ಪೆಪ್ಪರ್ ಸ್ಪ್ರೇ ಮಾಡಿ 24 ಗ್ರಾಂ ತೂಕದ ಚಿನ್ನದ ಸರ ಎಗರಿಸಿದ ಮಂಗಳಮುಖಿ ಬಂಧನ

Monday, November 29th, 2021
Mangalamukhi-Abhishek

ಮಂಗಳೂರು : ಬೈಕ್ ಸವಾರನನ್ನು ತಡೆದು ನಿಲ್ಲಿಸಿ ಚಿನ್ನದ ಸರವನ್ನು ಸುಲಿಗೆಗೈದ ಮಂಗಳಮುಖಿಯನ್ನು ಕದ್ರಿ ಠಾಣೆಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮೂಲತಃ ಮೈಸೂರಿನ ಪ್ರಸ್ತುತ ಬೆಂಗಳೂರಿನ ನಿವಾಸಿ ಅಭಿಷೇಕ್ ಯಾನೆ ಗೊಂಬೆ ಯಾನೆ ಅನಾಮಿಕ (27) ಬಂಧಿತ ಆರೋಪಿ. ಈ ಮಂಗಳಮುಖಿ ನಗರದ ನಂತೂರು ಸಮೀಪ  ಗಣೇಶ್ ಶೆಟ್ಟಿ ಎಂಬವರು ಎರಡು ತಿಂಗಳ ಹಿಂದೆ ತನ್ನ ಬೈಕ್‌ನಲ್ಲಿ  ಬಿಎಸ್‌ಎನ್‌ಎಲ್ ಎಕ್ಸೇಂಜ್ ಬಳಿಯ ರಸ್ತೆಯಲ್ಲಿ ತೆರಳುತ್ತಿದ್ದಾಗ ಹಠಾತ್ ಆಗಿ ಅಡ್ಡ ಬಂದ ಮಂಗಳಮುಖಿ ಗಣೇಶ್ ಶೆಟ್ಟಿಯ ಮುಖಕ್ಕೆ ಪೆಪ್ಪರ್ ಸ್ಪ್ರೇ […]

ಅಭಿಷೇಕ್ ಹತ್ಯೆ ಪ್ರಕರಣದಲ್ಲಿ ಟ್ವಿಸ್ಟ್ : ಹೋಟೆಲ್‍ನ ರೂಂನಲ್ಲಿದ್ದ ವ್ಯಕ್ತಿಯಿಂದ ಕೃತ್ಯ

Saturday, November 30th, 2019
Abishek

ಮೈಸೂರು : ಅಮೆರಿಕದಲ್ಲಿ ಮೈಸೂರಿನ ಯುವಕ ಅಭಿಷೇಕ್ ಹತ್ಯೆ ಪ್ರಕರಣದಲ್ಲಿ ಟ್ವಿಸ್ಟ್ ಸಿಕ್ಕಿದ್ದು, ಹೋಟೆಲ್‍ನ ರೂಂನಲ್ಲಿದ್ದ ವ್ಯಕ್ತಿಯೇ ಕೊಲೆ ಮಾಡಿರುವುದು ಸ್ಪಷ್ಟವಾಗಿದೆ. ಅಮೆರಿಕದ ಸ್ಯಾನ್‍ಬರ್ನಾಡಿಯೊ ಪ್ರದೇಶದ ಹೋಟೆಲ್‍ನಲ್ಲಿ ಅಭಿಷೇಕ್ ಸುದೇಶ್ ಭಟ್ (25) ಕೆಲಸ ಮಾಡುತ್ತಿದ್ದರು. ಎಂದಿನಂತೆ ಹೋಟೆಲ್‍ನ ಕೆಲಸಗಾರರು ಗುರುವಾರ ರೂಂ ಸ್ವಚ್ಛಗೊಳಿಸುತ್ತಿದ್ದರು. ಆದರೆ ಒಂದು ರೂಂನಲ್ಲಿದ್ದ ವ್ಯಕ್ತಿಯೊಬ್ಬ ಮಾತ್ರ ಬಾಗಿಲು ತೆಗೆದಿರಲಿಲ್ಲ. ಈ ವಿಚಾರವನ್ನು ಕೆಲಸಗಾರರು ಅಭಿಷೇಕ್‍ಗೆ ತಿಳಿಸಿದ್ದರು. ಆಗ ಅಭಿಷೇಕ್ ವ್ಯಕ್ತಿ ಇದ್ದ ರೂಂ ಬಾಗಿಲನ್ನು ತಟ್ಟಿದ್ದರು. ಇದರಿಂದ ಕೋಪಗೊಂಡ ವ್ಯಕ್ತಿ ಏಕಾ […]

