ನಗರ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಅವಕಾಶ ಬೇಡ: ಜಿಲ್ಲಾಧಿಕಾರಿ

Friday, April 15th, 2011
ಜಿಲ್ಲಾಧಿಕಾರಿ ಸುಬೋಧ್ ಯಾದವ್

ಮಂಗಳೂರು : ನಗರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಲು ಅದರಲ್ಲೂ ಮುಖ್ಯವಾಗಿ ಯೋಜನೆ ಉಲ್ಲಂಘಿಸಿ ನಿರ್ಮಾಣವಾಗುವ ಕಟ್ಟಡಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸ ಬೇಕೆಂದು ಜಿಲ್ಲಾಧಿಕಾರಿ ಸುಬೋಧ್ ಯಾದವ್ ಅವರು ಹೇಳಿದರು. ಅವರಿಂದು ಕಾರ್ಪೋರೇಷನ್ ಕಚೇರಿಯಲ್ಲಿ ನಡೆದ ಪಾಲಿಕೆ ಅಭಿವೃದ್ಧಿ ಸಭೆಯಲ್ಲಿ ಪ್ರಗತಿಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿಗೆ ಕಟ್ಟಡ ನಿರ್ಮಾಣದಲ್ಲಿ ಅಕ್ರಮ ನಡೆಯುತ್ತಿರುವ ಬಗ್ಗೆ ಬಹಳಷ್ಟು ದೂರುಗಳು ಬರುತ್ತಿದ್ದು, ನಗರ ಯೋಜನಾಧಿಕಾರಿಗಳು ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದರು. ಅಕ್ರಮಗಳ ದೂರು ವ್ಯಾಪಕವಾದರೆ ತನ್ನ ಮಧ್ಯಪ್ರವೇಶ ಅನಿವಾರ್ಯವಾದೀತು ಎಂಬ ಎಚ್ಚರಿಕೆಯನ್ನು […]