ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿಗೆ ಚತುರ್ಥಪರ್ಯಾಯದ ಸಂಭ್ರಮ

Tuesday, January 18th, 2022
Paryaya

ಉಡುಪಿ:  ಉಡುಪಿ ಶ್ರೀ ಕೃಷ್ಣ ಮಠದ ಶ್ರೀ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಪಾದರು  ತನ್ನ ಚತುರ್ಥಪರ್ಯಾಯದ ಗದ್ದುಗೆಯನ್ನೇರಿದರು. ಉಡುಪಿ ಶ್ರೀಕೃಷ್ಣ ಮಠದ ಪೂಜಾಧಿಕಾರ ಹಸ್ತಾಂತರ ಸಮಾರಂಭದಲ್ಲಿ, ಪ್ರಸ್ತುತ ಪರ್ಯಾಯ ಪೀಠಾಧಿಪತಿಗಳಾದ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ, ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿಗೆ ಪೊಡವಿಗೊಡೆಯ ಶ್ರೀಕೃಷ್ಣನ ಪೂಜಾಧಿಕಾರವನ್ನು ವಿಧ್ಯುಕ್ತವಾಗಿ ಹಸ್ತಾಂತರಿಸಿದರು. 2 ವರ್ಷಕ್ಕೊಮ್ಮೆ ನಡೆಯುವ ಈ ಸಮಾರಂಭದಲ್ಲಿ ಮಂಗಳವಾರ  ನಸುಕಿನ ಜಾವ 5.25ಕ್ಕೆ ಶ್ರೀಕೃಷ್ಣಮಠ ಪ್ರವೇಶ ಮಾಡಿ ದೇವರ ದರ್ಶನ ಪಡೆದ ಶ್ರೀಗಳಿಗೆ ಪರ್ಯಾಯ ಅದಮಾರು ಮಠದ ಶ್ರೀ […]