ಮಂಗಳೂರಲ್ಲಿ ಎಂಎಲ್​ಸಿ ಮಗಳ ಮದುವೆಯಲ್ಲಿ ಪಾಲ್ಗೊಂಡ ಹೆಚ್​ಡಿಕೆ ಕುಟುಂಬ..!

Saturday, November 17th, 2018
marriege

ಮಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ಉಳ್ಳಾಲದ ಸೋಮೇಶ್ವರದಲ್ಲಿ ನಡೆದ ಎಂಎಲ್ಸಿ ಬಿ.ಎಂ.ಫಾರೂಕ್ ಅವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬಿಗಿ ಬಂದೋಬಸ್ತ್ನಲ್ಲಿ ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಕಾರಿನಲ್ಲಿ‌ ಬಂದಿಳಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ, ಹೆಚ್.ಡಿ.ದೇವೇಗೌಡ, ಅನಿತಾ ಕುಮಾರಸ್ವಾಮಿ, ದೇವೇಗೌಡರ ಪತ್ನಿ ಚೆನ್ನಮ್ಮ ಹಾಗೂ ಕುಟುಂದವರನ್ನು ಬಿ.ಎಂ.ಫಾರೂಕ್ ಹಾಗೂ ಮಾಜಿ ಶಾಸಕ ಮೊಯ್ದಿನ್ ಬಾವ ಸ್ವಾಗತಿಸಿದರು. ಈ ಸಂದರ್ಭ ಕುಮಾರಸ್ವಾಮಿ ಹಾಗೂ ಕುಟುಂಬಸ್ಥರು ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಿ.ಎಂ.ಫಾರೂಕ್ ಅವರ ಆತಿಥ್ಯ ಸ್ವೀಕರಿಸಿದರು

ಸಚಿವ ಸ್ಥಾನ ನೀಡಿದರೆ ಪ್ರಮಾಣಿಕವಾಗಿ ನಿರ್ವಹಿಸುತ್ತೇನೆ: ಅನಿತಾ ಕುಮಾರಸ್ವಾಮಿ

Thursday, November 15th, 2018
Anitha-kumarswamy

ಬೆಂಗಳೂರು: ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಶಾಸಕರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಸ್ಪೀಕರ್ ರಮೇಶ್ ಕುಮಾರ್ ಕಚೇರಿಯಲ್ಲಿ ತಮ್ಮ ಬೆಂಬಲಿಗರ ಜತೆಗೂಡಿ ಸರಿಯಾಗಿ 3.30ಕ್ಕೆ ಪ್ರಮಾಣ ವಚನ ಸ್ವೀಕರಿಸಿದರು. ಭಗವಂತ ಹಾಗೂ ಸತ್ಯ ನಿಷ್ಠೆ ಹೆಸರಲ್ಲಿ ಅನಿತಾ ಕುಮಾರಸ್ವಾಮಿ ರಾಮನಗರ ಶಾಸಕರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ರಮೇಶ್ ಕುಮಾರ್ ಪ್ರಮಾಣ ವಚನ ಬೋಧಿಸಿದರು.‌ ಪ್ರಮಾಣವಚನ ಸ್ವೀಕರಿಸಿದ ಬಳಿಕ‌ ಮಾತನಾಡಿದ ಅನಿತಾ ಕುಮಾರಸ್ವಾಮಿ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ.‌ ಒಂದು ವೇಳೆ ಸಚಿವ ಸ್ಥಾನ […]

ರಾಮನಗರದ ಮೊದಲ ಮಹಿಳಾ ಶಾಸಕಿಯಾಗಿ ಅನಿತಾ ಕುಮಾರಸ್ವಾಮಿ ಆಯ್ಕೆ!

Tuesday, November 6th, 2018
anitha-kumarswamy

ರಾಮನಗರ: ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಕೊನೆಯ ಹಾಗೂ 20ನೇ ಸುತ್ತು ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿ ಈ ಕ್ಷೇತ್ರದ ಮೊದಲ ಮಹಿಳಾ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಈ ಉಪಸಮರದಲ್ಲಿ ಒಟ್ಟು 1,25,043 ಮತಗಳನ್ನು ಅನಿತಾ ಕುಮಾರಸ್ವಾಮಿ ಪಡೆದುಕೊಂಡು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ 15,906 ಮತಗಳನ್ನು ಪಡೆದು ಭಾರೀ ಅಂತರದಿಂದ ಸೋಲು ಕಂಡಿದ್ದಾರೆ. ಇನ್ನು ಅನಿತಾ ಕುಮಾರಸ್ವಾಮಿ ಸುಮಾರು ಒಂದು ಲಕ್ಷ ಮತಗಳಿಂದ ಭಾರೀ ಗೆಲುವು ಸಾಧಿಸಿದ್ದಾರೆ. […]

ಉಪಚುನಾವಣಾ: ಐದರ ಪೈಕಿ ನಾಲ್ಕರಲ್ಲಿ ಮೈತ್ರಿ ಸರ್ಕಾರ ಅಭ್ಯರ್ಥಿಗಳಿಗೆ ಗೆಲುವು..!

