Blog Archive

ನಲಪಾಡ್‌ಗೆ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಮಂಜೂರು

Thursday, June 14th, 2018
nalapad

ಬೆಂಗಳೂರು: ವಿದ್ವತ್‌ ಮೇಲೆ ನಡೆದಿದ್ದ ಹಲ್ಲೆ ಪ್ರಕರಣ ಸಂಬಂಧ ನಲಪಾಡ್‌ ಹ್ಯಾರಿಸ್‌ಗೆ ಕೊನೆಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹೈಕೋರ್ಟ್ ಏಕಸದಸ್ಯ ಪೀಠದಿಂದ ನಲಪಾಡ್ ಹ್ಯಾರಿಸ್‌‌ಗೆ ಜಾಮೀನು ಮಂಜೂರಾಗಿದೆ. ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ಈ ಆದೇಶ ನೀಡಿದ್ದಾರೆ. 2 ಲಕ್ಷ ಬಾಂಡ್‌ ಮತ್ತು ಇಬ್ಬರ ಶೂರಿಟಿ ಜೊತೆಗೆ ಸಾಕ್ಷ್ಯ ನಾಶ ಮಾಡದಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಇದರೊಂದಿಗೆ ನಲಪಾಡ್ 116 ದಿನಗಳ ಜೈಲು ವಾಸ ಅಂತ್ಯಗೊಂಡಂತಾಗಿದೆ. ನಲಪಾಡ್ ಪರ ಹಿರಿಯ […]

ಕಂಬಳವನ್ನು ಉಳಿಸುವ ಸಲುವಾಗಿ ಜ. 28ರಂದು ನಡೆಯುವ ಹೋರಾಟಕ್ಕೆ ಜ್ಯಾತ್ಯಾತೀತವಾಗಿ ಬೆಂಬಲ

Wednesday, January 25th, 2017
District-Kambala-Committee1

ಮಂಗಳೂರು: ಅನಾದಿ ಕಾಲದಿಂದಲೂ ಆಚರಿಸಿಕೊಂಡು ಬರುತ್ತಿರುವ ಕಂಬಳವನ್ನು ಉಳಿಸುವ ಸಲುವಾಗಿ ಜ. 28ರಂದು ಮೂಡಬಿದ್ರೆಯಲ್ಲಿ ನಡೆಯುವ ಹೋರಾಟವನ್ನು ತೀವ್ರಗೊಳಿಸುವ ನಿಟ್ಟಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಇಂದು ಸಭೆ ನಡೆಯಿತು. ಪಕ್ಷಾತೀತ, ಜ್ಯಾತ್ಯಾತೀತವಾಗಿ ನಡೆಯುವ ಹೋರಾಟಕ್ಕೆ ಎಲ್ಲರೂ ಬೆಂಬಲ ಘೋಷಿಸಿದ್ದಾರೆ. ಕಂಬಳ ಹಿಂಸೆಯನ್ನು ಪ್ರಚೋದಿಸುವಂತಹ ಕ್ರೀಡೆ ಅಲ್ಲ. ಕಾಲ ಕಾಲಕ್ಕೆ ಪೌಷ್ಟಿಕ ಆಹಾರವನ್ನುಂಡು, ದೇಹಕ್ಕೆ ಸೂಕ್ತ ಮಸಾಜು ಮಾಡಿಸಿಕೊಂಡು, ಕೆಸರು ಗದ್ದೆಯಲ್ಲಿ ಓಡುವ ಕೋಣಗಳು ಅತ್ಯಂತ ಆರೋಗ್ಯದಾಯಕವಾಗಿರುತ್ತದೆ. ಕೃಷಿಗೆ ಬಳಸುವ ಎತ್ತುಗಳನ್ನಾದರೂ ನಿರ್ವಿರ್ಯಗೊಳಿಸುತ್ತಾರೆ. ಆದರೆ, ಕಂಬಳದ […]

