ಅಯ್ಯಪ್ಪನ ದರ್ಶನಕ್ಕೆ ಸಜ್ಜಾದ ತೃಪ್ತಿ ದೇಸಾಯಿ: ಕೊಚ್ಚಿನ್ ಏರ್ಪೋರ್ಟ್ನಲ್ಲಿ ಬಿಜೆಪಿ ಪ್ರತಿಭಟನೆ
Friday, November 16th, 2018ಕೊಚ್ಚಿನ್: ಅಯ್ಯಪ್ಪನ ದೇಗುಲಕ್ಕೆ ಮಹಿಳೆಯರ ಪ್ರವೇಶ ಸಂಬಂಧ ಭುಗಿಲೆದ್ದಿರುವ ವಿವಾದ ಶಮನವಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಮಹಿಳೆಯರ ಪ್ರವೇಶಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೆ ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ ದೇಗುಲ ಪ್ರವೇಶಕ್ಕೆ ಸಿದ್ಧರಾಗಿದ್ದಾರೆ. ದೇಗುಲ ಪ್ರವೇಶಿಸಿಯೇ ತೀರುತ್ತೇನೆ ಎಂದು ಪಣತೊಟ್ಟಿರುವ ಅವರು ಭಾರಿ ಭದ್ರತೆಯೊಂದಿಗೆ ನಿನ್ನೆ ಕೊಚ್ಚಿನ್ ವಿಮಾನನಿಲ್ದಾಣಕ್ಕೆ ಆಗಮಿಸಿದರು. ಅಲ್ಲದೆ, ಅಯ್ಯಪ್ಪನ ಭಕ್ತರು ಅವರಿಗೆ ಪ್ರತಿರೋಧವೊಡ್ಡಿದ ಘಟನೆಯೂ ನಡೆಯಿತು. ವಿಮಾನನಿಲ್ದಾಣದ ಬಳಿಯೇ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ವ್ಯಕ್ತಪಡಿಸಿದರು. ಪೊಲೀಸ್ ವಾಹನದಲ್ಲಿ ಅಥವಾ ಸರ್ಕಾರಿ ವಾಹನದಲ್ಲಿ ತೃಪ್ತಿ […]