ತಮ್ಮನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಅಣ್ಣ

Sunday, July 25th, 2021
Rafeeq

ಕಾಸರಗೋಡು : ಸೀತಾಂಗೋಳಿಯ ಮುಗು ಎಂಬಲ್ಲಿ ತಮ್ಮನನ್ನು ಅಣ್ಣ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಕೊಲೆಗೀಡಾದವರನ್ನು ಮುಗು ಉರ್ಮಿಯ ಅಬ್ದುಲ್ಲ ಮುಸ್ಲಿಯಾರ್ ರವರ ಪುತ್ರ ನಿಸಾರ್ (29) ಎಂದು ಗುರುತಿಸಲಾಗಿದೆ. ಸಹೋದರ ರಫೀಕ್ (31)ನನ್ನು ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಿಸಾರ್‌‌ನನ್ನು ಕೂಡಲೇ ಕುಂಬಳೆಯ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಬದಿಯಡ್ಕ ಠಾಣಾ ಪೊಲೀಸರು ಘಟನಾ ಸ್ಥಳಕ್ಕಾಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಅಣ್ಣನ ಮಗಳನ್ನು ಪ್ರೀತಿಸುತ್ತಿದ್ದ ಯುವಕನನ್ನು ಗುಂಡಿಟ್ಟು ಹತ್ಯೆ ಮಾಡಿದ ಚಿಕ್ಕಪ್ಪ

Thursday, July 16th, 2020
hasan murder

ಹಾಸನ: ಯುವತಿಯೊಬ್ಬಳನ್ನು ಒಂದು ಬಾರಿ ಅಪಹರಿಸಿ ಬುದ್ದಿ ಮಾತು ಹೇಳಿದ್ದರು ಕೇಳದೆ ಎರಡನೇ ಬಾರಿ ಅಪಹರಣಕ್ಕೆ ಯತ್ನಿಸಿದಾಗ  30 ವರ್ಷದ ಯುವಕನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಆಲೂರು ತಾಲೂಕಿನ ಸೊಪ್ಪಿನಹಳ್ಳಿಯಲ್ಲಿ ನಡೆದಿದೆ. ಮಧು (30) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಮಧು ಸೊಪ್ಪಿನಹಳ್ಳಿಯ ನಿವಾಸಿಯಾಗಿದ್ದು, ಇದೇ ಗ್ರಾಮದ ಮತ್ತೊಬ್ಬ ನಿವಾಸಿ ರೂಪೇಶ್ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಮೃತಪಟ್ಟ ಮಧು ಆರೋಪಿ ರೂಪೇಶ್ ಅಣ್ಣನ ಮಗಳನ್ನು ಪ್ರೀತಿಸಿದ್ದು, ಕೆಲ ತಿಂಗಳ ಹಿಂದಷ್ಟೇ ಆಕೆಯನ್ನು ಅಪಹರಿಸಿ ಬೆಂಗಳೂರಿಗೆ ಕರೆದೊಯ್ದಿದ್ದ ಎಂದು ಹೇಳಲಾಗುತ್ತಿದೆ. ಈ ಸಂಬಂಧ […]

ಅಣ್ಣ ಜೈಲಿನಲ್ಲಿದ್ದಾಗ ತಂಗಿಯನ್ನು ಪ್ರೀತಿಸಲು ಆತ ಮನೆಗೆ ಬರುತ್ತಿದ್ದ

Saturday, January 5th, 2019
Rakesh

ಮಂಗಳೂರು: ಕಾವೂರು ಬಳಿಯ ಪಂಜಿಮೊಗರಿನ ಮಾಲಾಡಿಯಲ್ಲಿ ಯುವಕನನ್ನು ಪ್ರೇಯಸಿಯ  ಸಹೋದರ ತನ್ನ ಸಹಚರರೊಂದಿಗೆ  ಸೇರಿ ಕೊಚ್ಚಿ ಕೊಲೆ ಮಾಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದಾರೆ. ಉರುಂದಾಡಿಗುಡ್ಡೆ ನಿವಾಸಿ ರಾಕೇಶ್‌(26) ಎಂಬ ಯುವಕ ಕೊಲೆಯಾಗಿದ್ದು, ಆರೋಪಿಗಳಾದ ಪಂಜಿಮೊಗರು ನಿವಾಸಿ ಸುನಿಲ್‌ ಹಾಗೂ ಇತರರು ಪರಾರಿಯಾಗಿದ್ದಾರೆ. ರಾಕೇಶ್‌ ತಂದೆಯೊಂದಿಗೆ ಸ್ಟೀಲ್‌ ಬಾರ್‌ ಬೆಂಡಿಂಗ್‌ ಕೆಲಸ ಮಾಡುತ್ತಿದ್ದು, ಸುನೀಲ್ನ ತಂಗಿಯನ್ನು ಕೆಲವು ಸಮಯಗಳಿಂದ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸುನೀಲ್‌ ಪ್ರಕರಣವೊಂದರಲ್ಲಿ ಜೈಲಿನಲ್ಲಿದ್ದಾಗ ರಾಕೇಶ್‌ ನಿತ್ಯ ಮನೆಗೆ ಬರುತ್ತಿದ್ದ. ರಾಕೇಶ್‌ ತನ್ನ ತಂಗಿಯನ್ನು ಪ್ರೀತಿಸುತ್ತಿರುವ ವಿಚಾರ ಸುನಿಲ್ […]