ಸಾಕ್ಷ್ಯಾಧಾರ ಕೊರತೆ : ತಾಯಿ ಮತ್ತು ಅಪ್ರಾಪ್ತ ಬಾಲಕಿ ಅತ್ಯಾಚಾರದ ಆರೋಪಿ ಬಿಡುಗಡೆ

Tuesday, January 30th, 2024
Ullal-Rape

ಮಂಗಳೂರು : ಉಳ್ಳಾಲದಲ್ಲಿ ಠಾಣೆಯಲ್ಲಿ ತಾಯಿ ಹಾಗೂ ಆಕೆಯ ಮಗಳು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿಯನ್ನು ಸಾಕ್ಷ್ಯಾಧಾರ ಕೊರತೆಯ ಕಾರಣದಿಂದ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಬಿಡುಗಡೆಗೊಳಿಸಿದೆ. 2021ರಲ್ಲಿ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಬೂಬಕ್ಕರ್ ಸಿದ್ದಿಕ್ ಯಾನೆ ಸಿದ್ದಿಕ್ ಉಳ್ಳಾಲ್ ಎಂಬವವನನ್ನು ಆರೋಪ ಮುಕ್ತಗೊಳಿಸಿ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ ನೀಡಿದೆ . ಆರೋಪಿಯು ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಆಕೆಯ ಮಗಳು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ […]

ಪುತ್ತೂರು ಕಂಬಳಕ್ಕೆ ಬರುತ್ತಿದ್ದ ಅಪ್ರಾಪ್ತ ಬಾಲಕಿಗೆ ಕಿರುಕುಳ, ಪೊಲೀಸ್ ಠಾಣೆ ಮುಂದೆ ಹಿಂದೂ ಕಾರ್ಯಕರ್ತರ ಧರಣಿ

Sunday, January 28th, 2024
ಪುತ್ತೂರು ಕಂಬಳಕ್ಕೆ ಬರುತ್ತಿದ್ದ ಅಪ್ರಾಪ್ತ ಬಾಲಕಿಗೆ ಕಿರುಕುಳ, ಪೊಲೀಸ್ ಠಾಣೆ ಮುಂದೆ ಹಿಂದೂ ಕಾರ್ಯಕರ್ತರ ಧರಣಿ

ಪುತ್ತೂರು: ಪುತ್ತೂರು ಕಂಬಳಕ್ಕೆ ಬರುತ್ತಿದ್ದ ಅಪ್ರಾಪ್ತೆಗೆ ಅನ್ಯಕೋಮಿನ ಯುವಕನೋರ್ವ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಇದರಿಂದ ಉದ್ರಿಕ್ತರಾದ ಹಿಂದೂ ಕಾರ್ಯಕರ್ತರು ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು. ಪುತ್ತೂರು ತಾಲೂಕಿನ ನಗರ ಠಾಣೆ ಎದುರು ಈ ಘಟನೆ ನಡೆದಿದೆ. ಕಡಬ ಮೂಲದ ಶಾಕೀರ್ ಎಂಬಾತನಿಂದ ಬಾಲಕಿಗೆ ಕಿರುಕುಳ ನೀಡದ್ದ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದಾರೆ. ಪುತ್ತೂರು ಕಂಬಳ ವೀಕ್ಷಿಸಲು ತೆರಳುತ್ತಿದ್ದ ವೇಳೆ ಕಿರುಕುಳ ನೀಡಲಾಗಿದೆ ಎನ್ನಲಾಗುತ್ತಿದ್ದು. ಆರೋಪಿ ಶಾರೀಕ್ ನನ್ನು ವಶಕ್ಕೆ ಪಡೆದ ಪುತ್ತೂರು […]

ಬಂಟ್ವಾಳದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಐವರು ಕಾಮುಕರಿಂದ ಸರಣಿ ಅತ್ಯಾಚಾರ

Saturday, October 9th, 2021
Bantwal-gang-rape

ಬಂಟ್ವಾಳ  : ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿ ಅಮ್ಟಾಡಿ ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಅಪ್ರಾಪ್ತೆಯ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರ  ಮಾಡಿರುವುದಾಗಿ  ಬಾಲಕಿಯೇ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ. ಅಲ್ಲದೆ ಐವರು ಕಾಮುಕರ ಹೆಸರನ್ನು ಕೂಡ ತಿಳಿಸಿದ್ದಾಳೆ. ಕಾಮುಕರು […]

