Blog Archive

ಹುಬ್ಬಳ್ಳಿ : ಇಂದಿರಾ ಕ್ಯಾಂಟೀನ್ ಇನ್ನೂ ಉದ್ಘಾಟನೆ ಆಗಿಲ್ಲ

Tuesday, August 7th, 2018
Hubli indira canteen

ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇಂದಿರಾ ಕ್ಯಾಂಟಿನ್. ಹು-ಧಾ ಅವಳಿ ನಗರದಲ್ಲಿಯೂ ಕೂಡ ಇಂದಿರಾ ಕ್ಯಾಂಟಿನ್ ತಲೆ ಎತ್ತಿದ್ದವು. ಉದ್ಘಾಟನೆಯಾಗಬೇಕು ಎನ್ನುವಷ್ಟರಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಯಿತು.‌ ಈಗಸಮ್ಮಿಶ್ರ ಸರ್ಕಾರವಿದ್ದು, ಸರ್ಕಾರ ರಚನೆಯಾಗಿ 2 ತಿಂಗಳು ಮುಗಿದರೂ ಇಂದಿರಾ ಕ್ಯಾಂಟಿನ್ ಗೆ ಇನ್ನೂ ಉದ್ಘಾಟನೆ ಭಾಗ್ಯ ಬಂದಿಲ್ಲ. ಬಡವರು, ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ನೀಡಬೇಕಿದ್ದ ಕ್ಯಾಂಟಿನನ್ನು ಜಿಲ್ಲಾ ಉಸ್ತುವಾರಿ ಸಚಿವರಿಂದಲೇ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಮಾಡಿಸಬೇಕು ಎಂಬ ಮಾತು ಕೇಳಿ […]

ಹುಬ್ಬಳ್ಳಿ : ನೃಪತುಂಗ ಬೆಟ್ಟದ ಬಳಿ ಯುವಕನಿಗೆ ಇರಿತ

Monday, August 6th, 2018
Nrupatunga hill

ಹುಬ್ಬಳ್ಳಿ : ನಗರದ ನೃಪತುಂಗ ಬೆಟ್ಟದ ಬಳಿಯ ವೆಂಕಟೇಶ್ವರ ಕಾಲನಿಯಲ್ಲಿ ಹಾಡಹಗಲೇ ಯುವಕನಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ಸೋಮವಾರ ನಡೆದಿದೆ.‌ ಸತೀಶ್ ದಲಬಂಜನ್ (32) ಎಂಬಾತ ಇರಿತಕೊಳ್ಳಗಾದ ವ್ಯಕ್ತಿ. ಯುವಕರ ಗುಂಪೊಂದು ಗಲಾಟೆ ಮಾಡುತ್ತ ಸತೀಶ್ಗೆ ಚಾಕುವಿನಿಂದ ಇರಿದಿದ್ದಾರೆ. ಇರಿತದ ತೀರ್ವತೆಯ ಪರಿಣಾಮ ಆತನ ಹೊಟ್ಟೆ ಹಾಗೂ ಕೈಗೆಲ್ಲ ಗಾಯಗಳಾಗವೆ. ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಖೇಶ ಕುಮಾರ್ ಚೌಧರಿ ಮತ್ತು ಆತನ ಸಹಚರರು ಚಾಕು ಇರಿದಿದ್ದಾರೆ ಎಂದು ಆರೋಪಿಸಲಾಗಿದ್ದು, ಈ […]

ಹುಬ್ಬಳ್ಳಿ : ಸಿಎಂ ಕುಮಾರಸ್ವಾಮಿ ಬಾಡಿಗೆ ಮನೆ ಮಾರಾಟಕ್ಕೆ!

Wednesday, August 1st, 2018
HD kumaraswamy

ಹುಬ್ಬಳ್ಳಿ : ಉತ್ತರ ಕರ್ನಾಟಕ‌ ಭಾಗದಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೋಸ್ಕರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹುಬ್ಬಳ್ಳಿಯ ಭೈರಿದೇವರಕೊಪ್ಪದಲ್ಲಿ ಮನೆ ಮಾಡಿ ಅದ್ಧೂರಿ ಗೃಹ ಪ್ರವೇಶ ಮಾಡಿದ್ರು. ಆದರೆ ಈಗ ಅದೇ ಮನೆಯನ್ನು ಮನೆ ಮಾಲೀಕರು ಮಾರಾಟಕ್ಕಿಟ್ಟಿದ್ದಾರೆ. ಇದು ಕುಮಾರಸ್ವಾಮಿ ಅವರನ್ನು ಮುಜುಗರಕ್ಕೀಡು ಮಾಡಿದೆ. ಸಿಎಂ ಆದಾಗಿನಿಂದಲೂ ಒಂದಲ್ಲ ಒಂದು ಸಮಸ್ಯೆಗಳಿಗೆ ಸಿಲುಕುತ್ತಲೇ ಇರುವ ಕುಮಾರಸ್ವಾಮಿ ಅಧಿಕಾರ ವಹಿಸಿಕೊಂಡ ಹೊಸತರಲ್ಲಿ ಸಾಲ ಮನ್ನಾ ವಿಚಾರವಾಗಿ ಮುಜುಗರಕ್ಕೀಡಾಗಿದ್ದದರು. ಈಗ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ವಿವಾದಕ್ಕೆ ಸಿಲುಕಿದ್ದಾರೆ. ಇದೆಲ್ಲದರ ನಡುವೆ […]

