ಮಂಗಳೂರು ಪಾಲಿಕೆ ಆಯುಕ್ತ ಶಾನಾಡಿ ಕೃಷ್ಣಭಾಗ್ಯ ಜಲ ನಿಗಮ ಕ್ಕೆ ವರ್ಗ

Wednesday, August 5th, 2020
ಮಂಗಳೂರು ಪಾಲಿಕೆ ಆಯುಕ್ತ ಶಾನಾಡಿ ಕೃಷ್ಣಭಾಗ್ಯ ಜಲ ನಿಗಮ ಕ್ಕೆ ವರ್ಗ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಅವರಿಗೆ ಬುಧವಾರ ದಿಢೀರ್ ವರ್ಗಾವಣೆಯಾಗಿದೆ. ಅವರ ಸ್ಥಾನಕ್ಕೆ ಯಾರನ್ನೂ ನೇಮಿಸಿಲ್ಲ. ಅಜಿತ್ ಕುಮಾರ್ ಹೆಗ್ಡೆ ಅವರಿಗೆ ಆಲಮಟ್ಟಿ ಕೃಷ್ಣಭಾಗ್ಯ ಜಲ ನಿಗಮದ ಪ್ರಭಾರ ಮುಖ್ಯ ಲೆಕ್ಕಾಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ. ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಅವರಿಗೆ ಕೊರೋನ ಪಾಸಿಟಿವ್ ಕಾಣಿಸಿಕೊಂಡ ಬಳಿಕ ವಿಶ್ರಾಂತಿಯಲ್ಲಿದ್ದರು. ಮುಡಾ ಆಯುಕ್ತ ದಿನೇಶ್ ಅವರು ಮನಪಾ ಆಯುಕ್ತ ಹುದ್ದೆಯ ಪ್ರಭಾರ ವಹಿಸಿದ್ದರು. ದಿಢೀರ್ ವರ್ಗಾವಣೆಯ ಬೆನ್ನಿಗೆ […]

ನಾಳೆ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ : ಮಸ್ಟರಿಂಗ್ ಕಾರ್ಯಾರಂಭ

Monday, November 11th, 2019
MCC-Election

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಮಸ್ಟರಿಂಗ್ ಕಾರ್ಯಕ್ಕೆ ನಗರದ ರೋಜಾರಿಯೋ ಕಾಲೇಜಿನಲ್ಲಿ ಚಾಲನೆ ನೀಡಲಾಯಿತು. ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್ ಗಳಿಗೆ ನಾಳೆ ಚುನಾವಣೆ ನಡೆಯಲಿದ್ದು, ಸುಮಾರು 2,200 ಕ್ಕೂ ಹೆಚ್ಚು ಸಿಬ್ಬಂಧಿಗಳಿಗೆ ಚುನಾವಣೆಗೆ ಬೇಕಾದ ಚುನಾವಣಾ ಮಂತ್ರ ಯಂತ್ರ ಮತ್ತು ಅದಕ್ಕೆ ಬೇಕಾದ ಸಾಮಾಗ್ರಿ ವಿತರಿಸುವ ಕಾರ್ಯ ಇಲ್ಲಿ ನಡೆಯುತ್ತಿದೆ. ಚುನಾವಣೆಯ ಸಿಬ್ಬಂದಿಗಳಿಗೆ ಬೆಳಗ್ಗಿನ ಉಪಹಾರ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದ್ದು, ಊಟದ ಬಳಿಕ ಸಿಬ್ಬಂದಿಗಳನ್ನು ಬೇರೆ […]