ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದ ಮಾಜಿ ‌ಸಚಿವ ಅಭಯಚಂದ್ರ ಜೈನ್

Friday, July 2nd, 2021
Abhyachandra Jain

ಮಂಗಳೂರು : ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ‌ಸಚಿವ ಅಭಯಚಂದ್ರ ಜೈನ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ನನಗಿನ್ನು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಕಾಂಗ್ರೆಸ್ ಗೆಲ್ಲಬೇಕೆಂದರೆ ಯುವಕರಿಗೆ ಹೆಚ್ಚು ಪ್ರಾಶಸ್ತ್ಯ ನೀಡಬೇಕು. ನಮ್ಮ ರಾಜಕಾರಣಿಗಳು ಇದನ್ನು ಮರೆತಿರುವುದರಿಂದಲೇ ಕಾಂಗ್ರೆಸ್ಗೆ ಭಾರೀ ಏಟು ಬಿದ್ದಿದೆ. ಆದ್ದರಿಂದ ದೇಶದಲ್ಲಿ ಕಾಂಗ್ರೆಸ್ ಉಳಿಯಬೇಕಾದರೆ ನಾವು ಈ ರೀತಿಯ ಪ್ರಯತ್ನ ಮಾಡಬೇಕು ಎಂದರು. ನಾನು, ಸೊರಕೆ ಹಾಗೂ ರಮಾನಾಥ್‌ ರೈ ಅವರು 35-40 ನೇ […]

ಸಂಚಾರಿ ವಿಜಯ್ ಗೆ ಶ್ರದ್ಧಾಂಜಲಿ, ಮರಣದ ಬಳಿಕ ಅಂಗಾಂಗ ದಾನ ಮಾಡುವುದಾಗಿ ಘೋಷಿಸಿದ ಅಭಯಚಂದ್ರ ಜೈನ್

Friday, June 18th, 2021
Abhayachandra Jain

ಮಂಗಳೂರು  : ನಟ ಸಂಚಾರಿ ವಿಜಯ್ ಮರಣ ನಂತರವೂ ಏಳು ಜನರಿಗೆ ಅಂಗಗಳನ್ನು ನೀಡಿ ಇತರರಿಗೆ ಜೀವದಾನದ ಮಾದರಿಯಾಗಿದ್ದಾರೆ ಎಂದು ಮಾಜಿ ಸಚಿವ ಅಭಯ ಚಂದ್ರ ಜೈನ್ ತಿಳಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿಂದು ಸಂಚಾರಿ ವಿಜಯ್ ಭಾವಚಿತ್ರಕ್ಕೆ ಹೂಮಾಲೆ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದ ಅವರು, ಮರಣಾ ನಂತರ ತಾನೂ ಕೂಡಾ ತನ್ನ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿರುವುದಾಗಿ ಪ್ರಕಟಿಸಿದರು. ನಾನು  ಮರಣ ಹೊಂದಿದ  ಬಳಿಕ ನನ್ನ ಅಂಗಾಂಗಳನ್ನು ದಾನ ಮಾಡುವಂತೆ   ವಿಲ್  ಬರೆಯಲು ನಿರ್ಧರಿಸಿದ್ದೇನೆ ಎಂದು ಹೇಳಿದ ಅವರು, ದ.ಕ. ಜಿಲ್ಲಾ […]