ಅಪ್ರಾಪ್ತ ವಯಸ್ಸಿನ ಬಾಲಕಿಯ ಜೊತೆ ಚಾಟ್ ಮಾಡಿದ ಹೆಡ್‌ಕಾನ್‌ಸ್ಟೇಬಲ್ ಬಂಧನ

Wednesday, July 28th, 2021
N Shashikumar

ಮಂಗಳೂರು : ಠಾಣೆಗೆ ದೂರು ಕೊಡಲು ಬಂದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೊಬೈಲ್ ನಂಬರ್ ಪಡೆದು  ಆಕೆಯ ಜತೆ ಮೊಬೈಲ್ ಫೋನ್ ಮೂಲಕ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಕ್ಕಳ ಕಲ್ಯಾಣ ಸಮಿತಿ ಮೂಲಕ ನೀಡಲಾದ ದೂರಿನ ಮೇರೆಗೆ ಮಂಗಳೂರು ನಗರ ಠಾಣೆಯೊಂದರ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ನಗರದ ಪೊಲೀಸ್ ಠಾಣೆ ಪ್ರಕರಣವೊಂದಕ್ಕೆ ಸಂಬಂಧಿಸಿ ಪೋಷಕರ ಜತೆ ದೂರು ನೀಡಲು ಬಂದಿದ್ದ ಬಾಲಕಿಯಿಂದ ಮೊಬೈಲ್ ಸಂಖ್ಯೆಯನ್ನು ಪಡೆದ ಠಾಣೆಯ ಹೆಡ್‌ಕಾನ್‌ಸ್ಟೇಬಲ್ […]

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಲು ಮಧ್ಯವರ್ತಿಯಾಗಿದ್ದ ಮಹಿಳೆಯ ಬಂಧನ

Wednesday, August 26th, 2020
Sunitha

ಕಾಸರಗೋಡು : ಮಹಿಳೆ ಯೊಬ್ಬಳು  ಮಧ್ಯವರ್ತಿ ಯಾಗಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಲು ಯುವಕರಿಬ್ಬರಿಗೆ ಸಹಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯನ್ನು ಕುಂಬ್ಳೆ ಪೊಲೀಸರು ಬಂಧಿಸಿದ್ದಾರೆ. ಕಟ್ಟದಂಗಡಿ ಪೆರಿಯಡ್ಕದ ಕಾಲನಿಯ ಸುನಿತಾ (30) ಬಂಧಿತಳು. ಘಟನೆ ಕುಂಬಳೆಯಿಂದ ಒಂದು ವರ್ಷದ ಬಳಿಕ ಬೆಳಕಿಗೆ ಬಂದಿದ್ದು, ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳಿಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಂಬಳೆಯಲ್ಲಿ ಉತ್ಸವ ನೋಡಲೆಂದು 2018 ರ ಡಿಸಂಬರ್ 18 ರಂದು ರಾತ್ರಿ ಬಾಲಕಿಯನ್ನು ಕರೆದೊಯ್ದು ನಿರ್ಜನ ಸ್ಥಳದಲ್ಲಿ ಕೃತ್ಯ ನಡೆಸಿದ್ದು, ಇಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ರಾತ್ರಿ ಓರ್ವ […]

ಧಾರವಾಡ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಕರವೇ ಪ್ರತಿಭಟನೆ

Tuesday, August 11th, 2020
karave

ಧಾರವಾಡ : ಜಿಲ್ಲೆಯ ಬೇಗೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಸಾವು ಧಾರವಾಡ ಜಿಲ್ಲೆ ಜನತೆಗೆ ಹೆಣ್ಣು ಮಕ್ಕಳನ್ನು ಕಾಪಾಡುವ ಭಯದ ವಾತಾವರಣ ಬಂದಿದೆ, ಆರೋಪಿಗೆ ಶೀಘ್ರವೇ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ನೇಹ ಬಳಗ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದೆ. ಅಪರಾಧಿಯನ್ನು ಮಾತ್ರ ಬಂಧಿಸಿದ್ದೀರಿ ಆದರೆ ಅಪರಾಧಿ ಬಶೀರ ನ ಸಂಬಂಧಿಕರು ಪೂಜಾಳಾ ಕುಟುಂಬಕ್ಕೆ ಜೀವ ಬೆದರಿಕೆ ಹಾಗೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. […]

