ಬಜಾಲ್ : ಬಾವಿಗೆ ಬಿದ್ದ ಸ್ಕೂಟರ್ ಸವಾರರು, ಓರ್ವ ಮೃತ್ಯು

Monday, January 4th, 2021
Ajith

ಮಂಗಳೂರು : ಬಜಾಲ್ ಸಮೀಪದ  ಪಕ್ಕಲಡ್ಕ ಎಂಬಲ್ಲಿ ಬಾವಿಯ ತಡೆಗೋಡೆಗೆ ಸ್ಕೂಟರ್ ಡಿಕ್ಕಿ ಹೊಡೆದು ಸವಾರರು ಬಿದ್ದು ಓರ್ವ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಇಬ್ಬರು ಸವಾರರ ಪೈಕಿ ಓರ್ವನ ಮೃತದೇಹ ಪತ್ತೆಯಾಗಿದ್ದು ಆತನನ್ನು  ಎಮ್ಮೆಕೆರೆ ನಿವಾಸಿ ಅಜಿತ್ (22) ಎಂದು ಗುರುತಿಸಲಾಗಿದೆ. ಅಜಿತ್ ಸೋಮವಾರ ಬಜಾಲ್ನ ಉಲ್ಲಾಸ್ ನಗರದ ತನ್ನ ಸಂಬಂಧಿಕರ ಮನೆಗೆ ಬರುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ರಾತ್ರಿ ವೇಳೆಗೆ ಸ್ಕೂಟರ್ ಸವಾರ ನಿಯಂತ್ರಣ ಕಳೆದುಕೊಂಡು  ರಸ್ತೆ ಪಕ್ಕದಲ್ಲೇ ಇದ್ದ ಬಾವಿ ಆವರಣಕ್ಕೆ ಡಿಕ್ಕಿ ಹೊಡೆದು ಸ್ಕೂಟರ್‌ನಲ್ಲಿದ್ದ ಇಬ್ಬರು ಬಿದ್ದಿದದ್ದಾರೆ ಎನ್ನಲಾಗಿದೆ. […]

ಕಾಲೇಜಿಗೆ ತೆರಳಿದ ವಿದ್ಯಾರ್ಥಿ ನಾಪತ್ತೆ..!

Wednesday, July 4th, 2018
udupi

ಉಡುಪಿ: ಕಾಲೇಜಿಗೆ ತೆರಳಿದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಕುಂದಾಪುರದ ಜಡ್ಕಲ್ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಅಜಿತ್ ಜೋಸೆಫ್ (17) ನಾಪತ್ತೆಯಾಗಿರುವ ವಿದ್ಯಾರ್ಥಿ. ಅಜಿತ್ ಕಾಳಾವರದ ವರದರಾಜ್ ಶೆಟ್ಟಿ ಪದವಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ. ಕಾಲೇಜಿಗೆ ತೆರಳಿದ್ದ ಈತ ಪುನಃ ಮನೆಗೆ ತೆರಳದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೋಳಾರ್ ನಲ್ಲಿ ಬಿಜೆಪಿ ಬೆಂಬಲಿಸುವಂತೆ ವೇದವ್ಯಾಸ್ ಕಾಮತ್ ಮನವಿ

Thursday, May 10th, 2018
vedvyas-kamath

ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿರುವ ಡಿ.ವೇದವ್ಯಾಸ್ ಕಾಮತ್ ಅವರು ಬೋಳಾರ ವಾರ್ಡ್ ನಂ. 57 ರಲ್ಲಿ ಮನೆ ಮನೆಗೆ ಭೇಟಿ ನೀಡಿ ಭಾರತೀಯ ಜನತಾ ಪಾರ್ಟಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಸಹ ಸಂಚಾಲಕ್ ಶ್ರೀ ರವಿಶಂಕರ್ ಮಿಜಾರ್, ಪ್ರೇಮಾನಂದ ಶೆಟ್ಟಿ, ಶಿವ ಪ್ರಸಾದ್, ಗಿರಿ ಪ್ರಸಾದ್, ಸುಧೀಂದ್ರ, ವಸಂತ್ ಜೆ ಪೂಜಾರಿ, ಸಾತ್ವಿಕ್, ಅಜಿತ್, ಭಾಸ್ಕರ್ […]