ಗೌರಿ ಲಂಕೇಶ್ ಹತ್ಯೆ ಪ್ರಕರಣ..ಮತ್ತಿಬ್ಬರ ಆರೋಪಿಗಳ ಬಂಧನ!

Monday, July 23rd, 2018
gouri-lankesh

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹುಬ್ಬಳ್ಳಿ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಹುಬ್ಬಳ್ಳಿ ನಿವಾಸಿಗಳಾದ ಅಮಿತ್ ರಾಮಚಂದ್ರ ಮತ್ತು ಗಣೇಶ್ ಮಿಸ್ಕಿ ಬಂಧಿತ ಆರೋಪಿಗಳು. ಇಬ್ಬರನ್ನೂ ಎಸ್ಐಟಿ ಕಚೇರಿಯಲ್ಲಿ ಅಧಿಕಾರಿಗಳು ವಿಚಾರಣೆಗಾಗಿ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದರು. ವಿಚಾರಣೆ ವೇಳೆ ಗೌರಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳು ಭಾಗಿಯಾಗಿರುವ ಬಗ್ಗೆ ಎಸ್ಐಟಿ ಅಧಿಕಾರಿಗಳಿಗೆ ಖಚಿತಪಟ್ಟ ಹಿನ್ನೆಲೆಯಲ್ಲಿ ಇಬ್ಬರನ್ನೂ ಬಂಧನಕ್ಕೊಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. […]