ಏಳು ಅಂಗಡಿಗಳಲ್ಲಿ ಸರಣಿ ಕಳ್ಳತನ: ಮದ್ಯ, ಸಿಗರೇಟ್ ಕದ್ದೊಯ್ದ ಕಳ್ಳರು

Saturday, November 3rd, 2018
escaped

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎರಡು ಕಡೆ ಸರಣಿ ಕಳ್ಳತನ ನಡೆದಿದ್ದು ಏಳು ಕಡೆ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ. ಬೆಳ್ತಂಗಡಿಯಲ್ಲಿ ಅನಿಲ್ ವೈನ್ಸ್ನಿಂದ ಮದ್ಯ ಕದ್ದ ಕಳ್ಳರು, ಬಿ ಎ ಟ್ರೇಡರ್ಸ್ ಎಂಬ ಅಂಗಡಿಯಿಂದ ಸಿಗರೇಟ್ ಬಾಕ್ಸ್ ಕದ್ದಿದ್ದಾರೆ. ಮಂಗಳಾ ಅಗ್ರೋ ಕೇಂದ್ರದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದಾರೆ. ಈ ಘಟನೆ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿಯು ನಾಲ್ಕು ಅಂಗಡಿಗಳಲ್ಲಿ ಕಳ್ಳತನ ಆಗಿದೆ. ಮುಂಡಾಜೆಯ ಮೊಬೈಲ್ […]

ಸ್ಯಾಂಡಲ್ ವುಡ್‍ನ ಇಬ್ಬರು ಖಳನಟರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಪ್ರಕರಣ ನಟ ದುನಿಯಾ ವಿಜಯ್ ಬಂಧನ..!

Friday, June 8th, 2018
duniya-vijay

ಬೆಂಗಳೂರು: ಸ್ಯಾಂಡಲ್ ವುಡ್‍ನ ಇಬ್ಬರು ಖಳನಟರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪೊಲೀಸರು ನಟ ದುನಿಯಾ ವಿಜಯ್ ನನ್ನು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಮಾಸ್ತಿಗುಡಿ ಚಿತ್ರೀಕರಣದ ವೇಳೆ ನಟರಾದ ಅನಿಲ್ ಹಾಗೂ ಉದಯ್ ದುರಂತ ಸಾವು ಪ್ರಕರಣ ಸಂಬಂಧ ನಿರ್ದೇಶಕನ ಮೇಲೆ ರಾಮನಗರ ಜೆಎಂಎಫ್ ಸಿ ಕೋರ್ಟ್ ನಿಂದ ವಾರೆಂಟ್ ಜಾರಿಯಾಗಿತ್ತು. ಕೋರ್ಟ್ ತೀರ್ಪಿನಂತೆ ತಾವರೆಕೆರೆ ಪೊಲೀಸರು ವಾರೆಂಟ್ ಹಿಡಿದು ನಿರ್ದೇಶಕ ಸುಂದರ್ ಪಿ ಗೌಡ ಅವರನ್ನು ಬಂಧಿಸಲು ಸುಂದರ್ ಮನೆಗೆ ತಡರಾತ್ರಿ ಹೋಗಿದ್ದರು. ಸುಂದರ್ […]

ಜೈನ ತಿರ್ಥಂಕರರ ವಿಗ್ರಹ ಸಾಗಾಣಿಕೆ: ಎನ್‌ಎಸ್‌ಯುಐ ಮುಖಂಡ ಸೇರಿ ಐವರ ಬಂಧನ

Monday, February 26th, 2018
thirtankararu

ಮಂಗಳೂರು: ಎನ್ಎಸ್‌‌‌ಯುಐ ಮುಖಂಡನೊಬ್ಬ ಜೈನ ತಿರ್ಥಂಕರರ ವಿಗ್ರಹ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಕುಂದಾಪುರ ಪೊಲೀಸರು ಪ್ರಕರಣ ಭೇದಿಸಿ ಕೋಟ್ಯಂತರ ರೂ. ಬೆಲೆ ಬಾಳುವ ಜೈನ ತೀರ್ಥಂಕರರ ಐದು ಮೂರ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ಎನ್ಎಸ್‌‌ಯುಐ ಮುಖಂಡ ಕುಲಶೇಕರದ ಆ್ಯಸ್ಟನ್‌ ಸಿಕ್ವೇರ ಪ್ರಮುಖ ಆರೋಪಿಯಾಗಿದ್ದು, ಪ್ರಕರಣ ಬಹಿರಂಗವಾಗುತ್ತಿದ್ದಂತೆ ಆತನನ್ನು ಸಂಘಟನೆಯಿಂದ ಉಚ್ಛಾಟಿಸಲಾಗಿದೆ. ಕೋಟೇಶ್ವರ ದೇವಸ್ಥಾನ ಬಳಿ ವಿಗ್ರಹ ಕಳ್ಳ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಕುಂದಾಪುರ ಪೊಲೀಸರು ಕೋಟೇಶ್ವರ ದೇವಸ್ಥಾನ ಬಳಿ ದಾಳಿ […]

ವಿಜಯ ಶಂಕರ್‌, ಅನಿಲ್‌ ಕಾಂಗ್ರೆಸ್‌ಗೆ ಸೇರ್ಪಡೆ

Tuesday, February 6th, 2018
congress

ಬೆಂಗಳೂರು: ಮಾಜಿ ಸಚಿವ ಸಿ. ಎಚ್‌. ವಿಜಯ ಶಂಕರ್‌ ಹಾಗೂ ದಿವಂಗತ ಶಾಸಕ ಚಿಕ್ಕಮಾದು ಅವರ ಪುತ್ರ ಅನಿಲ್‌ ಚಿಕ್ಕಮಾದು ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ತಮ್ಮ ಬೆಂಬಲಿಗರೊಂದಿಗೆ ವಿಜಯ ಶಂಕರ್‌ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದರು. ಅನಿಲ್‌ ಚಿಕ್ಕಮಾದು ಜಿಲ್ಲಾ ಪಂಚಾಯತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜೆಡಿಎಸ್‌ ತೊರೆದು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದರು. ಪಕ್ಷಕ್ಕೆ ಸೇರ್ಪಡೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, […]

ದುನಿಯಾ ವಿಜಿ ಅಭಿನಯದ ‘ಮಾಸ್ತಿಗುಡಿ’ ಚಿತ್ರದ ಶೂಟಿಂಗ್‌ ವೇಳೆ ಇಬ್ಬರು ಖಳನಟರ ಸಾವು

Tuesday, November 8th, 2016
uday-and-anil

ರಾಮನಗರ: ಕನ್ನಡ ಚಿತ್ರರಂಗದಲ್ಲಿ ಸೋಮವಾರ ದುರಂತವೊಂದು ಸಂಭವಿಸಿದೆ. ದುನಿಯಾ ವಿಜಿ ಅಭಿನಯದ ‘ಮಾಸ್ತಿಗುಡಿ’ ಚಿತ್ರದ ಶೂಟಿಂಗ್‌ ವೇಳೆ ಇಬ್ಬರು ಖಳನಟರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಚಿತ್ರರಂಗದ ಗಣ್ಯರಲ್ಲಿ ದುಃಖ ಮಡುಗಟ್ಟಿದೆ. ನಾಗಶೇಖರ್‌ ನಿರ್ದೇಶನದ ‘ಮಾಸ್ತಿಗುಡಿ’ ಚಿತ್ರದ ಕ್ಲೈಮ್ಯಾಕ್ಸ್‌ ಚಿತ್ರೀಕರಣವು ಸೋಮವಾರ ಮಧ್ಯಾಹ್ನ 2.45ರ ಸುಮಾರಿಗೆ ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ನಡೆಯುತ್ತಿತ್ತು. ನಾಯಕ ದುನಿಯಾ ವಿಜಯ್‌ ಹಾಗೂ ಖಳನಟರಾದ ಅನಿಲ್‌ ಮತ್ತು ಉದಯ್‌ ಹೆಲಿಕಾಪ್ಟರ್‌ನಿಂದ ನೀರಿಗೆ ಜಿಗಿಯುವ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಅದರಂತೆ ಹೆಲಿಕಾಪ್ಟರ್‌ನಿಂದ ಈ ಮೂವರು ಹಿನ್ನೀರಿಗೆ ಜಿಗಿದಿದ್ದರು. […]