ಗುದನಾಳದಲ್ಲಿ 20,89 ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಾಟ, ಆರೋಪಿ ವಶಕ್ಕೆ

Friday, July 2nd, 2021
Illigal Gold

ಮಂಗಳೂರು : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 20,89,800 ರೂ. ಮೌಲ್ಯದ 430 ಗ್ರಾಂ ಅಕ್ರಮ ಚಿನ್ನ ಸಾಗಾಟವನ್ನು ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ಪತ್ತೆ ಮಾಡಿದ್ದಾರೆ. ಕಾಸರಗೋಡು ನಿವಾಸಿ ದುಬಾಯಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದು, ಈತ ಚಿನ್ನದ ಪೌಡರನ್ನು ಗಮ್ ಬೆರೆಸಿ ಗುದನಾಳದೊಳಗಿಟ್ಟು ಸಾಗಾಟ ಮಾಡಿದ್ದ. ಚಿನ್ನ ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಕಸ್ಟಮ್ಸ್‌ನ ಉಪ ಆಯುಕ್ತ ಪ್ರವೀಣ್ ಕಂಡಿ, ಅಧಿಕಾರಿಗಳಾದ ರಾಕೇಶ್‌ಕುಮಾರ್, ವಿಕಾಸ್‌ಕುಮಾರ್, ಬಿಕ್ರಮ್ […]

ತಾಯ್ನಾಡಿಗೆ ಆಗಮಿಸಿದ ಪಿ.ವಿ. ಸಿಂಧು ಅವರಿಗೆ ಹೈದರಾಬಾದ್‌ನಲ್ಲಿ ಅದ್ದೂರಿ ಸ್ವಾಗತ

Monday, August 22nd, 2016
Hyderabad-reception

ಹೈದರಾಬಾದ್‌: ಒಲಿಂಪಿಕ್ಸ್‌ ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಗೆದ್ದು, ಸೋಮವಾರ ತಾಯ್ನಾಡಿಗೆ ಆಗಮಿಸಿರುವ ಪಿ.ವಿ. ಸಿಂಧು ಅವರನ್ನು ಹೈದರಾಬಾದ್‌ನಲ್ಲಿ ಸಂಭ್ರಮದಿಂದ ಸ್ವಾಗತಕೋರಿ, ಮೆರವಣಿಗೆ ನಡೆಸಲಾಯಿತು. ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಿಗ್ಗೆ ಬಂದಿಳಿದ ಸಿಂಧು ಹಾಗೂ ಕೋಚ್ ಪುಲ್ಲೇಲ ಗೋಪಿಚಂದ್ ಅವರನ್ನು ಸ್ವಾಗತಿಸಿ, ಹೂವುಗಳಿಂದ ಅಲಂಕರಿಸಿರುವ ತೆರೆದ ವಾಹನದಲ್ಲಿ ವಿಮಾನನಿಲ್ದಾಣದಿಂದ ಗಚ್ಚಿಬೌಲಿ ಮೈದಾನದವರೆಗೆ ಮೆರವಣಿಗೆ ಮೂಲಕ ಕರೆತರಲಾಯಿತು. ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ತಂದೆ ಪಿ.ವಿ. ರಮಣ ಹಾಗೂ ಪಿ. ವಿಜಯಾ ಮತ್ತು ತೆಲಂಗಾಣ ಸರ್ಕಾರದ ಸಚಿವರು ಸೇರಿದಂತೆ ಉಪ […]