ಜಿಲ್ಲಾಡಳಿತದ ನಿರ್ಲಕ್ಷ್ಯ ಮರವೂರು ಸೇತುವೆ ಹಾನಿಗೊಳಗಾಗಲು ಕಾರಣ : ಅಭಯಚಂದ್ರ ಜೈನ್

Tuesday, June 15th, 2021
Abhayachandra Jain

ಮಂಗಳೂರು : ಜೆಸಿಬಿ ಮೂಲಕ ಸೇತುವೆ ಸುತ್ತಮುತ್ತ ಹೂಳೆತ್ತುವ ನೆಪದಲ್ಲಿಅವ್ಯಾಹತವಾಗಿ ಮರಳು ಮಾಫಿಯಾ ನಡೆಯುತ್ತಿರುವುದೇ  ಮರವೂರು ಸೇತುವೆಯ  ಪಿಲ್ಲರ್ ಗಳು ಕುಸಿಯಲು ಕಾರಣ  ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ಸಮೀಪದಲ್ಲೇ ಅವ್ಯಾಹತವಾಗಿ ಮರಳು ಮಾಫಿಯಾ ನಡೆಯುತ್ತಿದ್ದರೂ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಮೌನ ವಹಿಸಿರುವುದು ಈ ದುರಂತಕ್ಕೆ ಕಾರಣ ಎಂದು ಜೈನ್ ಆರೋಪಿಸಿದರು. ಮರಳು ಮಾಫಿಯಾದಿಂದ  ಮರವೂರು ಸೇತುವೆಯ […]

ಸಾವಿರಕಂಬದ ಬಸದಿಯಲ್ಲಿ ಕೊರೊನಾ ನಿವಾರಣೆಗೆ ಲಕ್ಷದೀಪೋತ್ಸವ

Wednesday, January 27th, 2021
lakshadeepotsava

ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಸಾವಿರಕಂಬದ ಬಸದಿಯಲ್ಲಿ ಕೊರೊನಾ ನಿವಾರಣೆಯಾಗಬೇಕೆಂಬ ಉದ್ದೇಶದಿಂದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಸಂಕಲ್ಪಿಸಿದ ಲಕ್ಷದೀಪೋತ್ಸವ ಹರಕೆಯನ್ನು ಮಂಗಳವಾರ ರಾತ್ರಿ ಜರುಗಿಸಲಾಯಿತು. ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ದೇಶದಲ್ಲಿ ಕೊರೊನಾ ವ್ಯಾಪಿಸಿದ ಸಂದರ್ಭದಲ್ಲಿ ಜನರು ಸಂಕಷ್ಟಕ್ಕೀಡಾಗಿದ್ದು, ಸಂಪತ್ತು ನಷ್ಟದ ಜೊತೆಗೆ ಉದ್ಯೋಗದ ಅಸ್ಥಿರತೆ ಕಾಡಿತ್ತು. ಹಿಂದೆ ರಾಜರು ಅನಾರೋಗ್ಯಕ್ಕೀಡಾದಾಗಲೂ ಸಾವಿರ ಕಂಬದ ಬಸದಿಯ ಚಂದ್ರನಾಥ ಸ್ವಾಮಿಯಲ್ಲಿಯೂ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಈಗ ಕೊರೊನಾಮುಕ್ತವಾಗಲು ಇಲ್ಲಿ ಲಕ್ಷದೀಪೋತ್ಸವದ ಸಂಕಲ್ಪ ನಡೆಸಲಾಗಿತ್ತು. […]

ಶಿಕ್ಷಕಿ ಕೊರೋನಾ ಚಿಕಿತ್ಸೆಗೆ ಸ್ಪಂದಿಸಿದ ಸಿಎಂ ಹಾಗೂ ಶಿಕ್ಷಣ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಅಭಯಚಂದ್ರ ಜೈನ್

Thursday, October 15th, 2020
Abhayachandra Jain

ಮಂಗಳೂರು : ದೇಶ ಕೊರೊನದಿಂದ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದರೂ  ಪ್ರಧಾನಿ ಮೋದಿಯವರು 8 ಸಾವಿರ ಕೋಟಿ ರೂ.ಯ ವಿಮಾನ ಖರೀದಿಸಿದ್ದಾರೆ. ಕೊರೊನಾ ಸಂಕಷ್ಟದ ಕಾಲದಲ್ಲಿಯೂ ಈ ರೀತಿಯ ಖರೀದಿ ಎಷ್ಟು ಸಮಂಜಸ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೊರೊನಾದಲ್ಲಿ ಬಳಲುತ್ತಿರುವ ಜನತೆಗೆ ಸಂತಾಪ ಹಾಗೂ ಅವರ ಆಸ್ಪತ್ರೆಗಳ ಖರ್ಚು-ವೆಚ್ಚಗಳನ್ನು‌ ಸರ್ಕಾರ ಭರಿಸಿ, ಸಾಂತ್ವನ ಹೇಳಬೇಕಾಗಿರುವ ಕಾರ್ಯ ಈಗ ಆಗಬೇಕಾಗಿದೆ ಎಂದು ಹೇಳಿದರು. ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಕರು ತಮ್ಮ ಜೀವವನ್ನು […]

