Blog Archive

ಸಿದ್ದರಾಮಯ್ಯ ತಾಕತ್ತಿದ್ದರೆ ಬೇರೆ ಸಮುದಾಯದ ಧಾರ್ಮಿಕ ಕೇಂದ್ರಗಳಿಗೆ ಕೈಹಾಕಲಿ

Wednesday, March 7th, 2018
ananth-kumar

ಮಂಗಳೂರು: ಜನಸುರಕ್ಷಾ ಯಾತ್ರೆ ಬೆಂಗಳೂರು ತಲುಪುವಾಗ ಸಿಎಂ ಕುರ್ಚಿ ಖಾಲಿಯಾಗಬೇಕು. ನಾವು ಯಡಿಯೂರಪ್ಪ ಅವರಿಗೆ ಸಿಎಂ ಪಟ್ಟ ಕಟ್ಟುತ್ತೇವೆ ಎಂದು ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಹೇಳಿದ್ದಾರೆ. ಸುರತ್ಕಲ್‌ನ ಕುಳಾಯಿಯಲ್ಲಿ ಬಿಜೆಪಿಯ ಜನಸುರಕ್ಷಾ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯ ಜನಸುರಕ್ಷಾ ಯಾತ್ರೆ ಎಂಬ ಸುನಾಮಿಗೆ ಸಿಎಂ ಸಿದ್ದರಾಮಯ್ಯ ಹೊರಟು ಹೋಗಬೇಕು. ಇಲ್ಲದಿದ್ದರೆ ಈ ಸುನಾಮಿಯೇ ನಿಮ್ಮನ್ನು ಎಳೆದು ತರುತ್ತದೆ ಎಂದರು ಎಚ್ಚರಿಸಿದ್ದಾರೆ. ಸಿಎಂ ಸಿದ್ಧರಾಮಯ್ಯರನ್ನು ಕೆಳಗಿಳಿಸಲು ಬಿಜೆಪಿಯೇ ಬೇಕೆಂದಿಲ್ಲ. ಅವರ ಪಕ್ಷದವರೇ ಸಾಕು. ಖರ್ಗೆ, […]

“ಬಷೀರ್ ಬಗ್ಗೆ ಮಾತನಾಡದ ಬಿಜೆಪಿಗೆ ಅಲ್ಪ ಸಂಖ್ಯಾತರ ಘಟಕ ಯಾಕೆ?”

Saturday, January 6th, 2018
busheer

ಮಂಗಳೂರು: ದೀಪಕ್ ರಾವ್ ಕೊಲೆಯ ವಿರುದ್ದ ಬಂದ್, ರಸ್ತೆ ತಡೆ ಅಂತ ಬೀದಿಗಿಳಿದಿರುವ ಬಿಜೆಪಿ ಮುಖಂಡರು ಸಾವು ಬದುಕಿನ ಮಧ್ಯೆ ಒದ್ದಾಡುತ್ತಿರುವ ಅಬ್ದುಲ್ ಬಷೀರ್ ಬಗ್ಗೆ ಯಾಕೆ ಮಾತಾಡುವುದಿಲ್ಲ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ದೀಪಕ್ ಹತ್ಯೆಗೆ ಪ್ರತೀಕಾರ ಎಂದು ರಸ್ತೆಯಲ್ಲಿ ಹೋಗುವ ಅಮಾಯಕ ಮುಸಲ್ಮಾನನ್ನು ಕಡಿದು ಕೊಲೆ ಮಾಡುವುದು ಬಿಜೆಪಿಗೆ ಸಮ್ಮತವೇ?” ಎಂದು ಪ್ತಶ್ನಿಸಿದ್ದಾರೆ. “ಬಿಜೆಪಿ ಮುಖಂಡರಾದ ಸಿ.ಟಿ. ರವಿ, ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ […]

