ಅಂಗನವಾಡಿ ಟೀಚರ್ ಸಹಿತ ಒಂದೇ ಮನೆಯ ಮೂವರು ಆತ್ಮ ಹತ್ಯೆ

Tuesday, September 7th, 2021
Chikkamagaluru Suicide

ಚಿಕ್ಕಮಗಳೂರು: ಮನೆಯ ಗಂಡಸರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಇಬ್ಬರು ಮಹಿಳೆಯರು ಮತ್ತು ಓರ್ವ ಯುವತಿ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಮಕ್ಕಿಮನೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶಾರದಮ್ಮ(70), ವೀಣಾ(49) ಹಾಗೂ ಶ್ರಾವ್ಯ(16) ಎಂದು ಗುರುತಿಸಲಾಗಿದೆ. ಮೃತ ವೀಣಾ ಶೃಂಗೇರಿಯ ಹೊನ್ನವಳ್ಳಿ ಗ್ರಾಮದ ಅಂಗನವಾಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಅಂಗನವಾಡಿಗೆ ತೆರಳದ ಹಿನ್ನೆಲೆಯಲ್ಲಿ ಅಂಗನವಾಡಿ ಸಹಾಯಕಿ ಪೂರ್ಣಿಮಾ, ವೀಣಾಗೆ ಕರೆ ಮಾಡಿದ್ದಾರೆ. ಅವರು ಫೋನ್ ಸ್ವೀಕರಿಸಿಲ್ಲ. ಆಗ ಪೂರ್ಣಿಮಾ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಿಯರು ಅವರ ಮನೆ ಬಳಿ […]