತೀಚೆಗೆ ನಡೆದಿದ್ದ ಹಿಂಸಾಚಾರ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಂದು ಮಂಗಳೂರು ನಗರಕ್ಕೆ ಆಗಮಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ವಿಮಾನ ನಿಲ್ದಾಣದಲ್ಲಿ ಮಾತನಾಡಿದರು. ಸಿಐಡಿ ಇಲಾಖೆಯಲ್ಲಿ ಕೆಲಸ ಮಾಡುವವರು ಪೊಲೀಸರೇ. ಈಗ ಪ್ರಕರಣವನ್ನು ಪೊಲೀಸರಿಂದಲೇ ತನಿಖೆ ಮಾಡಿಸುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿದರು. ಅಲ್ಲದೆ, ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಈ ಬಗ್ಗೆ ಹಿಂದೆಯೂ ಒತ್ತಾಯಿಸಿದ್ದೇವೆ. ಮುಂದೆಯೂ […]

ಪೇಜಾವರ ಶ್ರೀಗಳ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಲಿರುವ ಉಮಾ ಭಾರತಿ, ಸಿದ್ದರಾಮಯ್ಯ

Monday, December 23rd, 2019
pejawar

ಮಣಿಪಾಲ : ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅನಾರೋಗ್ಯದಿಂದಾಗಿ ಕಳೆದ ಶುಕ್ರವಾರ ಪೇಜಾವರ ಶ್ರೀಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೃತಕ ಉಸಿರಾಟ ವ್ಯವಸ್ಥೆ ಮುಂದುವರಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿಯೇ ಚಿಕಿತ್ಸೆ ಮುಂದುವರಿದಿದೆ. ಔಷಧ ಪ್ರಮಾಣ ಹೆಚ್ಚಿಸುವ ಅಥವಾ ಚಿಕಿತ್ಸಾ ವಿಧಾನ ಬದಲಿಸುವ ಬಗ್ಗೆ ಇಂದು ವೈದ್ಯರ ತಂಡ ತೀರ್ಮಾನ ಮಾಡಲಿದೆ. ಬಿಜೆಪಿ ಹಿರಿಯ ನಾಯಕಿ, ಪೇಜಾವರ ಶ್ರೀಗಳ ಶಿಷ್ಯೆ ಉಮಾಭಾರತಿ ಇಂದು […]

ಗಾಳಿ ಸುದ್ದಿಗಳನ್ನು ನಂಬಿ ಯಾರೂ ಆತಂಕಪಡಬೇಡಿ, ನಾನು ಆರೋಗ್ಯವಾಗಿದ್ದೇನೆ : ಸಿದ್ದರಾಮಯ್ಯ

Wednesday, December 11th, 2019
Siddaramaiahh

ಬೆಂಗಳೂರು : ಗಾಳಿ ಸುದ್ದಿಗಳಿಗೆ ಆತಂಕಪಡಬೇಡಿ. ನಾನು ಆರೋಗ್ಯವಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಆರೋಗ್ಯದ ಕುರಿತು ಟ್ವೀಟ್ ಮಾಡಿದ ಅವರು, ನಾನು ಆರೋಗ್ಯವಾಗಿದ್ದೇನೆ. ನಿಯಮಿತವಾದ ಆರೋಗ್ಯ ತಪಾಸಣೆಗಾಗಿ ವೈದ್ಯರ ಬಳಿ ಹೋಗಿದ್ದೇನೆ. ಗಾಳಿ ಸುದ್ದಿಗಳನ್ನು ನಂಬಿ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಇಂದು ಬೆಳಗ್ಗೆ 6:30 ಸುಮಾರಿಗೆ ಸಿದ್ದರಾಮಯ್ಯಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸಂಬಂಧಿಕರು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇತ್ತೀಚೆಗೆ ಉಪಚುನಾವಣೆಯಲ್ಲಿ […]