ಪ್ರತಿದಿನ 15 ರಿಂದ 20 ಕಿ.ಮೀ.ನಷ್ಟು ಸೈಕಲ್ ಸವಾರಿ ಮಾಡುವ ಮಾಜಿ ಸಚಿವ ಜೈನ್

Friday, October 9th, 2020
AbhayachandraJain

ಮಂಗಳೂರು: ಮಾಜಿ‌ ಕ್ರೀಡಾ ಸಚಿವ ಕೆ.ಅಭಯಚಂದ್ರ ಜೈನ್ ಅವರು ಈಗ ಕಾರು ಬಿಟ್ಟು  ಪ್ರತಿದಿನ 15 ರಿಂದ 20 ಕಿ.ಮೀ.ನಷ್ಟು ಸೈಕಲ್ ಸವಾರಿ ಮಾಡುತ್ತಿದ್ದು ಯುವಕರಿಗೆ, ಸೈಕಲ್ ಸವಾರಿ ಮಾಡಿದರೆ ತಮ್ಮ ಆರೋಗ್ಯದ ಜತೆಗೆ ಫಿಟ್‍ನೆಸನ್ನು ಕಾಪಾಡಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದ್ದಾರೆ. ಅವರು ಹೊಸದಾಗಿ ಸೈಕಲೊಂದನ್ನು ಖರೀದಿಸಿದ್ದು ತಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವತ್ತ ಗಮನ ಹರಿಸುತ್ತಿದ್ದಾರೆ. ಸಣ್ಣ ವಯಸ್ಸಿನಿಂದಲೂ ಕ್ರೀಡೆಯಲ್ಲಿ ಆಸಕ್ತಿಯನ್ನು ಹೊಂದಿರುವ ಅಭಯಚಂದ್ರ ಜೈನ್ ಅವರು 71ರ ಇಳಿ ವಯಸ್ಸಿನಲ್ಲಿಲ್ಲೂ ಬಾಸ್ಕೆಟ್‍ಬಾಲ್, ಶಟಲ್ ಬ್ಯಾಡ್ಮಿಂಟನ್ ಮುಂತಾದ ಕ್ರೀಡೆಗಳನ್ನು […]

ನನ್ನ ಬಗ್ಗೆ ಏಕವಚನದಲ್ಲಿ ಮಾತನಾಡುವಷ್ಟು ಸಲುಗೆ ಸಿದ್ದರಾಮಯ್ಯ ಜೊತೆಗಿಲ್ಲ: ಹಾಲಾಡಿ ಶ್ರೀನಿವಾಸ ಶೆಟ್ಟಿ

Saturday, October 27th, 2018
srinivas-shetty

ಕುಂದಾಪುರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೈಂದೂರಿನ ನಾಗೂರಿನಲ್ಲಿ ನಡೆದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಸಭೆಯಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಮುಖವನ್ನೇ ನೋಡಿಲ್ಲ ಎಂದು ಏಕವಚನದಲ್ಲಿ ಮಾತನಾಡಿದ್ದಕ್ಕೆ ಶುಕ್ರವಾರ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ಒರ್ವ ಶಾಸಕನ ಬಗ್ಗೆ ಏಕವಚನದಲ್ಲಿ ಮಾತನಾಡುವಷ್ಟು ಸಲುಗೆ ನಮಗೆ ಅವರೊಂದಿಗಿಲ್ಲ. ಸಲುಗೆ ಇದ್ದವರ ಜೊತೆ ಬೇಕಾದರೆ ಅವರು ಮಾತನಾಡಲಿ ನಮ್ಮ ಅಭ್ಯಂತರವೇನು ಇಲ್ಲ. ಅವರು ಯಾವ ಉದ್ದೇಶದಿಂದ ಹಾಗೆ ಮಾತನಾಡಿದರು ಎಂಬುದು ನನಗೆ ತಿಳಿದಿಲ್ಲ. ಅವರೇ […]