ಎಂಡೋಪೀಡಿತ ಅಭಿಷೇಕ್, ದ್ವಿತೀಯ ಪಿ.ಯು.ಸಿ.ಯಲ್ಲಿ ಪ್ರಥಮ ಸ್ಥಾನದಲ್ಲಿ ತೇರ್ಗಡೆ

Monday, April 15th, 2019
Abhishek

ಮಂಗಳೂರು : ಅಭಿಷೇಕ್, ಎಂಡೋಪಾಲನಾ ಕೇಂದ್ರ, ಕೊಲದ ವಿದ್ಯಾರ್ಥಿ ದ್ವಿತೀಯ ಪಿ.ಯು.ಸಿ. ಕಲಾವಿಭಾಗ ದಲ್ಲಿ 63 ಶೇಕಡಾ ಅಂಕ ಪಡೆದು ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿರುತ್ತಾನೆ. ಶ್ರೀ ವಸಂತ ಮತ್ತು ಶ್ರೀಮತಿ ಗಂಗರತ್ನ ಇವರ ಪುತ್ರನಾದ ಅಭಿಷೇಕ್ ಕಳೆದ ವರ್ಷ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 76% ಅಂಕ ಪಡೆದು ತೇರ್ಗಡೆಯಾಗಿರುವನು. ಸೇವಾ ಭಾರತಿ (ರಿ) ಮಂಗಳೂರು ಅಭಿಷೇಕ್‌ನ ಸಾಧನೆಗೆ ಅಭಿನಂದಿಸಿದೆ. ಹಾಗೂ ಈ ಸಾಧನೆಗೈಯಲು ಸಹಕರಿಸಿದ ದ.ಕ. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಪ್ರಾಂಶುಪಾಲರು ಸರ್ಕಾರಿ […]

ಸಾಲಬಾಧೆ ತಾಳಲಾರದೆ ಕೆರೆಗೆ ಹಾರಿದ ತಂದೆ..ರಕ್ಷಿಸಲು ಹೋದ ಮಗನೂ ಸಾವು!

Thursday, November 22nd, 2018
suicide

ಚಿಕ್ಕಮಗಳೂರು: ಸಾಲಬಾಧೆ ತಾಳಲಾರದೆ ತಂದೆ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ರಕ್ಷಿಸಲು ಹೋದ ಮಗ ಕೂಡಾ ತಂದೆ ಜೊತೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಎನ್.ಆರ್. ಪುರ ತಾಲೂಕಿನಲ್ಲಿ ನಡೆದಿದೆ. ತಂದೆ ತಿಮ್ಮಣ್ಣಗೌಡ (55) ಹಾಗೂ ಮಗ ಅಭಿಷೇಕ್ (24) ಸಾವನ್ನಪ್ಪಿದವರು ಎನ್ನಲಾಗಿದೆ. ಇವರಿಗೆ ಎನ್.ಆರ್.ಪುರದ ಹಂತುವಾನಿ ಗ್ರಾಮದಲ್ಲಿ 2 ಎಕರೆ ಜಾಗವಿದ್ದು, ಅಡಿಕೆ ಮತ್ತು ಭತ್ತ ಬೆಳೆಯುತ್ತಿದ್ದರು. ತಮ್ಮ ಜಮೀನಿನಲ್ಲಿ 10ಕ್ಕೂ ಹೆಚ್ಚು ಬೋರ್ವೆಲ್ ಕೊರೆಯಿಸಿದ್ದರು. ಆದರೆ ಬೋರ್ವೆಲ್ನಲ್ಲಿ ನೀರು ಬಂದಿರಲಿಲ್ಲ. ಅಲ್ಲದೇ ಬ್ಯಾಂಕ್ವೊಂದರಲ್ಲಿ ಮೂರು […]