ಹೈಕೋರ್ಟ್ ಸಂಚಾರಿ ಪೀಠಕ್ಕೆ ಆಗ್ರಹ: ತೀವ್ರಗೊಂಡ ಬೇಡಿಕೆ

Friday, November 4th, 2016
Sanchary Peeta

  ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ತೆರೆಯಬೇಕೆಂಬ ಬೇಡಿಕೆ ಬಲಗೊಳ್ಳುತ್ತಿದೆ. ಸಂಚಾರಿ ಪೀಠಕ್ಕೆ ನ್ಯಾಯವಾದಿಗಳು ಆಗ್ರಹಿಸುತ್ತಿರುವಾಗಲೇ ಅವರ ಬೇಡಿಕೆಗೆ ವಿವಿಧ ಸಂಘ ಸಂಸ್ಥೆಗಳಿಂದ ಬೆಂಬಲ ವ್ಯಕ್ತವಾಗುತ್ತಿದೆ. ಕಲಬುರಗಿ ಮತ್ತು ಧಾರವಾಡದಲ್ಲಿ ಆರಂಭಿಸಿದಂತೆ ಮಂಗಳೂರಿನಲ್ಲಿಯೂ ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸಬೇಕೆಂದು ನಮ್ಮ ಮನೆ ನಮ್ಮ ಊರು ವೇದಿಕೆ ಹಾಗೂ ಸರ್ಕಾರೇತರ ಸಂಘಟನೆಗಳ ಒಕ್ಕೂಟ ಸರ್ಕಾರವನ್ನು ಆಗ್ರಹಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ವೇದಿಕೆಯ ಪ್ರಧಾನ ಸಂಯೋಜಕ ಬಿ.ಎಸ್.ಚಂದ್ರು, ಬೇಡಿಕೆ ಈಡೇರಿಕೆಗಾಗಿ ಒಂದು ತಿಂಗಳೊಳಗೆ ಹೋರಾಟ ಆರಂಭಿಸುವುದಾಗಿ ತಿಳಿಸಿದರು. ಕರಾವಳಿ ಜಿಲ್ಲೆಗಳಾದ […]

ಗಣಿ ಹಗರಣ: ಧರಂ, ಎಚ್‌ಡಿಕೆ ವಿರುದ್ಧ ತನಿಖೆಗೆ ಹಸಿರು ನಿಶಾನೆ

Wednesday, March 5th, 2014
S.M.-Krishna

ನವದೆಹಲಿ: ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಿರುವ ಆರೋಪ ಕುರಿತು ಲೋಕಾಯುಕ್ತ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಪ್ರಕರಣಕ್ಕೆ ಸೀಮಿತವಾಗಿ ತಡೆಯಾಜ್ಞೆ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿದೆ. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಧರಂಸಿಂಗ್ ಅವರ ವಿರುದ್ಧ ಇರುವ ಆರೋಪ ಕುರಿತು ಲೋಕಾಯುಕ್ತ ಪೊಲೀಸರು ತಮ್ಮ ತನಿಖೆ ಮುಂದುವರಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಪ್ರಕರಣದಲ್ಲಿ ಹೆಸರಿಸಲಾಗಿರುವ ಐವರು ಐಎಎಸ್ ಅಧಿಕಾರಿಗಳ ವಿರುದ್ಧವೂ ತನಿಖೆ ಮುಂದುವರೆಸುವಂತೆ ಸುಪ್ರೀಂ […]