ಕರಾವಳಿಯಲ್ಲಿ ಮತ್ತೆ ರಕ್ತಪಾತ: ಸಹನೆಯ ಕಟ್ಟೆಯೊಡೆದ ಆಕ್ರೋಶ

Thursday, January 4th, 2018
strike

ಮಂಗಳೂರು: ಮಂಗಳೂರು ಹೊರವಲಯದ ಕಾಟಿಪಳ್ಳ ಬಳಿ ಬರ್ಬರವಾಗಿ ಕೊಲೆಯಾದ ಭಜರಂಗ ದಳ ಕಾರ್ಯಕರ್ತ ದೀಪಕ್ ರಾವ್(32) ಹತ್ಯೆಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ ವ್ಯಕ್ತವಾಗಿದೆ. ಯುವಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ಕಾಟಿಪಳ್ಳದ ಬಳಿ ಬೈಕಿನಲ್ಲಿ ಹೋಗುತ್ತಿದ್ದ ಅವರನ್ನು ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಮಾಡಿದ್ದರು. ಇತ್ತೀಚೆಗಷ್ಟೇ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯಿಂದ ಪ್ರಕ್ಷುಬ್ಧವಾಗಿದ್ದ ಕರಾವಳಿ, ಮತ್ತೊಮ್ಮೆ ಅಶಾಂತಿಯಲ್ಲಿ ಬೇಯುತ್ತಿದೆ. ರಮಾನಾಥ ರೈ-ಶೋಭಾ ಕರಂದ್ಲಾಜೆ ಜಟಾಪಟಿ ಮೃತ ದೀಪಕ್ ಶವದೆದುರು ಅವರ ಕುಟುಂಬಸ್ತರು ಮುಗಿಲುಮುಟ್ಟುವಂತೆ […]

ಎತ್ತಿನಹೊಳೆ ಯೋಜನೆ ಕೆಲವರ ಜೇಬು ತುಂಬಿಸಲು ರೂಪಿಸಿರುವ ಯೋಜನೆ: ಸಿ.ಟಿ.ರವಿ

Thursday, January 19th, 2017
C T Ravi

ಮಂಗಳೂರು: ಎತ್ತಿನಹೊಳೆ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಒಂದು ಹನಿ ನೀರು ಕೂಡಾ ಸಿಗುವುದಿಲ್ಲ. ಬಿಳಿ ಆನೆ ಆಗಿರುವ ಎತ್ತಿನಹೊಳೆ ಕೆಲವರ ಜೇಬು ತುಂಬಿಸಲು ರೂಪಿಸಿರುವ ಯೋಜನೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ. ಆರೋಪಿಸಿದರು. ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಯೋಜನೆಗೆ 2,300 ಕೋಟಿ ವೆಚ್ಚ ಮಾಡಲಾಗಿದೆ. ಯೋಜನೆಗೆ ಪರಿಸರ ಇಲಾಖೆ ಅನುಮತಿ ಇಲ್ಲ. ಸಮರ್ಪಕ ಯೋಜನಾ ವರದಿ ಇಲ್ಲ. ಒಟ್ಟು ಯೋಜನೆಯಲ್ಲಿಯೇ ಗೊಂದಲ ಇದೆ. ಈ ಹಿನ್ನೆಲೆಯಲ್ಲಿ ಎತ್ತಿನಹೊಳೆ […]

ಚುನಾವಣೆಯಲ್ಲಿ ಒಂದೇ ರೀತಿಯ ಫಲಿತಾಂಶವನ್ನು ನಿರೀಕ್ಷಿಸಲು ಸಾಧ್ಯವಿಲ್ಲ :ಸಿ.ಟಿ. ರವಿ

Monday, March 18th, 2013
CT Ravi

ಮಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಮುಂಬರುವ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಅಲ್ಲ, ಈ ಚುನಾವಣೆಯಲ್ಲಿ ಬಂದ ಫಲಿತಾಂಶವೇ ಮುಂದಿನ ಚುನಾವಣಾ ಫಲಿತಾಂಶ ವಾಗುವ ಸಾಧ್ಯತೆ ತೀರ ಕಡಿಮೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹೇಳಿದರು. ಅವರು ರವಿವಾರ ಸುದ್ದಿಗಾರರ ಜತೆಗೆ ಸ್ಥಳೀಯ ಚುನಾವಣಾ ಫಲಿತಾಂಶ ಕುರಿತಂತೆ ಮಾತನಾಡಿದ ಅವರು, ಉತ್ತರಪ್ರದೇಶ ಮತ್ತು ದಿಲ್ಲಿಯಲ್ಲಿ ನಡೆದ ಚುನಾವಣಾ ಫಲಿತಾಂಶವನ್ನು ಗಮನಿಸಿದಾಗ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಗೆಲುವು ಸಾಧಿಸಿದರೆ, ಅನಂತರದ […]