ರೆಬೆಲ್ ಸ್ಟಾರ್ ಅಂಬರೀಶ್@ 66…ಅಭಿಮಾನಿಗಳಿಂದ ಅಂಬಿ ಅದ್ಧೂರಿ ಹುಟ್ಟುಹಬ್ಬ ಆಚರಣೆ

Tuesday, May 29th, 2018
ambareesh

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಇಂದು 66ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಿನ್ನೆ ತಾನೇ ಪುತ್ರ ಅಭಿಷೇಕ್‌ ಮೊದಲ ಚಿತ್ರ ‘ಅಮರ್‌‌‌‌‌’ ಮುಹೂರ್ತ ನೆರವೇರಿದ್ದರಿಂದ ಡಬಲ್ ಖುಷಿಯಲ್ಲಿದ್ದಾರೆ ಅಂಬಿ. ನಿನ್ನೆ ರಾತ್ರಿಯಿಂದಲೇ ಅಭಿಮಾನಿಗಳು ಮೆಚ್ಚಿನ ನಟನಿಗೆ ಶುಭಾಶಯ ಕೋರಲು ಅಂಬರೀಶ್ ಅವರ ಜೆಪಿ ನಗರ ನಿವಾಸದ ಮುಂದೆ ಕೇಕ್‌‌‌‌, ಹೂವಿನ ಹಾರ, ಸೇಬಿನ ಹಾರದೊಂದಿಗೆ ಜಮಾಯಿಸಿದ್ದರು. ಯಾರಿಗೂ ನಿರಾಸೆ ಮಾಡದೆ ಮಂಡ್ಯದ ಗಂಡು ಅಭಿಮಾನಿಗಳೊಂದಿಗೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಮಹಿಳಾ ಅಭಿಮಾನಿಗಳು ಕೂಡಾ ನಿನ್ನೆ ಅಂಬಿಗೆ ಶುಭ ಕೋರಲು […]

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಚಿತ್ರರಂಗಕ್ಕೆ ಎಂಟ್ರಿ..!

Saturday, May 26th, 2018
abhishek

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ಚಿತ್ರರಂಗ ಎಂಟ್ರಿಗೆ ಎಲ್ಲ ರೀತಿಯಲ್ಲಿ ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಅಭಿಷೇಕ್‌ ನಟನೆಯ ಮೊದಲ ಚಿತ್ರ ‘ಅಮರ್’ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ಸಖತ್ ಸ್ಟೈಲಿಷ್ ಆಗಿ ರಗಡ್ ಲುಕ್ ಕೊಡ್ತಿರೋ ಅಭಿಷೇಕ್ ಫಸ್ಟ್ ಪೋಸ್ಟರ್‌ನಲ್ಲೇ ಮೋಡಿ ಮಾಡ್ತಿದ್ದಾರೆ. ಈ ಯಂಗ್ ಸ್ಟಾರ್ ಖಂಡಿತಾ ಸ್ಯಾಂಡಲ್‌ವುಡ್‌ನಲ್ಲಿ ತಮ್ಮದೊಂದು ಛಾಪು ಮೂಡಿಸ್ತಾರೆ ಎಂದು ಮಾತನಾಡುತ್ತಿದೆ ಗಾಂಧಿನಗರ. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಮೂಡಿಬರ್ತಿರೋ ಅಮರ್‌ಗೆ ನಾಗಶೇಖರ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಅರ್ಜುನ್ […]

ವಾಟ್ಸ್‌ಆ್ಯಪ್‌ನಲ್ಲಿ ಸುಳ್ಳು ಸಂದೇಶ ರವಾನೆ: ಪೊಲೀಸರಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು

