Blog Archive

ಕುತೂಹಲ ಮೂಡಿಸಿದೆ ಸಿಎಂ ಸಿದ್ದರಾಮಯ್ಯ-ನಟ ಸುದೀಪ್ ಭೇಟಿ

Thursday, April 5th, 2018
sudeep

ಬೆಂಗಳೂರು: ಚಿತ್ರನಟ ಸುದೀಪ್ ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಭೇಟಿ ಸಂದರ್ಭ ಯಾವುದೇ ರಾಜಕೀಯ ಚರ್ಚೆ ಅಥವಾ ಪ್ರಚಾರ ಸಂಬಂಧ ಮಾತುಕತೆ ನಡೆದಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಪಕ್ಷದ ಪರ ಪ್ರಚಾರ ಸಂಬಂಧ ಸಿಎಂ ಈ ಸಂದರ್ಭ ಪ್ರಸ್ತಾಪಿಸಿದ್ದು, ಸುದೀಪ್ ಅದಕ್ಕೆ ಯಾವ ಪ್ರತಿಕ್ರಿಯೆ ನೀಡಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಕಳೆದ ವಾರವಷ್ಟೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದ […]

2ನೇ ಬಾರಿ ಹೆಚ್‌ಡಿಕೆ- ಸುದೀಪ್‌ ಭೇಟಿ… ಗರಿಗೆದರಿದ ಕುತೂಹಲ

Monday, April 2nd, 2018
kiccha-sudeep

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ಏರುತ್ತಿರುವ ಬೆನ್ನಲ್ಲೇ ಕನ್ನಡ ಚಿತ್ರರಂಗದ ಬಹುಮುಖ ತಾರೆ ಕಿಚ್ಚ ಸುದೀಪ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಅವರನ್ನ 2ನೇ ಬಾರಿ ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ. ಹೌದು,ಇಂದು ನಟ ಸುದೀಪ್, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮನೆಗೆ ಭೇಟಿ ನೀಡಿದರು. ಉಭಯ ಕುಶಲೋಪರಿ ವಿಚಾರಿಸಿದರು, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಹಾಗು ನಟ ನಿಖಲ್ ಜೊತೆ ಉಪಹಾರ ಸೇಚಿಸಿದರು. ನಂತರ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಹೆಚ್‌ಡಿಕೆ ಕುಟುಂಬದ […]

ಜೆಡಿಎಸ್ ಅಧಿಕಾರಕ್ಕೆ ಬಂದರೆ ನಾನು ನೆಪಮಾತ್ರಕ್ಕೆ ಸಿಎಂ: ಹೆಚ್‌ಡಿಕೆ

Tuesday, March 6th, 2018
JDs-mangaluru

ಮಂಗಳೂರು: ಜೆಡಿಎಸ್ ಅಧಿಕಾರಕ್ಕೆ ಬಂದರೆ ನಾನು ನೆಪಮಾತ್ರಕ್ಕೆ ಸಿಎಂ. ರಾಜ್ಯದ ಆರೂವರೆ ಕೋಟಿ ಜನರೇ ನಿಜವಾದ ಮುಖ್ಯಮಂತ್ರಿಗಳು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಗಳೂರಿನಲ್ಲಿ ಬಲ್ಲವರೊಡನೆ ಬೌದ್ಧಿಕ ಸಂವಾದ ನಡೆಸಿದ ಅವರು, ಕೇವಲ ಅಧಿಕಾರಿಗಳ ಸಲಹೆಯನ್ನು ಅನುಸರಿಸಿ ರಾಜ್ಯಾಡಳಿತ ಮಾಡುವುದಲ್ಲ. ಜನರ ಸಲಹೆಗೆ ಮನ್ನಣೆ ಕೊಡುವುದೇ ಜೆಡಿಎಸ್‌ನ ಕಲ್ಪನೆ ಎಂದರು. ಎತ್ತಿನಹೊಳೆ ಯೋಜನೆಯ ಬಗ್ಗೆ ತಮ್ಮ ನಿಲುವೇನು ಎಂದು ಪರಿಸರವಾದಿ ದಿನೇಶ್ ಹೊಳ್ಳ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು […]

ಬೆಂಗಳೂರನ್ನ ಮೊದಲು ಹಾಳು ಮಾಡಿದ್ದೇ ಬಿಜೆಪಿ: ಹೆಚ್‌ಡಿಕೆ ವಾಗ್ದಾಳಿ

Friday, March 2nd, 2018
kumarswamy

ಮೈಸೂರು: ಮೊದಲು ಬೆಂಗಳೂರನ್ನ ಹಾಳು‌ ಮಾಡಿದ್ದೇ ಬಿಜೆಪಿಯವರು ಎಂದು ಬೆಂಗಳೂರು ರಕ್ಷಿಸಿ ಪಾದಯಾತ್ರೆ ಬಗ್ಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದು ನಗರದ ಖಾಸಗಿ ಹೋಟೆಲ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಬಿಜೆಪಿ ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಬಿಜೆಪಿಯವರು ಈಗ ಪಾದಯಾತ್ರೆಯನ್ನ ಏಕೆ ಮಾಡುತ್ತಿದ್ದಾರೆ ಗೊತ್ತಿಲ್ಲ. ಆದರೆ 5 ವರ್ಷದ ಆಡಳಿತದಲ್ಲಿ ಬೆಂಗಳೂರು ಅಭಿವೃದ್ಧಿಗೆ ಸಿದ್ದರಾಮಯ್ಯ ಏನನ್ನು ಕೊಟ್ಟಿಲ್ಲ‌. ಬೆಂಗಳೂರು ಮತ್ತು‌ ಮೈಸೂರನಲ್ಲಿ ಏನಾದರು‌ ಅಭಿವೃದ್ಧಿಯಾಗಿದೆ ಅಂದರೆ ಅದು‌ ನಮ್ಮ […]