ಸ್ಥಳೀಯ ಸಂಸ್ಥೆ ಅಧ್ಯಕ್ಷ ಉಪಾಧ್ಯಕ್ಷರ ನೇಮಕ ಹೈಕೋರ್ಟ್ ಒಪ್ಪಿಗೆ

Tuesday, February 25th, 2014
High-Court

ಬೆಂಗಳೂರು: ಕಾನೂನು ತೊಡಕಿನಿಂದ ಕಳೆದೊಂದು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯದ ಸ್ಥಳೀಯ ಸಂಸ್ಥೆ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಯ ಚುನಾವಣೆಗೆ ಹೈಕೋರ್ಟ್ ಕೊನೆಗೂ ಹಸಿರು ನಿಶಾನೆ ತೋರಿದೆ. ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಯ ಮೀಸಲು ಪಟ್ಟಿಯನ್ನು ಮರು ತಯಾರಿಸುವಂತೆ ಏಕ ಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ಮುಖ್ಯ ನ್ಯಾ.ಡಿ.ಎಚ್.ವಘೇಲ ಹಾಗೂ ನ್ಯಾ.ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದ್ದು, ಶೀಘ್ರದಲ್ಲೇ ಚುನಾವಣೆ ನಡೆಸುವಂತೆ ಆದೇಶಿಸಿದೆ. ಮಾ.25ಕ್ಕೆ ಮುಂದೂಡಿಕೆ: ವಿವಾದಿತ ಮಂಗಳೂರು ನಗರಪಾಲಿಕೆ ಮೇಯರ್ ಹುದ್ದೆಯನ್ನು ಸಾಮಾನ್ಯ ಹಾಗೂ […]

ವಾಸುದೇವ ಅಡಿಗ ಕೊಲೆ ಆರೋಪಿ ಸುಬ್ರಹ್ಮಣ್ಯ ಉಡುಪ ಗೆ ಹೈಕೋರ್ಟ್ ನಿಂದ ಷರತ್ತು ಬದ್ದ ಜಾಮೀನು

Thursday, March 7th, 2013
Subrahmanya Udupa

ಬೆಂಗಳೂರು : ಆಸ್ತಿ ವಿವಾದಕ್ಕೆ ಸಂಬಂಧಿಸಿ ಕೊಲೆಯಾದ ವಾಸುದೇವ ಅಡಿಗ ಕೊಲೆ ಗೆ ಸಂಬಂಧಿಸಿ ಬಂಧನಕ್ಕೊಳಗಾದ ಆರೋಪಿ ಜೋತಿಷಿ ಸುಬ್ರಹ್ಮಣ್ಯ ಉಡುಪ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಕೆ.ಶ್ರೀಧರ್‌ ರಾವ್‌ ಅವರು, ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ವಾಸುದೇವ ಅಡಿಗ ಕೊಲೆಗೆ ಸಂಬಂಧಿಸಿ ಪ್ರಮುಖ ಆರೋಪಿ ರಮೇಶ ಬಾಯಾರಿ ಸೇರಿದಂತೆ ಸುಬ್ರಹ್ಮಣ್ಯ ಉಡುಪಮತ್ತು ಬೆಂಗಳೂರು ಮೂಲದ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು. ಆದರೆ ಜೋತಿಷಿ ಸುಬ್ರಹ್ಮಣ್ಯ ಉಡುಪ ರವರು ಅಡಿಗ ಕೊಲೆ […]

ಅಂಬೇಡ್ಕರ್ ಪ್ರತಿಮೆ ಸ್ಥಳಾಂತರಕ್ಕೆ ಒಪ್ಪಿದ ಸರ್ಕಾರ

Wednesday, February 27th, 2013
Ambedkar statue shifted

ಬೆಂಗಳೂರು : ಇಲ್ಲಿನ ವಿಧಾನಸೌಧ ಮುಂಭಾಗದ ಅಂಬೇಡ್ಕರ್ ಪ್ರತಿಮೆಯನ್ನು ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲು ಸರ್ಕಾರ ಒಪ್ಪಿಕೊಂಡಿದ್ದು ಈ ಮೂಲಕ  ವಿವಾದದ ಸ್ವರೂಪ ಪಡೆದುಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಸ್ಥಳಾಂತರ ವಿವಾದಕ್ಕೆ ಹೈಕೋರ್ಟ್ ಸೋಮವಾರ ಮಂಗಳ ಹಾಡಿದೆ. ಅಮರನಾಥನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹಿಂದಿನ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ, `ಪ್ರತಿಮೆಯನ್ನು 15 ದಿನಗಳಲ್ಲಿ ತಾತ್ಕಾಲಿಕವಾಗಿ ಸ್ಥಳಾಂತರ ಮಾಡಬೇಕು’ ಎಂದು ಡಿಸೆಂಬರ್ 12ರಂದು ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಕೆಲವು ದಲಿತ ಸಂಘಟನೆಗಳು […]

