ಬೊಳುವಾರು ವಾಣಿಜ್ಯ ಮಳಿಗೆಯಲ್ಲಿ ಅಗ್ನಿ ಅವಘಡ

Thursday, October 15th, 2020
Boluvaru

ಪುತ್ತೂರು: ಉಪ್ಪಿನಂಗಡಿ ರಸ್ತೆಯ ಬೊಳುವಾರು ಏಕಮುಖ ರಸ್ತೆಯ ಬಳಿಯಲ್ಲಿ ವಾಣಿಜ್ಯ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಗುರುವಾರ ನಸುಕಿನ ವೇಳೆ ನಡೆದಿದೆ. ಹೈವೇ ಪಟ್ರೋಲ್ ಪೊಲೀಸರ ಸಕಾಲಿಕ ಮಾಹಿತಿಯಿಂದ ಭಾರಿ ಅನಾಹುತ ತಪ್ಪಿದೆ. ಬೊಳುವಾರಿನಲ್ಲಿರುವ ಹ್ಯಾರಿಂಗ್ ಸ್ಟುಡಿಯೊ ಸೆಲೂನ್, ಡಿ.ಕೆ.ಮೊಬೈಲ್ ಮತ್ತು ತರಕಾರಿ ಅಂಗಡಿಗಳಿಗೆ ಬೆಂಕಿ ಹತ್ತಿಕೊಂಡಿತ್ತು. ಗಸ್ತು ನಿರತ ಹೈವೇ ಪಟ್ರೋಲ್ ಸಿಬ್ಬಂದಿಗಳ ಸಕಾಲಿಕ ಮಾಹಿತಿಯ ಮೂಲಕ ತಕ್ಷಣ ಅಗ್ನಿಶಾಮಕದಳದವರು ಆಗಮಿಸಿ ಸತತ ಮೂರುವರೆ ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಶಮನಗೊಳಿಸಿದ್ದಾರೆ. ಪುತ್ತೂರು- ಉಪ್ಪಿನಂಗಡಿ […]

ಚಲಿಸುತ್ತಿದ್ದ ವ್ಯಾನ್‌ಗೆ ಆಕಸ್ಮಿಕ ಬೆಂಕಿ: ಚಾಲಕ ಪಾರು

Friday, September 14th, 2018
maruthi-van

ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಮಾರುತಿ ವ್ಯಾನ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಘಟನೆ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಶಾದಿಮಹಲ್ ಬಳಿ ನಡೆದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿ ಅವಘಡ ಸಂಭವಿಸುತ್ತಿದ್ದಂತೆಯೇ ಚಾಲಕ ವ್ಯಾನ್‌ ಬಿಟ್ಟು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನೆ ಸಂಬಂಧ ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.