Tuesday, November 6th, 2018
by-polls

ಮಂಡ್ಯ: ಮೂರು ಲೋಕಸಭೆ ಮತ್ತು ಎರಡು ವಿಧಾನಸಭಾ ಉಪಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಈ ನಡುವೆ ಐದರಲ್ಲಿ ನಾಲ್ಕು ಕಡೆ ಮೈತ್ರಿ ಸರ್ಕಾರದ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಗೆಲುವಿನ ಬಗ್ಗೆ ಅಧಿಕೃತ ಘೋಷಣೆಯೊಂದು ಬಾಕಿ ಇದೆ. ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿಗೆ ಭರ್ಜರಿಯಾಗಿ ಗೆಲುವು ಸಾಧಿಸಿದರೇ ಇತ್ತ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡ 1ಲಕ್ಷದ 82 ಸಾವಿರ ಮತಗಳ ಅಂತರದಿಂದ ಗೆದ್ದು ಅಂಬರೀಶ್ ದಾಖಲೆ ಮುರಿದಿದ್ದಾರೆ. ಇನ್ನೊಂದೆಡೆ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ […]

ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿಗೆ ಭರ್ಜರಿ ಗೆಲುವು…!

Tuesday, November 6th, 2018
kumarswamy

ರಾಮನಗರ: ವಿಧಾನಸಭೆ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರು ಗೆಲುವು ಕಾಯ್ದುಕೊಂಡಿದ್ದು, ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ರಾಮನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಗ್ಗೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದ್ದು ಜೆಡಿಎಸ್ ಭದ್ರಕೋಟೆಯಾಗಿರುವ ರಾಮನಗರದಲ್ಲಿ ಅನಿತಾ ಗೆಲುವು , ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಅನಿತಾ ಕುಮಾರಸ್ವಾಮಿ ಅವರ ಭಾವಚಿತ್ರವಿರುವ ಫ್ಲೆಕ್ಸ್ ಹಿಡಿದು, ಜಯಘೋಷ ಕೂಗುತ್ತಿದ್ದಾರೆ.

ರಾಮನಗರದಲ್ಲಿ ನಮಗೆ ಯಾವುದೇ ಭಯವಿಲ್ಲ: ಅನಿತಾ ಕುಮಾರಸ್ವಾಮಿ

Monday, November 5th, 2018
anitha-kumarswamy

ಹಾಸನ: ರಾಮನಗರದಲ್ಲಿ ನಮಗೆ ಯಾವುದೇ ಭಯವಿಲ್ಲ, ಎಲ್ಲವನ್ನೂ ಎದುರಿಸಲು ಸಿದ್ಧವಿದ್ದೇವೆ ಎಂದು ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು. ಹಾಸನಾಂಬೆ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮನಗರ ಅಷ್ಟೇ ಅಲ್ಲ, ಉಳಿದ ನಾಲ್ಕು ಕಡೆಗಳಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಜಯ ಸಿಗಲಿದೆ. ಚುನಾವಣಾ ಕಣಕ್ಕೆ ಬರುವ ಬಗ್ಗೆ ಮಾತುಕತೆ ಆಗಿಲ್ಲ. ಮುಂದೆ ಏನು ಆಗುತ್ತೋ ನನಗೆ ಗೊತ್ತಿಲ್ಲ. ನಾನು ಕೂಡ ರಾಜಕೀಯ ಪ್ರವೇಶ ಮಾಡುತ್ತೇನೆಂದು ಅಂದುಕೊಂಡಿರಲಿಲ್ಲ. ನನ್ನ ಮಗ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕ್ರಿಯಾಶೀಲವಾಗಿ ಕೆಲಸ […]

ಕುಕ್ಕೆ‌ ಸುಬ್ರಹ್ಮಣ್ಯದಲ್ಲಿ ಸಿಎಂ ಕುಮಾರಸ್ವಾಮಿ ತುಲಾಭಾರ ಸೇವೆ..!

Tuesday, August 14th, 2018
kumarswamy-kukke

ಮಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ಸೇವೆ ನಡೆಸಿದರು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ ದೇವೇಗೌಡ, ತಾಯಿ ಚೆನ್ನಮ್ಮ, ಪತ್ನಿ ಅನಿತಾ ಕುಮಾರಸ್ವಾಮಿ ಜೊತೆ ಆಗಮಿಸಿದ ಸಿಎಂ ದೇವರ ದರ್ಶನಗೈದು ತುಲಾಭಾರ ಸೇವೆ ನಡೆಸಿದರು. ಒಣದ್ರಾಕ್ಷಿಯಲ್ಲಿ ಒಮ್ಮೆ ತುಲಾಭಾರ ಸೇವೆ ನಡೆಸಿದರೆ ಮತ್ತೊಮ್ಮೆ ಅಕ್ಕಿ ಬೆಲ್ಲ ತೆಂಗಿನಕಾಯಿಯಿಂದ ತುಲಾಭಾರ ಸೇವೆ ನಡೆಸಿದರು.