ಯುವಕರು ಪಕೋಡ ಮಾರಿ ಬದುಕ್ತಿರೋದೆ ಮೋದಿ ಮೇಕ್‌ ಇನ್‌ ಇಂಡಿಯಾ: ಹೆಚ್‌ಡಿಕೆ ವ್ಯಂಗ್ಯ

Tuesday, January 30th, 2018
kumarswamy

ವಿಜಯಪುರ: ನಮ್ಮ ಯುವಕರು ಪಕೋಡ ಮಾರಾಟ ಮಾಡಿ ಬದುಬೇಕಿದೆ. ಇದೇ ಪ್ರಧಾನಿ ಮೋದಿ‌ ಅವರ ಮೇಕ್ ಇನ್ ಇಂಡಿಯಾ ಎಂದು ಉದ್ಯೋಗ ಸೃಷ್ಟಿ ಕುರಿತ ಪ್ರಧಾನಿ ಮೋದಿ ಹೇಳಿಕೆಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ಟಾಂಗ್‌ ನೀಡಿದ್ದಾರೆ. ಸೋಮವಾರದಿಂದ ಐದು ‌ದಿನಗಳ ವಿಜಯಪುರ‌ ಜಿಲ್ಲಾ ಪ್ರವಾಸದಲ್ಲಿರುವ ಅವರು ಮಾಧ್ಯಮದವರ ಜತೆ ಮಾತಾನಡಿದರು. ಪ್ರತಿ ವರ್ಷ 2ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಪ್ರಧಾನಿ ಮೇಕ್ ಇನ್ ಇಂಡಿಯಾ ಬಗ್ಗೆ ಮಾತನಾಡಿದ್ದರು. ಪಕೋಡ ಮಾರಾಟ ಮಾಡುವುದೂ ಸಹ‌ ಮೇಕ್ […]

ಹೆಚ್.ಡಿ.ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ : ಅಕ್ಬರ್ ಉಳ್ಳಾಲ್

Tuesday, March 26th, 2013
Akbar Ullal

ಮಂಗಳೂರು : ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು 117 ಸ್ಥಾನವನ್ನು ಪಡೆಯುವುದಲ್ಲದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬುದಾಗಿ ವಾರ್ತಾಮಿತ್ರ ಕನ್ನಡ ಮಾಸ ಪತ್ರಿಕೆ ಸಂಪಾದಕ ಅಕ್ಬರ್ ಉಳ್ಳಾಲ್ ಭವಿಷ್ಯ ನುಡಿದಿದ್ದಾರೆ. ಸೋಮವಾರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ   ಕುರಿತು ಮಾತನಾಡಿದ ಅವರು  ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಪಕ್ಷದ  ಹಿರಿಯ ನಾಯಕರು ಹಾಗು ಕಾರ್ಯಕರ್ತರ ನಡುವಿನ ಭಿನಾಭಿಪ್ರಾಯಗಳು ಮತ್ತು ಅನ್ಯ ಪಕ್ಷಗಳ ಕೆಲವು ಪಕ್ಷಾಂತರ ನಾಯಕರು ವಲಸೆ ಬಂದಿರುವುದು  ಕಾರಣವಾಗಿದೆ. ಆದರೆ […]

ಕುಡಿಯುವ ನೀರಿಗೆ ಶಾಶ್ವತ ಪರಿಹಾರ : ಹೆಚ್. ಡಿ ಕುಮಾರಸ್ವಾಮಿ

Saturday, January 5th, 2013
HD Kumaraswamy

ಮಂಗಳೂರು : ಅಸೈಗೋಳಿಯಲ್ಲಿ ನಡೆದ ಮಂಗಳೂರು ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ ಪಕ್ಷ ದ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಶುಕ್ರವಾರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮುಂದಿನ ಚುನಾವಣೆಗೆ ಜೆಡಿಎಸ್ ಪಕ್ಷ ಸಂಪೂರ್ಣ ಸಜ್ಜಾಗಿದ್ದು ಯಾವುದೇ ಸಮಯದಲ್ಲಿ ಚುನಾವಣೆ ಬಂದರೂ ಎದುರಿಸಿ ಅಧಿಕಾರಕ್ಕೆ ಬರುತ್ತದೆ, ಮುಂದಿನ ಸಂಕ್ರಾಂತಿ ವೇಳೆಗೆ ಪಕ್ಷವು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದರು. ಅಲ್ಲದೆ ಬಿಜೆಪಿ ನಾಯಕರ ಒಳಜಗಳದಿಂದಾಗಿ ಪಕ್ಷ ನಿಷ್ಕ್ರಿಯ ವಾಗಿದ್ದು ಸಾಧ್ಯವಿದ್ದರೆ ಬಿಜೆಪಿ ಸರಕಾರವನ್ನು ತ್ಯಜಿಸಿ […]