ಮಡೆಸ್ನಾನ ರಾಜ್ಯ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

Wednesday, December 19th, 2012
Made Snana

ಮಂಗಳೂರು :ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಡೆಸ್ನಾನ ಸೇವೆಗೆ ಸಂಬಧಿಸಿ ರಾಜ್ಯ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸರ್ವೋಚ್ಚ ನ್ಯಾಯಾಲಯ ಶುಕ್ರವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಮೂಲಕ ಮಡೆಸ್ನಾನವನ್ನು ಬೆಂಬಲಿಸುತ್ತಿದ್ದ ವರ್ಗದ ಕಾನೂನು ಹೋರಾಟ ಒಂದು ಹಂತಕ್ಕೆ ಯಶಸ್ವಿಯಾಗಿದೆ. ಈ ಹಿಂದೆ ಕೆಲ ಪ್ರಗತಿಪರ ಹೋರಾಟಗಾರರು ಹಾಗೂ ಬುದ್ಧಿಜಿವಿಗಳು ಈ ಪದ್ಧತಿಯನ್ನು ವಿರೋಧಿಸಿದ್ದರು ಮತ್ತು ನಿಷೇಧಿಸುವಂತೆ ಕೇಳಿಕೊಂಡಿದ್ದರು ಅಲ್ಲದೆ ಇತ್ತೀಚೆಗಷ್ಟೇ ಮಡೆಸ್ನಾನವನ್ನು ತಾತ್ಕಾಲಿಕವಾಗಿ ನಿಷೇಧಿಸುವಂತೆ ಹೈಕೋರ್ಟ್ ನಿಂದ ಆದೇಶ ತರುವಲ್ಲಿ ಯಶಸ್ವಿಯಾಗಿದ್ದರು. ಆದರೆ ರಾಜ್ಯ ಹೈಕೋರ್ಟ್ ನೀಡಿದ ಆದೇಶದ […]

ಬಿ.ಎಸ್.ಯಡಿಯೂರಪ್ಪ ವಿಚಾರಣೆಗೆ ಹೈಕೋರ್ಟ್ ತಡೆ

Friday, September 30th, 2011
BS Yeddyurappa

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯ ನೀಡಿದ್ದ ಸಮನ್ಸ್‌ಗೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅದರೆ ಯಡಿಯೂರಪ್ಪ ವಿರುದ್ಧ ಇರುವ 2 ಮತ್ತು 3ನೇ ದೂರಿಗೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠ ನೀಡಿರುವ ತಡೆಯಾಜ್ಞೆ ಪ್ರಶ್ನಿಸಲು ಸಿರಾಜಿನ್ ಬಾಷಾ ನಿರ್ಧರಿಸಿದ್ದಾರೆ. ಸಿರಾಜಿನ್ ಪರ ವಕೀಲ ಹೇಮಂತ ರಾಜು ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಎಂದಿದ್ದಾರೆ. ಎರಡು ಮೂರು ದಿನಗಳಲ್ಲಿ ಪ್ರಕರಣದ ವಿಚಾರಣೆ ಬರುವ […]

ಸಿಎಂ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ

Tuesday, March 29th, 2011
ಸಿಎಂ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ವರದಿ ನೀಡುವಂತೆ ಲೋಕಾಯುಕ್ತ ವಿಶೇಷ ಕೋರ್ಟ್ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕುಟುಂಬ ವರ್ಗದ ವಿರುದ್ಧದ ಭೂ ಹಗರಣದ ಕುರಿತಂತೆ ಲೋಕಾಯುಕ್ತ ಕೋರ್ಟ್ ಆದೇಶಕ್ಕೆ ತಡೆ ನೀಡಬೇಕೆಂದು ಕೋರಿ ಸಿಎಂ ಅಳಿಯ ಸೋಹನ್ ಕುಮಾರ್ ಸೋಮವಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, […]