ಪಾಸಿಟಿವ್ ವರದಿಗಳು ಕೋಮು ಸೌಹಾರ್ದತೆಗೆ ಪೂರಕ” -ಕಮಿಷನರ್ ಅನುಪಮ್ ಅಗರ್ವಾಲ್

Thursday, June 27th, 2024
Mithun-Kodethuru

ಮಂಗಳೂರು: ಸೌಹಾರ್ದ ಮಂಗಳೂರು ಸ್ಥಾಪಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಬ್ರಾಂಡ್ ಮಂಗಳೂರು 2024ನೇ ಪ್ರಶಸ್ತಿಯನ್ನು ಹೊಸದಿಗಂತ ಪತ್ರಿಕೆಯ ವರದಿಗಾರ ಮಿಥುನ್ ಕೊಡೆತ್ತೂರು ಅವರಿಗೆ ಪ್ರದಾನ ಮಾಡಲಾಯಿತು. ನಗರದ ಪತ್ರಿಕಾ ಭವನದಲ್ಲಿ ಜರುಗಿದ ಸರಳ ಕಾರ್ಯಕ್ರಮದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಪ್ರಶಸ್ತಿ ಪ್ರದಾನಗೈದು ಮಾತಾಡಿದರು. “ಪ್ರತಿಯೊಂದು ಕಡೆಯಲ್ಲೂ ಪಾಸಿಟಿವ್ ಮತ್ತು ನೆಗೆಟಿವ್ ಅಭಿಪ್ರಾಯ ಇದ್ದೇ ಇರುತ್ತದೆ. ನಾವು ನೋಡುವ ರೀತಿ ಪಾಸಿಟಿವ್ ಆಗಿದ್ದರೆ ಎಲ್ಲವೂ ಪಾಸಿಟಿವ್ ಆಗಿಯೇ […]