ಬಸ್ ನಲ್ಲಿ ಸಾಗಿಸುತ್ತಿದ್ದ ಪಾನ್ ಮಸಾಲೆ ಸಹಿತ ಓರ್ವ ಸೆರೆ

Wednesday, September 7th, 2016
Shabeer

ಉಪ್ಪಳ: ಬಸ್‌ನಲ್ಲಿ ಸಾಗಿಸುತ್ತಿದ್ದ 1803 ಪ್ಯಾಕೆಟ್ ಪಾನ್‌ಮಸಾಲೆ ಸಹಿತ ಓರ್ವನನ್ನು ವಾಮಂಜೂರು ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಸೋಮವಾರ ಮಧ್ಯಾಹ್ನ ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಸಂಸ್ಥೆ ಬಸ್‌ನಲ್ಲಿ ತಪಾಸಣೆ ನಡೆಸಿದಾಗ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿಟ್ಟ ಪಾನ್ ಮಸಾಲೆ ಪತ್ತೆಯಾಗಿದೆ. ಈ ಸಂಬಂಧ ನೀಲೇಶ್ವರ ನಿವಾಸಿ ರಜಾಕ್ ಎಂಬವರ ಪುತ್ರ ಶಬೀರ್ (24) ಎಂಬಾತನನ್ನು ಸೆರೆ ಹಿಡಿದಿದ್ದಾರೆ. ಬಳಿಕ ಆತನನ್ನು ಮಂಜೇಶ್ವರ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ವಾಮಂಜೂರು ಚೆಕ್‌ಪೋಸ್ಟ್ ಅಬಕಾರಿ ಅದಿಕಾರಿಗಳಾದ ಶಂಕರನ್, ರೆನ್ನಿ ಫೆರ್ನಾಂಡೀಸ್, ಉಮ್ಮರ್ […]

ಬಸ್ನಲ್ಲಿ ಸಾಗಿಸುತ್ತಿದ್ದ 5.200 ಕಿಲೋ ಗಾಂಜಾ ಸಹಿತ ಚೌಕಿ ನಿವಾಸಿ ಸೆರೆ

Thursday, August 25th, 2016
Ganja

ಉಪ್ಪಳ: ಮಂಗಳೂರಿನಿಂದ ಕಾಸರಗೋಡಿಗೆ ಬಸ್‌ನಲ್ಲಿ ಸಾಗಿಸುತ್ತಿದ್ದ 5.200 ಕಿಲೋ ಗಾಂಜಾ ಸಹಿತ ಓರ್ವನನ್ನು ವಾಮಂಜೂರು ಚೆಕ್‌ಪೋಸ್ಟ್ ನಲ್ಲಿ ಅಬಕಾರಿ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಚೆಕ್‌ಪೋಸ್ಟ್ ನಲ್ಲಿ ಅಬಕಾರಿ ಅಧಿಕಾರಿಗಳು ವಾಹನ ತಪಾಸಣೆ ವೇಳೆ ಗಾಂಜಾ ಪತ್ತೆಯಾಗಿದೆ. ಮಂಗಳವಾರ ಸಂಜೆ 4 ಗಂಟೆಗೆ ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ನ್ನು ತಪಾಸಣೆ ನಡೆಸುತ್ತಿದ್ದಾಗ ಚೌಕಿ ಆಜಾದ್ ನಗರ ನಿವಾಸಿ ಮೊಹಮ್ಮದ್‌ರ ಪುತ್ರ ಅಹಮ್ಮದ್(45) ಎಂಬಾತನಿಂದ ಗಾಂಜಾ ವಶಪಡಿಸಲಾಗಿದ್ದು ಈತನನ್ನು ಸೆರೆಹಿಡಿದಿದ್ದಾರೆ. ಈ ಮಾಲನ್ನು ಕಾಸರಗೋಡು ರೈಲ್ವೇ […]