Blog Archive

ಚಿತ್ರದುರ್ಗ ಕ್ಷೇತ್ರದಲ್ಲಿ ನಾನೂ ಕೂಡಾ ಟಿಕೆಟ್ ಆಕಾಂಕ್ಷಿ: ನಟಿ ಭಾವನಾ

Monday, February 5th, 2018
dakshina-kannda

ಮಂಗಳೂರು: ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ನಾನೂ ಕೂಡಾ ಟಿಕೆಟ್ ಆಕಾಂಕ್ಷಿ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಕಾರ್ಯದರ್ಶಿ ಹಾಗೂ ನಟಿ ಭಾವನಾ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ನನ್ನ ತಂದೆಯ ಊರು. ಚಿತ್ರದುರ್ಗ ಕ್ಷೇತ್ರದ ಜನ ಶಿಕ್ಷಣಕ್ಕಾಗಿ ದೂರದ ಊರುಗಳಿಗೆ ಅಲೆಯುವಂತಾಗಿದೆ. ಆ ಸಮಸ್ಯೆಯನ್ನು ನಿವಾರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅದರೆ, ಚಿತ್ರದುರ್ಗ ಕ್ಷೇತ್ರದಲ್ಲಿ ರಘು ಆಚಾರ್, ಬಸವರಾಜ್, ಷಣ್ಮುಗಂ ಕೂಡಾ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಹೈಕಮಾಂಡ್ ಸೂಚನೆಯಂತೆ ನಾನು ಮುಂದುವರಿಯುತ್ತೇನೆ ಎಂದರು. ಪಕ್ಷದ ಪ್ರಚಾರಕ್ಕಾಗಿ ಈಗಾಗಲೇ […]

ಸಾಧನೆ ಜನರಿಗೆ ತಿಳಿಸಿ ಕಾಂಗ್ರೆಸ್‌ ಗೆಲ್ಲಿಸಿ: ಶಾಸಕಿ ಶಕುಂತಳಾ ಶೆಟ್ಟಿ

Friday, January 19th, 2018
shankuntala-shetty

ಪುತ್ತೂರು: ವಿಧಾನಸಭಾ ಕ್ಷೇತ್ರವೊಂದರ ಅಭಿವೃದ್ಧಿಗೆ 800 ಕೋಟಿ ರೂ. ಅನುದಾನ ತರಿಸುವ ಸಾಧನೆ ಮಾಡಿದ್ದು, ಪಕ್ಷದ ನರ-ನಾಡಿಗಳನ್ನು ಅರಿತಿರುವ ಕಾರ್ಯಕರ್ತರು ಮುಂದಿನ ಬಾರಿಯೂ ಕಾಂಗ್ರೆಸ್‌ ಗೆಲುವಿಗೆ ತಮ್ಮ ಶ್ರಮವನ್ನು ತೋರ್ಪಡಿಸಬೇಕು ಎಂದು ಸಂಸದೀಯ ಕಾರ್ಯದರ್ಶಿ ಹಾಗೂ ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ವಿನಂತಿಸಿದರು. ಸುಭದ್ರಾ ಸಭಾಂಗಣದಲ್ಲಿ ಗುರುವಾರ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಬ್ಲಾಕ್‌ ವ್ಯಾಪ್ತಿಯ ಬೂತ್‌ ಪ್ರತಿನಿಧಿಗಳ ತರಬೇತಿ ಕಾರ್ಯಾಗಾರವನ್ನು ಅವರು ಉದ್ಘಾಟಿಸಿದರು. ರಾಜ್ಯ ಸರಕಾರದ ಸಾಧನಾ ಸಮಾವೇಶಕ್ಕೆ ಪುತ್ತೂರಿನಲ್ಲಿ ದಾಖಲೆಯ […]

ಜಾತಿಯನ್ನು ಮುಂದಿಟ್ಟು ಪಕ್ಷವನ್ನು ದೂರುವುದು ಶೋಭೆಯಲ್ಲ : ಹರೀಶ್ ಕುಮಾರ್

Saturday, October 28th, 2017
Harish Kumar

ಮಂಗಳೂರು :  ಜಾತಿಯನ್ನು ಮುಂದಿಟ್ಟು ಪಕ್ಷವನ್ನು ದೂರುವುದು ಶೋಭೆಯಲ್ಲ, ಬಿಲ್ಲವರಿಗೆ ಬಹಳಷ್ಟು ಸ್ಥಾನಗಳನ್ನು ಕಾಂಗ್ರೆಸ್ ನೀಡಿದ್ದರೂ ಕೂಡಾ ಬಿಲ್ಲವರಿಗೆ ಪಕ್ಷ ಏನೂ ಮಾಡಿಲ್ಲ ಎಂದು ಆರೋಪಿಸಿ ಕೆಲವರು ಪಕ್ಷ ತ್ಯಜಿಸಲು ಹೊರಟಿರುವುದರಲ್ಲಿ ಅರ್ಥವಿಲ್ಲ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕಾಂಗ್ರೆಸ್ ಪಕ್ಷ ರಾಜಕೀಯವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಬಿಲ್ಲವರಿಗೆ ಬಹಳಷ್ಟು ಒತ್ತು ನೀಡಿದೆ, ಕಾಂಗ್ರೆಸ್ ಪಕ್ಷದಿಂದ ಬಹಳಷ್ಟು ಅವಕಾಶಗಳನ್ನು ಪಡೆದು ಸ್ವಾರ್ಥಕ್ಕಾಗಿ ಇದೀಗ ಜಾತಿಯನ್ನು ಮುಂದಿಟ್ಟು […]