ಕೆಎಸ್ಆರ್ ಟಿಸಿ ಬಸ್-ಬೈಕ್ ಅಪಘಾತ : ಬೈಕ್ ಸವಾರರಿಬ್ಬರು ಸಾವು

Wednesday, October 30th, 2019
Karavara

ಕಾರವಾರ : ಕಾರವಾರ ತಾಲೂಕಿನ ಅಮದಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ  ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಕಾರವಾರ ಮೂಲದವರಾದ ರಾಜೇಶ್ ಹಾಗೂ ನಾಗೇಂದ್ರ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕಾರವಾರ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.