ಸಸಿಕಾಂತ್ ಸೆಂಥಿಲ್ ಎಸ್. ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ

Saturday, October 21st, 2017
Sasikant senthil

ಮ0ಗಳೂರು: ಸಸಿಕಾಂತ್ ಸೆಂಥಿಲ್ ಎಸ್. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ಪ್ರಭಾರ ಜಿಲ್ಲಾಧಿಕಾರಿ ಕುಮಾರ್ ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್, ಜಿ.ಪಂ. ಉಪಕಾರ್ಯದರ್ಶಿ ಎನ್.ಆರ್. ಉಮೇಶ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಸಸಿಕಾಂತ್ ಸೆಂಥಿಲ್ ಇದುವರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.

ನೂತನ ಎಸ್‌ಐಯಾಗಿ ರತ್ನ ಕುಮಾರ್ ಪುತ್ತೂರು ಅಧಿಕಾರ ಸ್ವೀಕಾರ

Wednesday, August 10th, 2016
Rathna-Kumar

ಬಂಟ್ವಾಳ: ಇಲ್ಲಿನ ಟ್ರಾಫಿಕ್ ಪೊಲೀಸ್ ಠಾಣೆಗೆ ನೂತನ ಎಸ್‌ಐಯಾಗಿ ರತ್ನ ಕುಮಾರ್ ಪುತ್ತೂರು ಅವರು ಪದೋನ್ನತಿಗೊಂಡು ಅಧಿಕಾರ ಸ್ವೀಕರಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಯಾಗಿ ಕಾರ್ಯನಿರ್ವಹಿಸಿ ಮುಂಬಡ್ತಿಗೊಂಡು ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಗೆ ಎಸ್‌ಐ ಯಾಗಿ ಅಧಿಕಾರ ಸ್ವೀಕರಿಸಿದ್ದಾರೆ . ಇನ್ನು ಮುಂದೆ ಟ್ರಾಫಿಕ್ ಪೊಲೀಸ್ ಠಾಣೆಗೆ ಎಸ್‌ಐಯಾಗಿ ಚಂದ್ರಶೇಖರಯ್ಯ ಮತ್ತು ರತ್ನ ಕುಮಾರ್‌ರವರು ಕಾರ್ಯ ನಿರ್ವಹಿಸಲಿದ್ದಾರೆ.

ದೇಶದ 13ನೇ ರಾಷ್ಟ್ರಪತಿಯಾಗಿ ಪ್ರಣಬ್ ಮುಖರ್ಜಿ ಅಧಿಕಾರ ಸ್ವೀಕಾರ

Thursday, July 26th, 2012
Pranab Mukherjee

ಹೊಸದಿಲ್ಲಿ : ಪ್ರಣಬ್ ಮುಖರ್ಜಿಯವರು  ಬುಧವಾರ ಪೂರ್ವಾಹ್ನ 11.38ಕ್ಕೆ ಸರಿಯಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ದೇಶದ 13 ನೇ ರಾಷ್ಟ್ರಪತಿಯಾಗಿ ಅಧಿಕಾರವನ್ನು ಸ್ವೀಕರಿಸಿದರು. ಸಂಸತ್ತಿನ ಸೆಂಟ್ರಲ್  ಹಾಲ್ ನಲ್ಲಿ  ಸುಪ್ರೀಮ್  ಕೋರ್ಟಿನ  ಮೂಖ್ಯ ನ್ಯಾಯಧೀಶರಾದ ಎಸ್‌.ಎಚ್‌. ಕಪಾಡಿಯಾ ರವರು ಪ್ರಣ್ ಬ್ ಮುಖರ್ಜಿ  ಯವರಿಗೆ  ಪ್ರಮಾಣ ವಚನ ಬೋಧಿಸಿದರು. ಈ ಸಂದಭ೯ದಲ್ಲಿ  ಉಪರರಾಷ್ಟ್ರಪತಿ ಹಮೀದ್  ಅನ್ಸಾರಿ, ರಾಷ್ಟ್ರಪತಿ ಪ್ರತಿಭಾ ಪಾಟೀಲ್‌, ಲೋಕಸಭಾ ಸ್ಪೀಕರ್ ಮೀರಾ ಕುಮಾರ್‌, ಪ್ರಧಾನಿ ಮನಮೋಹನ್‌ ಸಿಂಗ್‌, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ  ಹಾಗೂ ಕೇಂದ್ರದ  ಸಚಿವರು, ವಿರೋದ ಪಕ್ಶದ […]