ಪಿಲಿಕುಳ ನಿಸರ್ಗಧಾಮದ ಪ್ರಾಣಿ ಪಾಲಕ ಆತ್ಮಹತ್ಯೆ

Monday, September 9th, 2019
zookeeper

ಮಂಗಳೂರು : ಪಿಲಿಕುಳ ನಿಸರ್ಗಧಾಮದ ಪ್ರಾಣಿ ಸಂಗ್ರಹಾಲಯದ ಪಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಶೋಕ (28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅಶೋಕ ಸುಮಾರು 6 ವರ್ಷಗಳಿಂದ ಪಿಲಿಕುಳ ಪ್ರಾಣಿ ಸಂಗ್ರಹಾಲಯದಲ್ಲಿ ಪಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಪಿಲಿಕುಳದ ತನ್ನ ಕ್ವಾರ್ಟರ್ಸ್‌ನ ರೂಮ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.ಕಾವೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.    

ಸಿದ್ದರಾಮಯ್ಯಗೆ ಸನ್ಮಾನ ಮಾಡಿದ ಮುಸ್ಲಿಂ ಧಾರ್ಮಿಕ ಮುಖಂಡರು..!

Saturday, November 10th, 2018
siddaramaih

ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಮುಸ್ಲಿಂ ಧಾರ್ಮಿಕ ಮುಖಂಡರು ಅಭಿನಂದಿಸಿದ್ದಾರೆ. ಇಂದು ಬೆಂಗಳೂರಿನ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಸಚಿವ ಜಮೀರ್ ಅಹಮದ್ ನೇತೃತ್ವದಲ್ಲಿ ತೆರಳಿದ ಹಲವು ಮುಸ್ಲಿಂ ಧರ್ಮಗುರುಗಳು, ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೇ ವೇಳೆ ಸಿದ್ದರಾಮಯ್ಯರನ್ನು ಧರ್ಮಗುರುಗಳು ಸನ್ಮಾನಿಸಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದ ಸಮಯದಲ್ಲಿ ಟಿಪ್ಪು ಜಯಂತಿಯನ್ನು ಆರಂಭಿಸಿದ್ದರು. ಹಾಗಾಗಿ ಅವರ ಕಾರ್ಯವನ್ನು ಗೌರವಿಸುವ ನಿಟ್ಟಿನಲ್ಲಿ ಈ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ ಸಿದ್ದರಾಮಯ್ಯ ಚಿತ್ರದುರ್ಗಕ್ಕೆ ತೆರಳುವ […]