ಸಿದ್ದಲಿಂಗಯ್ಯ ಸ್ಮಾರಕ ನಿರ್ಮಾಣ ಶೀಘ್ರದಲ್ಲೇ ನಿರ್ಧಾರ ಸಚಿವ ಅರವಿಂದ ಲಿಂಬಾವಳಿ

Friday, July 2nd, 2021
Siddalingayya

ಬೆಂಗಳೂರು  : ಇತ್ತೀಚೆಗೆ ನಿಧನರಾದ ಕವಿ, ನಾಡೋಜ ಡಾ. ಸಿದ್ದಲಿಂಗಯ್ಯ ಅವರ ಸ್ಮಾರಕ ನಿರ್ಮಾಣ ದ ಬಗ್ಗೆ ಶೀಘ್ರದಲ್ಲೇ ಸನ್ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಅವರು ಇಂದು ದಿ. ಡಾ. ಸಿದ್ದಲಿಂಗಯ್ಯ ಅವರ ಮನೆಗೆ ಭೇಟಿ ಕೊಟ್ಟು ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಕುಟುಂಬ ಸದಸ್ಯರ ಬೇಡಿಕೆಗಳಿಗೆ ಸ್ಪಂದಿಸಿದ ಸಚಿವರು […]

ತ್ಯಾಜ್ಯ ನಿರ್ವಹಣೆ ಯಲ್ಲಿ ಲೋಪವಾದರೆ ಕ್ರಮ ಸಚಿವ ಅರವಿಂದ ಲಿಂಬಾವಳಿ ಎಚ್ಚರಿಕೆ

Saturday, June 19th, 2021
Waste

ಬೆಂಗಳೂರು : ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಯಾವುದೇ ಲೋಪಗಳು ಕಂಡುಬಂದಲ್ಲಿ ಅದಕ್ಕೆ ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಕುರಿತಂತೆ ಬಿಬಿಎಂಪಿ ಅಧಿಕಾರಿಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ ಗುತ್ತಿಗೆದಾರರ ಜೊತೆ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಚಿವ ಅರವಿಂದ ಲಿಂಬಾವಳಿ ಸಮರ್ಪಕ ತ್ಯಾಜ್ಯ ನಿರ್ವಹಣೆ ಆದ್ಯತೆ ಆಗಬೇಕೆಂದರು. ಕಸ ನಿರ್ವಹಣೆಯ ಬಗ್ಗೆ […]