ರಾಜ್ಯದಲ್ಲಿ ಬಿಜೆಪಿಯ ಅಧ್ಯಕ್ಷರಾದಿಯಾಗಿ ಎಲ್ಲರೂ ಬೇಲ್ ಗಾಡಿಗಳೇ: ಬಿ. ರಮಾನಾಥ ರೈ

Tuesday, July 17th, 2018
ramanath-rai

ಮಂಗಳೂರು: ಕಾಂಗ್ರೆಸ್ ನ ಅನೇಕ ನಾಯಕರು ಬೇಲ್ ಗಾಡಿಗಳು ಎಂಬುದಾಗಿ ಜನರಾಡಿಕೊಳ್ಳುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಅಧ್ಯಕ್ಷರಾದಿಯಾಗಿ ಎಲ್ಲರೂ ಬೇಲ್ ಗಾಡಿಗಳೇ. ಅವರನ್ನು ಪ್ರಧಾನಿ ಏನು ಮಾಡುತ್ತಾರೆ ಎಂಬುದನ್ನು ಹೇಳಲಿ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಸವಾಲೆಸೆದಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರಕಾರದ ಆಡಳಿತ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಕೇಂದ್ರ ಸರಕಾರ ಚುನಾವಣೆ ಹತ್ತಿರ ಬರುತ್ತಿರುವಂತೆಯೇ ಗಿಮಿಕ್ ಮಾಡುತ್ತಿರುವುದೇ ಹೊರತು […]

ಮೂಡುಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ 25 ಸಾವಿರ ಮತಗಳಿಂದ ಜಯಭೇರಿ..!

Tuesday, May 15th, 2018
umanath-kotian

ಮೂಡುಬಿದಿರೆ: ರಾಜ್ಯದಲ್ಲಿ ಬಿಜೆಪಿಗೆ ಮೊದಲ ಜಯ ಲಭಿಸಿದೆ. ಮೂಡುಬಿದಿರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಜಯಭೇರಿ ಬಾರಿಸಿದ್ದಾರೆ. ತನ್ನ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಅಭಯಚಂದ್ರ ಜೈನ್ ಅವರ ವಿರುದ್ಧ 25 ಸಾವಿರಕ್ಕೂ ಅಧಿಕ ಮತಗಳಿಂದ ಉಮಾನಾಥ್ ಕೋಟ್ಯಾನ್ ಜಯಗಳಿಸಿದ್ದಾರೆ.

ಖೆಡ್ಡಾಕ್ಕೆ ಬಿದ್ದ ಅಭಯಚಂದ್ರ ಜೈನ್ ? ನಿಮಗಿದು ಗೊತ್ತೇ ?

Friday, April 27th, 2018
Abhayachandra Jain

ಮಂಗಳೂರು : ತಾವೇ ತೋಡಿದ ಖೆಡ್ಡಾಕ್ಕೆ ತಾವೇ ಬಿದ್ದಂತೆ ಎಂಬ ಹಳೆಯ ಮಾತಿದೆ. ಭಾರೀ ಬುದ್ಧಿವಂತಿಕೆ ತೋರಿಸಿ ಲಾಭ ಮಾಡಲು ಹೋಗಿ ತಾವೇ ಗುಂಡಿಗೆ ಬೀಳುವ ಜನರಿದ್ದಾರೆ. ಮಾಜಿ ಸಚಿವ ಅಭಯಚಂದ್ರ ಜೈನ್ ಅವರ ವಿಚಾರದಲ್ಲಿ ಈಗ ಹೀಗೆಯೋ ಆದಂತಿದೆ. ಕಳೆದೆರಡು ಮೂರು ತಿಂಗಳಿನಿಂದ ಮೂಡಬಿದಿರೆಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಹವಾ ಭಾರೀ ಜೋರಾಗಿತ್ತು. ಈಗ ಕಾಂಗ್ರೆಸ್ ಹವಾ ಠುಸ್ ಆಗಿದೆ. ಕಾಂಗ್ರೆಸ್ ಪರವಾಗಿದ್ದ ಯುವಕರ ಗುಂಪು ತಂಢಾ ಹೊಡೆದಿದೆ. ಇದಕ್ಕೆ ಕಾರಣ ಯುವಕಾಂಗ್ರೆಸ್ ಮುಖಂಡ […]