ಕುಥುವಾ ದಲ್ಲಿ ಹತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಗೆ ನ್ಯಾಯ ಒದಗಿಸಲು ಪ್ರತಿಭಟನೆ

Wednesday, April 18th, 2018

ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ಯತ್ನ-ಆರೋಪಿ ಪೋಲೀಸ್ ವಶಕ್ಕೆ

Monday, December 21st, 2015
Haneefa

ಉಪ್ಪಳ: ಬಾಡಿಗೆ ಕ್ವಾರ್ಟ್ರಸ್ ನಲ್ಲಿ ವಾಸವಿರುವ ಕರ್ನಾಟಕ ಮೂಲದ ದಂಪತಿಗಳ ಕುರುಡಿ ಅಪ್ರಾಪ್ತ ಬಾಲಕಿಯೋರ್ವೆಯನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಸೋಮವಾರ ಅಪರಾಹ್ನ ಉಪ್ಪಳ ಹಿದಾಯತ್ ನಗರದಲ್ಲಿ ನಡೆದಿದ್ದು, ಪೋಲೀಸರ ಸಕಾಲಿಕ ಕಾರ್ಯಾಚರಣೆಯಿಂದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಉಪ್ಪಳದ ಹಿದಾಯತ್ ನಗರದ ಬಾಡಿಗೆ ಕೊಠಡಿಯಲ್ಲಿ ವಾಸಿಸುವ ಕರ್ನಾಟಕ ಮೂಲದ ಕಲಂದರ್ ಹಾಗೂ ಅಫ್ರಿದಾಬಾನು ದಂಪತಿಗಳ ಪುತ್ರಿ ಮೂರನೇ ತರಗತಿಯ ವಿದ್ಯಾರ್ಥಿನಿಯನ್ನು ನೆರೆಮನೆಯ ವ್ಯಕ್ತಿಯಾದ ಮೊಹಮ್ಮದ್ ಹನೀಫಾ(50)ಅತ್ಯಾಚಾರಕ್ಕೆ ಯತ್ನಿಸಿರುವುದಾಗಿ ದೂರಲಾಗಿದೆ. ಸೋಮವಾರ ಅಪರಾಹ್ನ ದಂಪತಿಗಳು ತಮ್ಮ ಇಬ್ಬರ ಮಕ್ಕಳ ಪೈಕಿ […]

ಬಾಲಕಿಯನ್ನು ಮನೆಗೆಲಸದಿಂದ ಬಿಡಿಸಿದ ಕಾರ್ಮಿಕ ಇಲಾಖೆಯ ಅಧಿಕಾರಿಗಳು

Friday, November 18th, 2011
child Labour

ಮಂಗಳೂರು: ಕಾರ್ಮಿಕ ಇಲಾಖೆಯ ಅಧಿಕಾರಿಗಳು ಗುರುವಾರ ನಗರದ ಪಾಂಡೇಶ್ವರದಲ್ಲಿ ಮನೆ ಕೆಲಸ ನಿರ್ವಹಿಸುತ್ತಿದ್ದಳೆನ್ನಲಾದ ಚಿಕ್ಕಮಗಳೂರು ಮೂಲದ ಬಾಲಕಿಯೋರ್ವಳನ್ನು ಪತ್ತೆ ಹಚ್ಚಿ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿದ್ದಾರೆ. ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪಾಂಡೇಶ್ವರ ಪೊಲೀಸರ ಸಹಕಾರದಲ್ಲಿ ಓಲ್ಡ್‌ಕೆಂಟ್‌ ರಸ್ತೆಯಲ್ಲಿನ ಮನ್ಸೂರ್‌ ಹುಸೈನ್‌ ಅವರ ಮನೆಗೆ ದಾಳಿ ಮಾಡಿ ಬಾಲಕಿಯನ್ನು ವಶಕ್ಕೆ ತೆಗೆದುಕೊಂಡರು. ರಕ್ಷಿಸಲ್ಪಟ್ಟ ಬಾಲಕಿಯನ್ನು ಚಿಕ್ಕಮಗಳೂರು ಜಿಲ್ಲೆ ತರೀಕೆರೆಯ ಬೆಗೂರು ಗ್ರಾಮದ ಮಿನಾಝ್ 12 ವ ಎಂದು ಗುರುತಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಗಂಗಾಧರ್‌ […]