ನಾವು ಬದುಕಿರುವವರೆಗೂ ರಾಜ್ಯವನ್ನು ಇಬ್ಭಾಗ ಮಾಡಲು ಬಿಡಲ್ಲ: ಬಿ.ಎಸ್.ಯಡಿಯೂರಪ್ಪ

Tuesday, July 31st, 2018
yedyurappa

ಹುಬ್ಬಳ್ಳಿ: ಕರ್ನಾಟಕ ಏಕೀಕರಣ ಆದ ಮೇಲೆ ಈ ರೀತಿ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಅಂತ ಯಾವ ಮುಖ್ಯಮಂತ್ರಿಯೂ ಮತನಾಡಿರಲಿಲ್ಲ. ಆದರೆ,ಸಿಎಂ ಕುಮಾರಸ್ವಾಮಿ ಒಡೆದಾಳುವ ನೀತಿಯನ್ನ ಅನುಸರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿಎಂ ಮಾಧ್ಯಮದ ಮಿತ್ರರ ಮೇಲೆ ಹಗುರವಾಗಿ ಮಾತನಾಡುತ್ತಿದ್ದಾರೆ. ದೇವೇಗೌಡರು ಕುಮಾರಸ್ವಾಮಿ ಹೇಳಿಕೆ ಬಗ್ಗೆ ಒಂದು ಶಬ್ದ ಮಾತನಾಡುವುದಿಲ್ಲ. ಅವರ ತಂದೆಯ ಒಪ್ಪಿಗೆ ಇಲ್ಲದೆ ಇವರು ಈ ಮಾತು ಆಡುವುದಿಲ್ಲ ಎಂದರು. ಬೆಳಗಾವಿಯಲ್ಲಿ ನೂರಾರು […]

ಸಾರಿಗೆ ಸಂಸ್ಥೆಗಳಿಗೆ ಹೊಸ ರೀತಿಯ ಕಾಯಕಲ್ಪ: ಸಚಿವ ಡಿ ಸಿ ತಮ್ಮಣ್ಣ

Monday, July 30th, 2018
dc-thimanna

ಹುಬ್ಬಳ್ಳಿ: ನೂತನ ಸರ್ಕಾರದಲ್ಲಿ ಸಾರಿಗೆ ಸಂಸ್ಥೆಗಳಿಗೆ ಹೊಸ ರೀತಿಯ ಕಾಯಕಲ್ಪಗಳನ್ನು ಕಲ್ಪಿಸಲಾಗುತ್ತಿದೆ. ಸಾರಿಗೆ ಸಂಸ್ಥೆಗಳಿಗೆ ಸಂಬಂಧಿಸಿದ ಆಸ್ತಿಗಳ ಸರ್ವೇ ಹಾಗೂ ಲೆಕ್ಕ ಪರಿಶೋಧನೆಯನ್ನು ಬೇರೊಂದು ಸಂಸ್ಥೆಗಳಿಂದ ನಡೆಸಲಾಗುತ್ತಿದ್ದು, ಪ್ರತಿ ತಿಂಗಳು ವರದಿಯನ್ನು ಅವಲೋಕಿಸಲಾಗುವುದು. ವೆಚ್ಚ ಹಾಗೂ ಸೋರಿಕೆಯನ್ನು ತಡೆದು ಎರಡು ವರ್ಷಗಳಲ್ಲಿ ಸಾರಿಗೆ ಸಂಸ್ಥೆಯನ್ನು ಲಾಭದ ಹಾದಿಗೆ ತರಲಾಗುವುದು ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಅವರು ಹೇಳಿದರು. ಅವರು ಭಾನುವಾರ ನಗರದ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದ್ದ ಕೆ.ಎಸ್.ಆರ್.ಟಿ.ಸಿ. ಆಫೀಸರ್ಸ್ ವೆಲ್ಫೇರ್ ಅಸೋಶಿಯೇಶನ್ ಅನ್ನು ಉದ್ಘಾಟಸಿ ಮಾತನಾಡಿ, 1.20 ಲಕ್ಷ […]