ಸುಲ್ತಾನ್ ಬತ್ತೇರಿ, ತಣ್ಣೀರು ಬಾವಿ ನಡುವಿನ ತೂಗುಸೇತುವೆ ನಿರ್ಮಾಣ ಕಾಮಗಾರಿಗೆ ಸಚಿವ ಸಿ.ಟಿ.ರವಿ ಚಾಲನೆ

Friday, January 18th, 2013
Ropeway Bridge Sultan Battery to Tannirbavi

ಮಂಗಳೂರು : ಸುಲ್ತಾನ್ ಬತ್ತೇರಿ ಮತ್ತು ತಣ್ಣೀರು ಬಾವಿ ಪ್ರದೇಶಗಳನ್ನು ಸಂಪರ್ಕಿಸುವ ತೂಗುಸೇತುವೆ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಚಾಲನೆ ನೀಡಿದರು. ಸುಮಾರು 12 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ತೂಗುಸೇತುವೆಯು ದೇಶದಲ್ಲೇ ಅತೀ ಉದ್ದವಾದ ಸೇತುವೆಯಾಗಲಿದ್ದು ,410 ಮೀಟರುಗಳಷ್ಟು ಉದ್ದ, 25 ಮೀಟರುಗಳಷ್ಟು ಎತ್ತರವಿರಲಿದೆ ಹಾಗೂ 3 ಮೀಟರುಗಳಷ್ಟು ಅಗಲವಿರಲಿದೆ ಎಂದು ರಾಜ್ಯ ವಿಧಾನ ಸಭೆಯ ಉಪಸಭಾಪತಿ ಎನ್.ಯೋಗೀಶ್ ಭಟ್ ತಿಳಿಸಿದರು. ಕಾಮಗಾರಿಯನ್ನು ಮಂಗಳೂರು ಮೂಲದ ಯೋಜಕ ಇಂಡಿಯಾ ಪ್ರೈವೇಟ್ ಲಿಮಿಟೆಡ್ […]

ಬಿಜೆಪಿ ಮುಂದಿನ ಚುನಾವಣೆಗೆ ಸಾಕಸ್ಟು ಸಿದ್ದತೆ : ಸಿ. ಟಿ. ರವಿ

Wednesday, January 2nd, 2013
CT Ravi

ಮಂಗಳೂರು :ಬಿಜೆಪಿ ಪಕ್ಷವು ಮುಂದಿನ ಚುನಾವಣೆಗೆ ಸಾಕಸ್ಟು ಸಿದ್ದತೆಗಳನ್ನು ಮಾಡಿಕೊಂಡಿದ್ದು, ಮುಂದಿನ ಚುನಾವಣೆಯಲ್ಲೂ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸ ತಮಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಮಂಗಳೂರಿನ ಪತ್ರಿಕಾ ಭವನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರಕಾರದ 12.5 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣವಾಗಿರುವ ಪತ್ರಿಕಾ ಭವನದ ಸಭಾಂಗಣಕ್ಕೆ ಅವಶ್ಯ ಇರುವ ಸೀಲಿಂಗ್‌ ಮತ್ತು ವಿದ್ಯುತ್‌ ಜೋಡಣೆ ಕಾಮಗಾರಿಗೆ ಅವಶ್ಯ ನೆರವು ಒದಗಿಸುವುದಾಗಿ ಭರವಸೆ […]

ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ತಡೆಗಟ್ಟಲು ಉನ್ನತ ಶಿಕ್ಷಣ ಇಲಾಖೆಯಲ್ಲಿ ಮಾರ್ಗಸೂಚಿ ರಚನೆ