Friday, May 18th, 2018
vipul-kumar

ಮಂಗಳೂರು: ಕೆಲವು ವರ್ಷಗಳ ಹಿಂದೆ ಚರ್ಚ್‌ಗಳ ಮೇಲೆ ದುಷ್ಕರ್ಮಿಗಳು ನಡೆಸಿದ ದಾಂಧಲೆಯ ಚಿತ್ರವನ್ನು ಮುಂದಿಟ್ಟುಕೊಂಡು ನಿನ್ನೆ ಮೊನ್ನೆ ನಡೆದಿದೆ ಎಂದು ಬಿಂಬಿಸಿ ಕೆಲವರು ವಾಟ್ಸ್‌ಆ್ಯಪ್‌ನಲ್ಲಿ ಸುಳ್ಳು ಸಂದೇಶ ರವಾನೆ ಮಾಡಿರುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಇದೀಗ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ವಿಫುಲ್ ಕುಮಾರ್ ತನ್ನ ಕಚೇರಿಯಲ್ಲಿ ಶುಕ್ರವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಂತಹ ಸಂದೇಶ ರವಾನೆಯಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗಲಿದೆ. ಆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ […]

ಅಬ್ದುಲ್ ಬಷೀರ್ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

Tuesday, February 6th, 2018
murder

ಮಂಗಳೂರು: ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ದುಷ್ಕರ್ಮಿಗಳ ದಾಳಿಗೆ ಮೃತಪಟ್ಟ ಅಬ್ದುಲ್ ಬಷೀರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮತ್ತೊರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳದ ಕೇಪು ಗ್ರಾಮದ ಅಭಿಷೇಕ್ ಆರ್. ಎಸ್. ಎಂದು ಗುರುತಿಸಲಾಗಿದೆ. ಆರೋಪಿಯನ್ನು ಪುತ್ತೂರಿನ ಬನ್ನೂರು ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಆಕಾಶ ಭವನ ನಿವಾಸಿಯಾಗಿದ್ದ ಅಬ್ದುಲ್ ಬಷೀರ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪೊಲೀಸರು ಕಿಶನ್ ಪೂಜಾರಿ, ಶ್ರೀಜಿತ್, ಧನುಷ್ ಪೂಜಾರಿ, ಸಂದೆಶ್ ಕೋಟ್ಯಾನ್, ಪುಷ್ಪರಾಜ್ ಹಾಗೂ ಲತೇಲ್ […]

ಅಮಿತಾಬ್‌ ಬಚ್ಚನ್‌ 75ನೇ ವಸಂತಕ್ಕೆ ಹೆಜ್ಜೆ

Wednesday, October 11th, 2017
big-b

ಮುಂಬೈ: ಬಾಲಿವುಡ್‌ ಬಿಗ್‌ ಬಿ ಅಮಿತಾಬ್‌ ಬಚ್ಚನ್‌ 75ನೇ ವಸಂತಕ್ಕೆ ಕಾಲಿಟಿದ್ದಾರೆ. ಬಚ್ಚನ್‌ ಹುಟ್ಟುಹಬ್ಬಕ್ಕೆ ಬಾಲಿವುಡ್‌ನ ಅನೇಕ ಹಿರಿ–ಕಿರಿಯರು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಕೋರಿದ್ದಾರೆ.ತಮ್ಮ ಹುಟ್ಟುಹಬ್ಬ ಆಚರಣೆಗಾಗಿ ಬಚ್ಚನ್‌ ಕುಟುಂಬ ಸಮೇತ ಮಾಲ್ಡೀವ್ಸ್‌‌ಗೆ ತೆರಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಕಳೆದ ವರ್ಷ ಕೂಡಾ ಬಚ್ಚನ್‌ ಕುಟುಂಬದೊಂದಿಗೆ ಮಾಲ್ಡೀವ್ಸ್‌ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಬಚ್ಚನ್‌ ತಮ್ಮ ಪುತ್ರ ಅಭಿಷೇಕ್, ಸೊಸೆ ಐಶ್ವರ್ಯಾ ರೈ ಮತ್ತು ಮೊಮ್ಮಗಳು ಆರಾಧ್ಯಾ ಜತೆಗೆ ಮಂಗಳವಾರ ಮುಂಬೈ ವಿಮಾನ ನಿಲ್ದಾಣದೊಳಗೆ ಹೋಗುತ್ತಿರುವ ಚಿತ್ರಗಳನ್ನು ಕೆಲ […]