ಶ್ರೀಗಂಧ ಕಳ್ಳತನ ಪ್ರಕರಣ..ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!

Thursday, July 26th, 2018
police-arrest

ಮಂಗಳೂರು: ಶ್ರೀಗಂಧ ಕಳ್ಳತನ ಪ್ರಕರಣದಲ್ಲಿ ಕಳೆದ 44 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಬ್ಬಾಸ್, 1974 ಜುಲೈ 15 ರಂದು ತನ್ನ ಬೈಕ್ನಲ್ಲಿ 7 ಕೆಜಿ ಶ್ರೀಗಂಧ ಸಾಗಿಸುತ್ತಿದ್ದ ವೇಳೆ ಬುಲ್ಲೇರಿ ಕಟ್ಟೆ ಫುಡ್ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ಮಾಡುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಗಂಗೋಜಿ ರಾವ್ ಬೈಕ್ ತಪಾಸಣೆ ಮಾಡಿದಾಗ ತಪ್ಪಿಸಿಕೊಂಡಿದ್ದ. ಈ ಬಗ್ಗೆ ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ನಾಲ್ಕು ತಿಂಗಳಿಂದ ಆರೋಪಿಯ ಬಗ್ಗೆ ಮಾಹಿತಿ […]

ಉಳ್ಳಾಲದಲ್ಲಿ ಗುಡ್ಡ ಕುಸಿತ..ಎರಡು ಮನೆಗೆ ಹಾನಿ!

Wednesday, June 20th, 2018
ullal

ಮಂಗಳೂರು: ಅಂಬ್ಲಮೊಗರು ಮದಕ ಬಳಿ‌ ಗುಡ್ಡ ಕುಸಿದು ಎರಡು ಮನೆಗೆ ಹಾನಿಯಾಗಿದೆ. ಸುಮಾರು 10ಕ್ಕೂ ಹೆಚ್ಚು ಮನೆಗಳನ್ನು ಸಂಪರ್ಕಿಸುವ ರಸ್ತೆಗೆ ಗುಡ್ಡ ಕುಸಿತವಾಗಿದೆ. ಮನೆಗಳಿಗೆ ಸಂಪರ್ಕ ಇಲ್ಲದಂತಾಗಿ ಮನೆ ಮಂದಿ ಪರದಾಡುವ ಸ್ಥಿತಿ‌ ನಿರ್ಮಾಣವಾಗಿದೆ. ನಾಲ್ಕು ಮನೆಗಳು ಅಪಾಯದಲ್ಲಿದ್ದು, ಮದಕ ನಿವಾಸಿಗಳಾದ ಅಬ್ಬಾಸ್ ಮತ್ತು ರಝಾಕ್ ಎಂಬವರ ಮನೆಗೆ ಹಾನಿಯಾಗಿದೆ.