ಸಿದ್ದರಾಮಯ್ಯನವರಿಗೆ ಮರ್ಯಾದೆ ಇದ್ದರೆ ಕ್ಷಮೆ ಕೇಳಬೇಕು : ಸೊಗಡು ಶಿವಣ್ಣ

Tuesday, December 10th, 2019
shivanna

ತುಮಕೂರು : ಸಿದ್ದರಾಮಯ್ಯನವರಿಗೆ ನಾಡಿನ ಜನ ಗೃಹ ಬಂಧನದ ಶಿಕ್ಷೆ ಕೊಟ್ಟಿದ್ದಾರೆ. ಹಾಗಾಗಿ ಮರ್ಯಾದೆ ಇದ್ದರೆ ಇವರು ನಾಡಿನ ಜನರ ಕ್ಷಮೆ ಕೇಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯರ ವಿರುದ್ದ ಮಾಜಿ ಸಚಿವ ಸೊಗಡು ಶಿವಣ್ಣ ಗುಡುಗಿದ್ದಾರೆ. ಸಿದ್ದರಾಮಯ್ಯನವರು ಮಾತೆತ್ತಿದ್ರೆ ಯಡಿಯೂರಪ್ಪನವರಿಗೆ ಟೀಕೆ ಮಾಡುತ್ತಿದ್ದರು. ಜೈಲಿಗೆ ಹೋಗಿದ್ರು ಜೈಲಿಗೆ ಹೋಗಿದ್ರು ಎಂದು ಹೊದಲೆಲ್ಲಾ ಹೇಳುತ್ತಿದ್ರು. ಇವತ್ತು ಕರ್ನಾಟಕ ಜನ ದುರಹಂಕಾರಿ ಸಿದ್ದರಾಮಯ್ಯ ಹೋಗಬೇಕು ಎಂದು ಸಿಎಂ ಯಡಿಯೂರಪ್ಪನವರ ಪರ ತೀರ್ಪು ಕೊಟ್ಟಿದ್ದಾರೆ ಎಂದು ಹೇಳಿದರು. ರಾಜೀನಾಮೆ ಕೊಡುವುದರ […]

ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗುವ ಹುಚ್ಚು ಹಿಡಿದಿದೆ : ಸಚಿವ ಕೆ.ಎಸ್. ಈಶ್ವರಪ್ಪ

Saturday, November 30th, 2019
Eshwarappa

ಬೆಂಗಳೂರು : ಸಿದ್ದರಾಮಯ್ಯ ಅವರಿಗೆ ಮುಪ್ಪು ಬಂದಿದೆ, ದೇಶ, ಸಮಾಜ, ಅಭಿವೃದ್ಧಿಗಾಗಿ ಧ್ಯಾನ ಮಾಡಲಿ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗುವ ಹುಚ್ಚು ಹಿಡಿದಿದೆ. ಇನ್ನಾದರೂ ದೇಶ, ಧರ್ಮ, ಹಿಂದುಳಿದವರು, ದಲಿತರ ಉದ್ದಾರಕ್ಕೆ ಪ್ರಯತ್ನಿಸಲಿ, ಧ್ಯಾನ‌ ಮಾಡಲಿ ಎಂದು ಹೇಳಿದರು. ಸಿದ್ದರಾಮಯ್ಯ ಅವರು ತಾವು ಹೋದ ಪಕ್ಷವನ್ನು ಛಿದ್ತ ಛಿದ್ರ ಮಾಡುತ್ತಿದ್ದಾರೆ. ಜಾತಿ, ಜಾತಿಗಳ ನಡುವೆ ಬೆಂಕಿ ಹಚ್ಚುತ್ತಿದ್ದಾರೆ. ಅವರು ಖಂಡಿತ ಮುಂದೆ […]

ಮಾಜಿ ಸಿಎಂ ಸಿದ್ದರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ : ನಳಿನ್ ಕುಮಾರ್ ಕಟೀಲ್ ಟೀಕೆ

Saturday, November 30th, 2019
nalin-kumar

ಮಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ. ಕಳೆದ ಬಾರಿಯ ಚುನಾವಣೆ ಸಂದರ್ಭ ನಾನೇ ಸಿಎಂ ಎಂದರು. ಕುಮಾರಸ್ವಾಮಿಯ ನಿರ್ಗಮನದ ಬಳಿಕ ಮತ್ತೆ ಅದನ್ನೇ ಹೇಳುತ್ತಿದ್ದಾರೆ. ಆದರೆ, ಅವರ ಗ್ರಹಚಾರ ಸರಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದರು. ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಸಿದ್ದರಾಮಯ್ಯ ಅವರ ಹೇಳಿಕೆಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ನಳಿನ್ ಕಾಂಗ್ರೆಸ್ ಬುಗರಿ ಆಡಿಸಿದರೆ ನಾವು ಚಕ್ರ ತಿರುಗಿಸುತ್ತೇವೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಒಂದಾಗಿದ್ದಾರೆ. ಚುನಾವಣೆ ಬಳಿಕ ಕೈ-ದಳ […]

