ವಾಕಿಂಗ್ ಮಾಡುತ್ತಿದ್ದ ಶಿಕ್ಷಕರೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವು
Tuesday, December 20th, 2016ಮಂಗಳೂರು: ವಾಕಿಂಗ್ ಮಾಡುತ್ತಿದ್ದ ಶಿಕ್ಷಕರೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ನಡೆದಿದೆ. ವಾಹನ ಡಿಕ್ಕಿಯಿಂದ ಶಿಕ್ಷಕ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರಿ ಶಾಲೆಯ ಶಿಕ್ಷಕ ದಿನಕರ್ ಹೆಗ್ಡೆ (48) ಮೃತ ದುರ್ದೈವಿ. ಎಂದಿನಂತೆ ದಿನಕರ್ ಹೆಗ್ಡೆ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಯಮಸ್ವರೂಪಿಯಾಗಿ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ ಎನ್ನಲಾಗಿದೆ. ಈ ಸಂಬಂಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ […]