ಮಂಗಳೂರು: ಗೋಣಿ ಚೀಲದಲ್ಲಿ ತುಂಬಿಸಿ ಬಾಲಕನ ಅಪಹರಣ ಯತ್ನ

Friday, January 15th, 2021
Konchadi

ಮಂಗಳೂರು: ಗೋಣಿ ಚೀಲ ಮುಸುಕು ಹಾಕಿ ಬಾಲಕನನ್ನು ಅಪಹರಿಸಲು ಯತ್ನಿಸಿದ ಕೃತ್ಯ ಬೆಳಕಿಗೆ ಬಂದಿದೆ ನಗರದ ಕೊಂಚಾಡಿಯ ವೆಂಕಟರಮಣ ಮಹಾಲಸಾ ದೇವಾಲಯದ ಸಮೀಪದ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಬಂದ ಮೂವರು  ಮಕ್ಕಳ ಕಳ್ಳರು ಎನ್ನಲಾದ ಆಗಂತುಕರು ಸಂಜೆ 7ರ ಹೊತ್ತಿಗೆ ಮನೆಗೆ ಹೋಗುತ್ತಿದ್ದ ಬಾಲಕನ  ಬಳಿ ಬೈಕ್ ನಿಲ್ಲಿಸಿ ಗೋಣಿ ಮುಸುಕು ಹಾಕಿ ಬಾಲಕರನ್ನು ಹಿಡಿಯಲು ಯತ್ನಿಸಿದ್ದಾರೆ  ಅದನ್ನು ಗಮನಿಸಿದ ಜೊತೆಗಿದ್ದ ಇನ್ನೋರ್ವ ಬಾಲಕ ಧೈರ್ಯದಿಂದ ಅವರ ಮೇಲೆ ಕಲ್ಲು, ಮಣ್ಣಿನಿಂದ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಜೊತೆಗೆ ಹಿಂದಿನಿಂದ ಬಾಲಕರ ಮನೆಯವರು ಬರುತ್ತಿರುವುದನ್ನು ನೋಡಿ ದ್ವಿಚಕ್ರ ವಾಹನ ಏರಿ ಪರಾರಿಯಾಗಿದ್ದಾರೆ. […]

ಮೂಡುಬಿದಿರೆಯ ತಾಲೂಕು : ತಾಲೂಕು ಪಂಚಾಯತ್‌ ಸದಸ್ಯನ ಅಪಹರಣ, ದೂರು

Tuesday, August 4th, 2020
sukumar

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ತಾಲೂಕು ಪಂಚಾಯತ್‌ ಚುನಾವಣೆ ವೇಳೆ ತನ್ನನು ಅಪಹರಣ ಮಾಡಲಾಗಿದೆ ಎಂದು ಸದಸ್ಯರೋರ್ವರು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೂಡುಬಿದಿರೆ ತಾಲೂಕಿನ ಕಲ್ಲಮುಂಡ್ಕೂರು ತಾಪಂ ಸದಸ್ಯ ಸುಕುಮಾರ್ ಸನಿಲ್ ಅಪಹರಣಕ್ಕೊಳಗಾದವರು. ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಸುಕುಮಾರ್ ಸನಿಲ್ ಸೋಮವಾರ ಮೂಡುಬಿದಿರೆ ತಾಲೂಕು ಕಚೇರಿಯಲ್ಲಿ ನಡೆಯಬೇಕಿದ್ದ ತಾಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಅದನ್ನು ತಡೆಯಲು ನನ್ನನ್ನು ಅಪಹರಣಗೈದು ಉಡುಪಿಗೆ ತಂದು ಬಿಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. […]

ಹಣಕ್ಕಾಗಿ ವೈದ್ಯಕೀಯ ವಿದ್ಯಾರ್ಥಿ ಅಪಹರಣ

Friday, October 14th, 2011
Medical-Student Kidnap

ಉಳ್ಳಾಲ: ದೇರಳಕಟ್ಟೆಯ ವೈದ್ಯಕೀಯ ಕಾಲೇಜಿನಲ್ಲಿ ಇಂಟರ್ನ್ಶಿಪ್‌ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ತಂಡವೊಂದು ಹಣಕ್ಕಾಗಿ ಬುಧವಾರ ತಡರಾತ್ರಿ ಅಪಹರಣ ನಡೆಸಿದ್ದು, ಗುರುವಾರ ಮುಂಜಾನೆ ಕೇರಳದ ಮಂಜೇಶ್ವರದ ಉದ್ಯಾವರದ ಬಳಿ ಜಖಂಗೊಳಿಸಿ ಬಿಟ್ಟಿದ್ದಾರೆ.   ದೇರಳಟ್ಟೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಾಂಪ್ಲೆಕ್ಸ್‌ ಒಂದರಿಂದ ವಿದ್ಯಾರ್ಥಿಯನ್ನು ಅಪಹರಿಸಲಾಗಿದ್ದು ಹಣಕ್ಕಾಗಿ ಈ ಅಪಹರಣ ನಡೆದಿದೆ ಎನ್ನಲಾಗಿದೆ. ಕಾಲೇಜಿನ ಎದುರಿಗಿರುವ ಫ್ಲಾಟ್‌ನಲ್ಲಿ ವಿದ್ಯಾರ್ಥಿ ವಾಸವಾಗಿದ್ದ. ವಿದ್ಯಾರ್ಥಿಯನ್ನು ಕೇರಳದ ತ್ರಿಶೂರ್‌ ನಿವಾಸಿ ಮಹಮ್ಮದ್‌ ನೆಬಿಲ್‌(23) ಎಂದು ಗುರುತಿಸಲಾಗಿದೆ. ನೆಬಿಲ್‌ನ ತಂದೆ ತಾಯಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಕಾಂಪ್ಲೆಕ್ಸ್‌ ನ ಣಕಾಸಿನ ವ್ಯವಹಾರ ನೆಬಿಲ್‌ […]