ಸಾರಿಗೆ ಸಚಿವರಿಂದ ಹುಬ್ಬಳ್ಳಿ ಸಿಬಿಟಿ ಹಾಗೂ ಹಳೇ ಬಸ್ ನಿಲ್ದಾಣಗಳಿಗೆ ಭೇಟಿ

Monday, July 30th, 2018
transport

ಹುಬ್ಬಳ್ಳಿ: ಸಾರಿಗೆ ಸಚಿವ ಡಿಸಿ ತಮ್ಮಣ್ಣ ರವಿವಾರ ಸಂಜೆ ನಗರದ ಸಿಬಿಟಿ ಹಾಗೂ ಹಳೇ ಬಸ್ ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸಿಟಿ ಬಸ್ ಟರ್ಮಿನಲ್ ವೀಕ್ಷೀಸಿದ ಸಚಿವರು, ಕಾಮಗಾರಿಯನ್ನು ಅಧಿಕಾರಿಗಳು ಪರಿಶೀಲಿಸಿ ಮೂರು ತಿಂಗಳಲ್ಲಿ ಬಸ್ ನಿಲ್ದಾಣವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಲಭ್ಯವಾಗುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಬೇಡಿಕೆ ಗಣತಿ ಆಧಾರದ ಮೇಲೆ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಬೇಕು. ಅನಗತ್ಯವಾಗಿ ಹೆಚ್ಚಿನ ಅಂತಸ್ತು ಹಾಗೂ ಕಟ್ಟಡಗಳನ್ನು ನಿರ್ಮಾಣ […]

ಗೌರಿ ಲಂಕೇಶ ಹತ್ಯೆ ಪ್ರಕರಣ..ಹುಬ್ಬಳ್ಳಿಯಲ್ಲಿ ಆರೋಪಿಗಳ ಮನೆ ತಪಾಸಣೆ!

Monday, July 30th, 2018
gaouri-lankesh

ಹುಬ್ಬಳ್ಳಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಇತ್ತೀಚೆಗೆ ನಗರದಲ್ಲಿ ಬಂಧಿಸಿರುವ ಇಬ್ಬರು ಆರೋಪಿಗಳ ಮನೆಯಲ್ಲಿ ಭಾನುವಾರ ಎಸ್‌ಐಟಿ ಅಧಿಕಾರಿಗಳು ತಪಾಸಣೆ ನಡೆಸಿದರು. ಶನಿವಾರದಿಂದಲೇ ಆರೋಪಿಗಳಾದ ಗಣೇಶ ಮಿಸ್ಕಿನ್ ಹಾಗೂ ಅಮಿತ ಬದ್ದಿಯವರ ಮನೆಯಲ್ಲಿ ಎಸ್‌ಐಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಇದುವರೆಗೂ ಯಾವುದೇ ದಾಖಲೆಗಳು ಹಾಗೂ ಪುರಾವೆಗಳು ದೊರೆತಿಲ್ಲ. ಕೇಶ್ವಾಪುರ ಭಾಗದ ಚೈತನ್ಯ ನಗರದಲ್ಲಿರುವ ಗಣೇಶ ಮನೆ ಹಾಗೂ ದಾಜೀಬಾನ ಪೇಟೆಯ ತಾಡಪತ್ರಿ ಗಲ್ಲಿಯಲ್ಲಿರುವ ಅಮಿತ್ ಮನೆಯ ಸದಸ್ಯರನ್ನು ಹೊರಗೆ ಕಳುಹಿಸಿ ಆರೋಪಿಗಳೊಂದಿಗೆ ಎಸ್‌ಐಟಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. […]

ಜನಪ್ರತಿನಿಧಿಗಳು ಸರ್ಕಾರಿ ಶಾಲೆ ಉನ್ನತೀಕರಣಕ್ಕೆ ಪ್ರಯತ್ನಿಸಬೇಕು : ಬಸವರಾಜ ಹೊರಟ್ಟಿ 

Saturday, July 28th, 2018
Aequs

ಹುಬ್ಬಳ್ಳಿ : ಜನಪ್ರತಿನಿಧಿಗಳು ತಾವು ಓದಿದ ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಲು ಪ್ರಯತ್ನಿಸಬೇಕು. ಶಾಲೆಗಳನ್ನು ದತ್ತು ತೆಗೆದುಕೊಂಡು ಉನ್ನತೀಕರಿಸಿದಾಗ ಶಾಲೆಗಳಲ್ಲಿ ಹಾಜರಾತಿ ಹೆಚ್ಚಳವಾಗುತ್ತದೆ ಆಗ ಸರ್ಕಾರ  ಕನ್ನಡ ಶಾಲೆಗಳನ್ನು ಮುಚ್ಚುವ ಪ್ರಮೆಯವೇ ಬರುವುದಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಅವರು ಹುಬ್ಬಳ್ಳಿಯ ಸರಕಾರಿ ಪ್ರಾಥಮಿಕ ಶಾಲೆ ಕೆಬಿಎಸ್ ನಂ.16 ರಲ್ಲಿ ಏಕಸ್ ಪ್ರತಿಷ್ಠಾನವು ಶಿಕ್ಷಣ ಇಲಾಖೆಯ ಸರ್ವ ಶಿಕ್ಷಣ ಅಭಿಯಾನ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಅಗಸ್ತ್ಯ ಇಂಟರ್ನ್ಯಾಷನಲ್  ಫೌಂಡೇಷನ್ ಪಾಲುದಾರಿಕೆಯಲ್ಲಿ ಸರಕಾರಿ ಮಕ್ಕಳಿಗೆ ಸ್ಟೆಮ್ […]

ತೃತೀಯ ರಂಗ ಒಂದಾಗಿರುವ ಹಿನ್ನೆಲೆಯಲ್ಲಿ ಬಿಜೆಪಿಯವರು ಹತಾಶರಾಗಿದ್ದಾರೆ: ಕೃಷ್ಣ ಬೈರೇಗೌಡ

Tuesday, July 24th, 2018
krishna-boregowda

ಹುಬ್ಬಳ್ಳಿ : ತೃತೀಯ ರಂಗ ಒಂದಾಗಿರುವ ಹಿನ್ನೆಲೆಯಲ್ಲಿ ಬಿಜೆಪಿಯವರು ಹತಾಶರಾಗಿದ್ದಾರೆ. ಹೀಗಾಗಿ ರಾಹುಲ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ನಗರದ ವಿಮಾನ‌ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ತಮ್ಮ ಮಿತ್ರಪಕ್ಷಗಳಿಗೆ ನೀಡಿದ್ದ ಆಶ್ವಾಸನೆಗಳನ್ನ ಈಡೇರಿಸಿಲ್ಲ. ಹೀಗಾಗಿ ಶಿವಸೇನೆ, ಪಿಡಿಪಿ, ಟಿಡಿಪಿ ಸೇರಿದಂತೆ ಇನ್ನಿತರ ಮಿತ್ರಪಕ್ಷಗಳು ಬಿಜೆಪಿಯಿಂದ ದೂರವಾಗುತ್ತಿವೆ. ಇದೀಗ ವಿಪಕ್ಷಗಳು ಒಂದಾಗಿರುವುದರಿಂದ ಬಿಜೆಪಿಗೆ ನಡುಕ ಹುಟ್ಟಿದೆ. ಅಲ್ಲದೇ ಮುಂಬರುವ ಚುನಾವಣೆಯಲ್ಲಿ ತೃತೀಯರಂಗ ಒಗ್ಗೂಡಿ ಚುನಾವಣೆ ಎದುರಿಸಲಿದೆ. ಪ್ರಧಾನಿ ಆಯ್ಕೆ […]

ಗೌರಿ ಲಂಕೇಶ್ ಹತ್ಯೆ ಪ್ರಕರಣ..ಮತ್ತಿಬ್ಬರ ಆರೋಪಿಗಳ ಬಂಧನ!

Monday, July 23rd, 2018
gouri-lankesh

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹುಬ್ಬಳ್ಳಿ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಹುಬ್ಬಳ್ಳಿ ನಿವಾಸಿಗಳಾದ ಅಮಿತ್ ರಾಮಚಂದ್ರ ಮತ್ತು ಗಣೇಶ್ ಮಿಸ್ಕಿ ಬಂಧಿತ ಆರೋಪಿಗಳು. ಇಬ್ಬರನ್ನೂ ಎಸ್ಐಟಿ ಕಚೇರಿಯಲ್ಲಿ ಅಧಿಕಾರಿಗಳು ವಿಚಾರಣೆಗಾಗಿ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದರು. ವಿಚಾರಣೆ ವೇಳೆ ಗೌರಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳು ಭಾಗಿಯಾಗಿರುವ ಬಗ್ಗೆ ಎಸ್ಐಟಿ ಅಧಿಕಾರಿಗಳಿಗೆ ಖಚಿತಪಟ್ಟ ಹಿನ್ನೆಲೆಯಲ್ಲಿ ಇಬ್ಬರನ್ನೂ ಬಂಧನಕ್ಕೊಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. […]