ಅನರ್ಹ ಶಾಸಕರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Saturday, November 16th, 2019
anarharu

ಮೈಸೂರು : ಕೋರ್ಟ್‌ ತೀರ್ಪು ಬಂದ ನಂತರ ಆಪರೇಷನ್ ಕಮಲದ ಸತ್ಯವನ್ನು ಒಬ್ಬೊಬ್ಬರಾಗಿ ಬಾಯ್ಬಿಡುತ್ತಿದ್ದು, ಇದು ಜನರಿಗೆ ಅರ್ಥವಾಗುತ್ತದೆ, ಇವರೆಲ್ಲ ಅನರ್ಹರೇ ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳಿದರು. ಇಂದು ತಮ್ಮ ಮನೆ ಮುಂದೆ ಮಾಧ್ಯಮಗಳ ಜೊತೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಆಪರೇಷನ್ ಕಮಲದ ರಹಸ್ಯವನ್ನು ಕೋರ್ಟ್ ತೀರ್ಪು ಬಂದ ನಂತರ ಒಬ್ಬೊಬ್ಬರು ಸತ್ಯ ಹೇಳುತ್ತಿದ್ದಾರೆ ಇದು ಜನರಿಗೆ ಅರ್ಥವಾಗುತ್ತದೆ. ಇವರೆಲ್ಲಾ ಅನರ್ಹರೇ ಎಂದು ಕೋರ್ಟ್ ತೀರ್ಪು ಕೊಟ್ಟಿದೆ. ಅನರ್ಹತೆಯ ಪಟ್ಟ ಕಟ್ಟಿಕೊಂಡೆ ಜನರ ಬಳಿಗೆ ಹೋಗಬೇಕು […]

ಎಚ್.ಡಿ.ದೇವೇಗೌಡ-ಬಿಎಸ್‌ವೈ ಮಾತುಕತೆ ಗೊತ್ತಿಲ್ಲ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Wednesday, November 6th, 2019
siddaramaiahh

ಉಡುಪಿ : ಎಚ್.ಡಿ.ದೇವೇಗೌಡ ಹಾಗೂ ಬಿ.ಎಸ್.ಯಡಿಯೂರಪ್ಪ ನಡುವೆ ನಡೆದಿದೆ ಎನ್ನಲಾದ ಫೋನ್ ಸಂಭಾಷಣೆ ಬಗ್ಗೆ ನನಗೇನೂ ಗೊತ್ತಿಲ್ಲ. ಮೈತ್ರಿ ಸರ್ಕಾರ ಪತನಕ್ಕೆ ಯಾರು ಕಾರಣರು ಎಂಬುದಕ್ಕೆ ಈಗಾಗಲೇ ಉತ್ತರ ಕೊಟ್ಟಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಡುಪಿಯಲ್ಲಿ ಬುಧವಾರ ನಡೆಯಲಿರುವ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಮಂಗಳವಾರ ಆಗಮಿಸಿದ ಅವರು ಕಾಪು ಸಾಯಿರಾಧಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದು, ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಉಪಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಒಳ ಒಪ್ಪಂದ ಮಾಡಿಕೊಳ್ಳುತ್ತದೆಯೇ ಎಂಬುದು ನನಗೆ ಗೊತ್ತಿಲ್ಲ. ಇವರ […]

ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಸಿ.ಎಚ್.ವಿಜಯಶಂಕರ್ ಇಂದು ಬಿಜೆಪಿಗೆ ಮರುಸೇರ್ಪಡೆ

Tuesday, November 5th, 2019
CH-Vijayshankar

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಪ್ತ, ಮಾಜಿ ಸಂಸದ ಸಿ.ಎಚ್.ವಿಜಯಶಂಕರ್ ಇಂದು ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ವಿಜಯಶಂಕರ್ ಬಿಜೆಪಿ ಸೇರ್ಪಡೆಗೊಂಡರು. ಈ ವೇಳೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಬಿ.ಜೆ.ಪುಟ್ಟಸ್ವಾಮಿ ಸೇರಿದಂತೆ ಮೈಸೂರು ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಸಿಎಂ, ವಿಶೇಷ ಕಾರಣಕ್ಕೆ ವಿಜಯಶಂಕರ್ ಅವರು ಪಕ್ಷ ಬಿಟ್ಟಿದ್ದರು. ಆದರೆ ಬಹಳ ದಿನಗಳಿಂದಲೂ ಬಿಜೆಪಿ ಸೇರಲು ಮುಂದಾಗಿದ್ದರು. […]