ಜಿಲ್ಲೆಯಲ್ಲಿ ಧಾರಕಾರ ಮಳೆ..ಸಿಎಂ ದೇಗುಲ ದರ್ಶನಕ್ಕೆ ಮಳೆರಾಯ ಅಡ್ಡಿ!

Tuesday, August 14th, 2018
kukke-subramanya

ಮಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೇಗುಲ ದರ್ಶನ ಮಾಡುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿದ್ದು ಸಿಎಂ ದೇಗುಲ ದರ್ಶನಕ್ಕೆ ಮಳೆರಾಯ ಅಡ್ಡಿಯಾಗಿದ್ದಾನೆ. ನಿನ್ನೆ ಮತ್ತು ಇಂದು‌ ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಾದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ವಿಶೇಷ ಪೂಜೆಗೆ ತೆರಳಿದ ಮುಖ್ಯಮಂತ್ರಿ ಕುಟುಂಬಕ್ಕೆ ಭಾರಿ ಮಳೆ ಸಾಕಷ್ಟು ಅಡ್ಡಿಗಳನ್ನು ತಂದಿದೆ. ಮಾಜಿ ಪ್ರಧಾನಿ ದೇವೆಗೌಡ, ತಾಯಿ ಚೆನ್ನಮ್ಮ, ಪತ್ನಿ ಅನಿತಾ‌ ಕುಮಾರಸ್ವಾಮಿ ಜೊತೆ ಮುಖ್ಯಮಂತ್ರಿ ಕುಮಾರಸ್ವಾಮಿ ದೇಗುಲಗಳಿಗೆ ಭೇಟಿ […]

ಗ್ರಹಣದ ಮುನ್ನಾದಿನ ತಿರುಪತಿಗೆ ತೆರಳಲಿದೆ ದೇವೇಗೌಡರ ಕುಟುಂಬ..!

Tuesday, July 24th, 2018
revanna

ಬೆಂಗಳೂರು: ಜುಲೈ 27 ರಂದು ಸಂಭವಿಸಲಿರುವ ಚಂದ್ರಗ್ರಹಣದ ಹಿನ್ನೆಲೆಯಲ್ಲಿ, ಗ್ರಹಣದ ಮುನ್ನಾದಿನ (ಜುಲೈ 26) ರಂದು ಗುರುವಾರ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ ಎನ್ನಲಾಗ್ತಿದೆ. ಈಗಾಗಲೇ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ಹೆಚ್. ಡಿ. ಕುಮಾರಸ್ವಾಮಿ ಅವರು ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದ್ದರು. ಅದೇ ರೀತಿ ಸಿಎಂ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅವರೊಂದಿಗೆ ತಿರುಪತಿ ತೆರಳಿ, ತಿಮ್ಮಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ […]

ರೈತರ ಸಾಲ ಮನ್ನಾಕ್ಕೆ ಸಮಯ ಬೇಕು, ಸಿಎಂ ಆಗುತ್ತಿರುವ ಬಗ್ಗೆ ಸಂಪೂರ್ಣ ತೃಪ್ತಿ ಇಲ್ಲ: ಹೆಚ್‌ಡಿಕೆ

Wednesday, May 23rd, 2018
kumarswamy-speech

ಮೈಸೂರು: ಪ್ರಮಾಣವಚನಕ್ಕೂ ಮುನ್ನ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಾಡದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಇವತ್ತಿನ ಪರಿಸ್ಥಿತಿಯಲ್ಲಿ ಸಿಎಂ ಆಗುತ್ತಿರುವುದು ನನಗೆ ಸಂಪೂರ್ಣ ತೃಪ್ತಿ ತಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮನಸ್ಸಿನಲ್ಲಿ ಒಂದಷ್ಟು ನೋವು ತುಂಬಿಕೊಂಡೇ ಅಧಿಕಾರ ಸ್ವೀಕರಿಸುತ್ತಿದ್ದೇನೆ. ಸ್ವತಂತ್ರವಾಗಿ ಅಧಿಕಾರಕ್ಕೆ ಬರಬೇಕೆಂಬುದು ನನ್ನ ಆಸೆಯಾಗಿತ್ತು ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು. ಇಂದು ಜಿ. ಪರಮೇಶ್ವರ್ ನನ್ನೊಂದಿಗೆ ಡಿಸಿಎಂ […]