ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ

Monday, March 28th, 2022
Anushree

ಮೈಸೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮೈಸೂರಿನ ಟಿ. ನರಸಿಪುರ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ನಡೆಸಿದೆ. ಟಿ. ನರಸಿಪುರ ತಾಲೂಕಿನ ಅಕ್ಕೂರು ಗ್ರಾಮದ ಅನುಶ್ರೀ ಮೃತ ವಿದ್ಯಾರ್ಥಿನಿ. ಅನುಶ್ರೀ ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಅನುಶ್ರೀ ತಾಲೂಕಿನ ವಿದ್ಯೋದಯ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಪರೀಕ್ಷಾ ಕೇಂದ್ರದಲ್ಲಿದ್ದ ಸಿಬ್ಬಂದಿ ತಕ್ಷಣ ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಅನುಶ್ರೀ ಬೆಂಗಳೂರಿನಲ್ಲಿ ಮಾದಕ ವಸ್ತುಗಳನ್ನು ಸೇವಿಸಿ, ಡ್ರಿಂಕ್ಸ್ ಪಾರ್ಟಿ ಮಾಡಿದ್ದರು, ಚಾರ್ಜ್ ಶೀಟ್‌

Thursday, September 9th, 2021
Anushree

ಮಂಗಳೂರು  : ಡ್ರಗ್ಸ್ ಕೇಸ್‌ಗೆ ಸಂಬಂಧಿಸಿದಂತೆ  ಸಿಸಿಬಿ ಪೊಲೀಸರ ವಿಚಾರಣೆ ಎದುರಿಸಿದ್ದ ಖ್ಯಾತ ನಿರೂಪಕಿ ಅನುಶ್ರೀ ಹೆಸರು ಇದೀಗ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖವಾಗಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಾಕಿರುವ ಚಾರ್ಜ್ ಶೀಟ್‌ನಲ್ಲಿ ಅನುಶ್ರೀ ಹೆಸರು ಇದೆ. ‘’ಅನುಶ್ರೀ ಡ್ರಗ್ಸ್ ಸೇವಿಸುತ್ತಿದ್ದರು’’ ಎಂದು ಡ್ರಗ್ಸ್ ಪ್ರಕರಣದ ಆರೋಪಿ ಕಿಶೋರ್ ಅಮನ್ ಶೆಟ್ಟಿ ಹೇಳಿಕೆ ನೀಡಿರುವುದು ಚಾರ್ಜ್ ಶೀಟ್‌ನಲ್ಲಿದೆ. ನಾನು ಸುಮಾರು 2007-08ರ ಸಮಯದಲ್ಲಿ ಬೆಂಗಳೂರಿನ ಒಂದು ಡ್ಯಾನ್ಸ್ ಅಕಾಡೆಮಿಯಲ್ಲಿದ್ದಾಗ ಟಿವಿ ಆಂಕರ್ ಆಗಿರುವ ಅನುಶ್ರೀ ಅವರಿಗೆ ಡ್ಯಾನ್ಸ್ […]

ಪಾರ್ಟಿಗಳಲ್ಲಿ ಅನುಶ್ರೀಯನ್ನು ನೋಡಿದ್ದಾಗಿ ಬಾಯಿಬಿಟ್ಟ ಡ್ರಗ್ ಸಪ್ಲಾಯರ್ ನೈಜೀರಿಯನ್ ಪ್ರಜೆ

Wednesday, September 30th, 2020
Anushree

ಮಂಗಳೂರು :  ಬೆಂಗಳೂರಿನಲ್ಲಿ  ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗ ಡ್ರಗ್ ಸರಬರಾಜುದಾರ ನೈಜೀರಿಯನ್ ಪ್ರಜೆ ಪಾರ್ಟಿಗಳಲ್ಲಿ ನಿರೂಪಕಿ ಅನುಶ್ರೀಯನ್ನು ನೋಡಿದ್ದಾಗಿ ಮಾಹಿತಿ ನೀಡಿದ್ದಾನೆ. ಕಿಶೋರ್ ಶೆಟ್ಟಿ ಮತ್ತು ತರುಣ್ ರಾಜ್ ಯುವತಿಯರನ್ನು ಸೇರಿಸಿ ಡ್ರಗ್ ಪಾರ್ಟಿ ಮಾಡುತ್ತಿದ್ದರು ಎಂಬ ಬೆಚ್ಚಿ ಬೀಳಿಸುವ ಮಾಹಿತಿಯೊಂದು ಬಹಿರಂಗವಾಗಿದೆ. ಮಹಮ್ಮದ್ ಶಾಕೀರ್ ಗೆ ಬಾಂಬೆಯಿಂದ ಶಾನ್ ತಂದುಕೊಡುತ್ತಿದ್ದ. ಶಾಕೀರ್ ನಿಂದ ಕಿಶೋರ್ ಶೆಟ್ಟಿ, ತರುಣ್ ರಾಜ್ ಪಡೆಯುತ್ತಿದ್ದರು. ಶಾನ್ ನವಾಜ್ ಗೆ ನೈಜೀರಿಯಾ ಪ್ರಜೆ ಡ್ರಗ್  ಸರಬರಾಜು ಮಾಡುತ್ತಿದ್ದ.  ಮಂಗಳೂರಿಗೂ  ಆತನೇ  ಡ್ರಗ್  ಸರಬರಾಜು ಮಾಡುತ್ತಿದ್ದ ಎಂಬುದು ವಿಚಾರಣೆಯಿಂದ ಬಯಲಾಗಿದೆ.

ಡ್ರಗ್ಸ್‌ ಪ್ರಕರಣ ನಿರೂಪಕಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರ ನೋಟಿಸ್‌

Thursday, September 24th, 2020
Anushree

ಮಂಗಳೂರು : ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ  ಡ್ಯಾನ್ಸರ್‌ ಕಿಶೋರ್ ಶೆಟ್ಟಿಯನ್ನು  ವಿಚಾರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು ನಿರೂಪಕಿ, ನಟಿ ಅನುಶ್ರೀ ಅವರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ. ಡ್ರಗ್ಸ್ ವಿಚಾರದಲ್ಲಿ ತನಿಖೆಗಾಗಿ ಮಂಗಳೂರು 4- 5 ಸಿಸಿಬಿ ಪೊಲೀಸರ ತಂಡ ಗುರುವಾರ ಬೆಂಗಳೂರಿಗೆ ತೆರಳಿತ್ತು. ವಿಚಾರಣೆಯ ಸಂದರ್ಭ ಕಿಶೋರ್‌ ಅಮನ್‌ ಶೆಟ್ಟಿ ಅವರ ಆಪ್ತ ಸ್ನೇಹಿತ ತರುಣ್‌ ಅನುಶ್ರೀ ಅವರೊಂದಿಗೆ ಪಾರ್ಟಿ ಮಾಡಿದ್ದ ಎನ್ನುವ ವಿಚಾರವನ್ನು ತಿಳಿಸಿದ್ದು, ಅನುಶ್ರೀ ಅವರಿಗೆ ಸಿಸಿಬಿ ನೋಟಿಸ್‌ ಜಾರಿ ಮಾಡಿದೆ ಎನ್ನಲಾಗಿದೆ. “ಪ್ರತೀಕ್ ಶೆಟ್ಟಿ, ಕಿಶೋರ್ […]