ಉಪ್ಪಿನಂಗಡಿ : ಕರ್ವೇಲ್ ನಲ್ಲಿ ಟ್ಯಾಂಕರ್ ನ ವಾಲ್ ತೆರೆದು ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆ

Monday, November 4th, 2019
Tyankar

ಉಪ್ಪಿನಂಗಡಿ : ಅನಿಲ ಟ್ಯಾಂಕರ್ ಒಂದರ ಮೇಲ್ಭಾಗದ ವಾಲ್ ಮುಚ್ಚಳ ಏಕಾಏಕಿ ತೆರೆದು ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿ ಸ್ಥಳದಲ್ಲಿ ಆತಂಕ ಮೂಡಿಸಿದ ಘಟನೆ ಉಪ್ಪಿನಂಗಡಿ ಬಳಿಯ ಕರ್ವೇಲ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ ಹಾಸನ ಕಡೆ ಹೋಗುವ ಟೋಟಲ್ ಗ್ಯಾಸ್ ಕಂಪೆನಿಯ ಅನಿಲ ಟ್ಯಾಂಕರ್ ನ ಮೇಲ್ಭಾಗದ ವಾಲ್ ಕರ್ವೇಲ್ ಬಳಿ ಬೆಳಗ್ಗೆ 8 ರ ಸುಮಾರಿಗೆ ಏಕಾಏಕಿ ತೆರೆದುಕೊಂಡಿತ್ತು. ಈ ಸಂದರ್ಭ ರಭಸದಿಂದ ನೀರು ಚಿಮ್ಮುವ ಶೈಲಿಯಲ್ಲಿ ಗ್ಯಾಸ್ ಮೇಲ್ಭಾಗಕ್ಕೆ ಚಿಮ್ಮಿ, ಗಾಳಿಯೊಂದಿಗೆ […]

ಕಾಸರಗೋಡು : ಅಡ್ಕತ್ತಬೈಲ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ

Wednesday, October 16th, 2019
kasaragod

ಕಾಸರಗೋಡು : ರಾಷ್ಟೀಯ ಹೆದ್ದಾರಿಯ ಅಡ್ಕತ್ತಬೈಲ್ ನಲ್ಲಿ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಅ. 16 ರ ಬುಧವಾರ ಮುಂಜಾನೆ ನಡೆದಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪರಿಸರವಾಸಿಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಅಗ್ನಿಶಾಮಕ ದಳದ ಸಿಬಂದಿಗಳು ಸ್ಥಳಕ್ಕೆ ಆಗಮಿಸಿದ್ದು, ಸೋರಿಕೆ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಅಡ್ಕತ್ತಬೈಲ್ ಶಾಲೆಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅಪಘಾತದ ಹಿನ್ನಲೆಯಲ್ಲಿ […]

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟ್ಯಾಂಕರ್ ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣ ಬಂದ್

Tuesday, April 9th, 2013
Gas tanker accident near Uppinangady

ಮಂಗಳೂರು : ಸುಮಾರು 16 ಸಾವಿರ ಲೀಟರ್ ಅನಿಲವನ್ನು ತುಂಬಿಕೊಂಡ ಟ್ಯಾಂಕರ್ ವೊಂದು  ಮಂಗಳೂರಿನನಿಂದ ಬೆಂಗಳೂರಿಗೆ ಸಾಗುತ್ತಿದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಇಂದು ಬೆಳಗ್ಗೆ ೯ ಗಂಟೆಗೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಪೆರ್ನೆ ಬಳಿ ನಡೆದಿದೆ. ಟ್ಯಾಂಕರ್ ಉರುಳಿಬಿದ್ದ ಪರಿಣಾಮ ಅನಿಲ ಸೋರಿಕೆ ಉಂಟಾಗಿ ಬೆಂಕಿ ಹೊತ್ತಿಕೊಂಡು ಟ್ಯಾಂಕರ್‌ನಲ್ಲಿದ್ದ ಚಾಲಕ ಹಾಗೂ ಕ್ಲಿನರ್ ಬೆಂಕಿಗಾಹುತಿಯಾಗಿದ್ದಾರೆ. ಮಾತ್ರವಲ್ಲದೆ ಬೆಂಕಿ ರಾಷ್ಟ್ರೀಯ ಹೆದ್ದಾರಿ 75 ರ ಸುಮಾರು 20 ಕ್ಕೂ ಹೆಚ್ಚಿನ ಮನೆಗಳಿಗೆ […]