Monday, December 31st, 2012
CT Ravi

ಮಂಗಳೂರು : ರಾಜ್ಯದಲ್ಲಿ ವಿದ್ಯಾರ್ಥಿನಿಯರು ಮತ್ತು ಮಹಿಳಾ ಸಿಬ್ಬಂದಿಗಳ ಮೇಲೆ ನಡೆಯತ್ತಿರುವ ದೌರ್ಜನ್ಯಗಳನ್ನು ತಡೆಯಲು ಉನ್ನತ ಶಿಕ್ಷಣ ಇಲಾಖೆಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿ ಹೇಳಿದರು. ಡಿಸೆಂಬರ್ 29 ಶನಿವಾರ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು ದಿಲ್ಲಿ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಮತ್ತು ಸಾವಿನ ಘಟನೆ ದೇಶದ ಆತ್ಮಸಾಕ್ಷಿ ಪ್ರಶ್ನಿಸುವಂಥದ್ದು. ಅತ್ಯಾಚಾರಿಗಳಿಗೆ ಕಠಿಣ ವಿಧಿಸಬೇಕು ಮತ್ತು ಆರು ತಿಂಗಳೊಳಗೆ ಪ್ರಕರಣ ಇತ್ಯರ್ಥಕ್ಕೆ ಕಾನೂನು ತಿದ್ದುಪಡಿ […]

ಉತ್ಸವಗಳು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಅನಾವರಣಗೊಳಿಸುತ್ತವೆ : ಸಿ.ಟಿ. ರವಿ

Saturday, December 22nd, 2012
Karavali Utsav 2012

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಶುಕ್ರವಾರ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಾಂಸ್ಕೃತಿಕ ಹಬ್ಬ ಕರಾವಳಿ ಉತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯು ಹಲವು ಸಾಂಸ್ಕೃತಿಕ ಆಚರಣೆಗಳನ್ನು ಹೊಂದಿರುವ ಪ್ರದೇಶವಾಗಿದ್ದು ಉತ್ಸವಗಳು ನಮ್ಮಲ್ಲಿ ಸಾಮುದಾಯಿಕ ಪ್ರಜ್ಞೆಯನ್ನು ಜಾಗೃತಗೊಳಿಸುತ್ತವೆ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಅನಾವರಣಗೊಳಿಸುತ್ತವೆ. ಈ ಉದ್ದೇಶದಿಂದಲೇ ನಮ್ಮ ಪೂರ್ವಿಕರು ಉತ್ಸವಗಳನ್ನು ಆಯೋಜಿಸಿದ್ದಾರೆ ಎಂದು ಅವರು ಹೇಳಿದರು. […]

ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜ್ ನಲ್ಲಿ ವಿವಿಧ ಸಂಶೋಧನಾ ಕೇಂದ್ರಗಳ ಉದ್ಘಾಟನಾ ಸಮಾರಂಭ

Saturday, November 10th, 2012
Sahyaadri College

ಮಂಗಳೂರು :ಅಡ್ಯಾರ್‌ನಲ್ಲಿರುವ ಸಹ್ಯಾದ್ರಿ ಕಾಲೇ ಜ್ ಅಫ್ ಎಂಜಿನಿಯರಿಂಗ್ ಹಾಗೂ ಮ್ಯಾನೇಜ್‌ಮೆಂಟ್‌ನಲ್ಲಿ ಕರ್ನಾಟಕ ಸರಕಾರ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಸಹಯೋಗದೊಂದಿಗೆ ನೂತನವಾಗಿ ಸ್ಥಾಪನೆಗೊಂಡಿರುವ ಸಂಶೋಧನಾ ಕೇಂದ್ರ, ಇನ್‌ಕುಬೇಶನ್ ಸೆಂಟರ್, ಉದ್ಯೋಗಾವಕಾಶ ಒದಗಣೆ ಕೇಂದ್ರ, ತರಬೇತಿ ಕೇಂದ್ರಗಳು ಹಾಗೂ ಅಲಹಾಬಾದ್‌ನ ಐಐಐಟಿ ಸಂಸ್ಥೆಯ ಸಹಯೋಗದಲ್ಲಿ ಸ್ಥಾಪನೆಗೊಂಡಿರುವ ಉತ್ಕೃಷ್ಟತಾ ಕೇಂದ್ರ ಹಾಗೂ ನಾವಿನ್ಯತಾ ಪ್ರಯೋಗಾಲಯ ಮೊದಲಾದವುಗಳ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವ ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾದ ಸಿ.ಟಿ ರವಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಭಾರತ ದೇಶವು […]