ಶಾಂತಿ ಕಾಪಾಡಲು ಕೇಜ್ರಿವಾಲ್ ಕರೆ

Thursday, March 6th, 2014
Arvind-kejriwa

ನವದೆಹಲಿ: ಬುಧವಾರ ಬಿಜೆಪಿ ಪ್ರಧಾನ ಕಾರ್ಯಾಲಯದ ಹೊರಗೆ ಆಮ್ ಆದ್ಮಿ ಪಕ್ಷದ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆಪ್ ನಾಯಕರಾದ ಅಶತೋಷ್, ಶಾಜಿಯಾ ಇಲ್ಮೀ ಅವರ ಬಂಧನಕ್ಕೆ ಆದೇಶಿಸಿದ್ದಾರೆ. ನಿನ್ನೆ ನಡೆದ ಈ ಘಟನೆಯಲ್ಲಿ ಕನಿಷ್ಟ 14 ಆಪ್ ಕಾರ್ಯಕರ್ತರನ್ನು ಈವರೆಗೆ ಬಂಧಿಸಲಾಗಿದೆ. ಆದಾಗ್ಯೂ, ನಿನ್ನೆ ನಡೆದ ಅಹಿತಕರ ಘಟನೆಗೆ ಕ್ಷಮೆಯಾಚಿಸಿದ ಆಪ್ ನೇತಾರ  ಅರವಿಂದ್ ಕೇಜ್ರಿವಾಲ್ ಕಾರ್ಯಕರ್ತರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಬಿಜೆಪಿ ನೇತಾರರಾದ ಡಾ.ಹರ್ಷವರ್ಧನ್, […]

ಅರವಿಂದ ಕೇಜ್ರಿವಾಲ್ ಬಂಧನ

Thursday, March 6th, 2014
Arvind-kejriwa

ಹಮದಾಬಾದ್: ಬುಧವಾರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಉತ್ತರ ಗುಜರಾತ್‌ನಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ಆಪ್ ನಾಯಕ ಅರವಿಂದ ಕೇಜ್ರಿವಾಲ್‌ರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಈ ಘಟನೆ ದೆಹಲಿ ಹಾಗೂ ಲಖನೌನಲ್ಲಿ ನಾಟಕೀಯ ಬೆಳವಣಿಗೆಗಳಿಗೆ ಕಾರಣವಾಯಿತು. ಕೇಜ್ರಿ ವಶಕ್ಕೆ ತೆಗೆದುಕೊಂಡ ಸುದ್ದಿ ತಿಳಿಯುತ್ತಿದ್ದಂತೆಯೇ ಆಪ್ ಕಾರ್ಯಕರ್ತರು ನವದೆಹಲಿಯಲ್ಲಿನ ಬಿಜೆಪಿ ಪ್ರಧಾನ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಆಪ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯಿತು. ಇದಲ್ಲದೇ ಗುಜರಾತ್‌ನ ಹಲವೆಡೆಯೂ ಬಿಜೆಪಿ-ಆಪ್ […]

ಗುಜರಾತ್‌ನಲ್ಲಿನ ರಾಮರಾಜ್ಯವನ್ನು ನೋಡಲು ಬಂದಿದ್ದೇನೆ: ಕೇಜ್ರಿವಾಲ್

Wednesday, March 5th, 2014
Arvind-Kejriwal

ಅಹ್ಮದಾಬಾದ್: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸುವುದಾಗಿ ಸುದ್ದಿ ಕೇಳಿಬರುತ್ತಿದ್ದಂತೆ, ಕೇಜ್ರಿವಾಲ್ ಇಂದಿನಿಂದ ಗುಜರಾತ್‌ನಲ್ಲಿ 4 ದಿನಗಳ ಪ್ರವಾಸ ಆರಂಭಿಸಿದ್ದಾರೆ. ಪ್ರಧಾನಿ ಅಭ್ಯರ್ಥಿಯಾಗಿರುವ ನರೇಂದ್ರ ಮೋದಿಯವರು ಗುಜರಾತ್‌ನಲ್ಲಿ ಏನೆಲ್ಲಾ ಅಭಿವೃದ್ಧಿ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸುವುದಕ್ಕಾಗಿಯೇ ತಾನು ಗುಜರಾತ್ ಪ್ರವಾಸ ಕೈಗೊಡಿರುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ. ಗುಜರಾತ್ ಸರ್ಕಾರ ಮತ್ತು ಮಾಧ್ಯಮಗಳು ಗುಜರಾತ್‌ನಲ್ಲಿ ರಾಮರಾಜ್ಯ ನಿರ್ಮಾಣವಾಗಿದೆ ಎಂದು ಹೇಳುತ್ತಿದ್ದಾರೆ. ಅವರು ಹೇಳುವಂತೆ ಇಲ್ಲಿ ವಿದ್ಯಾಭ್ಯಾಸದಲ್ಲಿ ಪ್ರಗತಿಯಾಗಿದೆ, ಆರೋಗ್ಯ ