ಅಶ್ರಫ್ ಕಲಾಯಿ ಹತ್ಯೆ ಪ್ರಕರಣ: ಜಾಮೀನಿನ ಮೇಲೆ ಹೊರ ಬಂದ ಆರೋಪಿಗೆ ಫೇಸ್​ಬುಕ್​ನಲ್ಲಿ ಜೀವ ಬೆದರಿಕೆ

Saturday, November 3rd, 2018
ashraf

ಮಂಗಳೂರು: ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘರ್ಷಕ್ಕೆ ಕಾರಣವಾದ ಅಶ್ರಫ್ ಕಲಾಯಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಜಾಮೀನಿನ ಮೇಲೆ ಹೊರ ಬಂದ ಹಿನ್ನೆಲೆ ಆತನಿಗೆ ಫೇಸ್ಬುಕ್ ಪೇಜ್ವೊಂದರಲ್ಲಿ ಜೀವ ಬೆದರಿಕೆ ಒಡ್ಡಲಾಗಿದೆ. ಅಶ್ರಫ್ ಕಲಾಯಿ ಹತ್ಯೆ ಪ್ರಕರಣದಲ್ಲಿ ಭರತ್ ಕುಮ್ಡೇಲ್ ಪ್ರಮುಖ ಆರೋಪಿಯಾಗಿದ್ದ. ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯಾದ ನಂತರ ಅಶ್ರಫ್ ಕಲಾಯಿ ಕೊಲೆ ನಡೆದಿತ್ತು. ಈ ಕೊಲೆ ಪ್ರಕರಣ ಬೆನ್ನತ್ತಿದ್ದ ಪೊಲೀಸರು ಬಜರಂಗದಳದ ಜಿಲ್ಲಾ ಮುಖಂಡ‌ ಭರತ್ ‌ಕುಮ್ಡೇಲನ್ನು ಬಂಧಿಸಿದ್ದರು. ಭರತ್ […]

ಅಶ್ರಫ್ ಕಲಾಯಿ ಕೊಲೆ‌ ಪ್ರಕರಣದ ಪ್ರಮುಖ ಆರೋಪಿ ಬಂಧನ

Saturday, July 1st, 2017
Bharath Kumdel

ಮಂಗಳೂರು:  ಬೆಂಜನಪದವು ಎಂಬಲ್ಲಿ  ಎಸ್‌‌‌ಡಿಪಿಐ ಮುಖಂಡ‌ ಅಶ್ರಫ್ ಕಲಾಯಿ ಕೊಲೆ‌ ಪ್ರಕರಣದಲ್ಲಿ ಪ್ರಮುಖ ಆರೋಪಿ ಎನ್ನಲಾದ ಭರತ್ ಕುಮ್ಡೇಲ್ನನ್ನು  ಪೊಲೀಸರು ಬಂಧಿಸಿದ್ದಾರೆ. ಭಜರಂಗದಳ ಪುತ್ತೂರು ವಿಭಾಗದ ಸಹಸಂಚಾಲಕ ಭರತ್ ಕುಮ್ಡೇಲ್ ಕಲಾಯಿ ಕೊಲೆ‌ ಪ್ರಕರಣದಲ್ಲಿ ಪ್ರಮುಖ ಆರೋಪಿ ಎನ್ನಲಾಗಿದ್ದು ಇದುವರೆಗೆ ಬಂಧನ ವಾಗಿರಲಿಲ್ಲ. ಈ ಪ್ರಕರಣದಲ್ಲಿ ಒಟ್ಟು  ಆರು ಜನ ಆರೋಪಿಗಳನ್ನು ಬಂಧನವಾಗಿತ್ತು. ಇದೀಗ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲ್‌ನ ಬಂಧನವಾಗಿದೆ. ಜೂನ್ 21ರಂದು ದ.ಕ ಜಿಲ್ಲೆಯ ಬೆಂಜನಪದವುನಲ್ಲಿ ಅಶ್ರಫ್ ಕೊಲೆ ನಡೆದಿತ್ತು.

ಎಸ್ ಡಿಪಿಐ ಕಾರ್ಯಕರ್ತ ಅಶ್ರಫ್ ಹತ್ಯಾ ಆರೋಪಿಗಳ ಶೀಘ್ರ ಬಂಧನ : ಎಡಿಜಿಪಿ

Thursday, June 22nd, 2017
Aloka

ಮಂಗಳೂರು : ಬಂಟ್ವಾಳದ ಬೆಂಜನಪದವಿನಲ್ಲಿ  ಎಸ್‌ಡಿಪಿ ಮುಖಂಡ ಮುಹಮ್ಮದ್ ಅಶ್ರಫ್ ಕಲಾಯಿ ಹತ್ಯೆಯ ಆರೋಪಿಗಳ ಬಂಧನಕ್ಕೆ ನಾಲ್ಕು ವಿಶೇಷ ತಂಡ ರಚನೆ ಮಾಡಲಾಗಿದೆ. ಈಗಾಗಲೇ ನಮ್ಮ ಮಾಹಿತಿದಾರರಿಗೆ ಆರೋಪಿಗಳ ಮಾಹಿತಿ ಲಭ್ಯವಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ  ಅಲೋಕ್ ಮೋಹನ್ ಹೇಳಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು,  ಪೊಲೀಸ್ ತಂಡಗಳು ಪ್ರತ್ಯೇಕ ನಿಗಾದೊಂದಿಗೆ ತನಿಖೆ ನಡೆಸುತ್ತಿವೆ. ಆರೋಪಿಗಳನ್ನು ಬಂಧಿಸಿದಾಕ್ಷಣ ಈ ಘಟನೆಗಳ ಷಡ್ಯಂತ್ರ ರೂಪಿಸಿದವರನ್ನೂ ಬಂಧಿಸಲು ಸಾಧ್ಯವಾಗಲಿದೆ. ಜಿಲ್ಲೆಯಲ್ಲಿ ನಡೆದಿರುವ ಘಟನೆಗಳು ಉತ್ತಮ […]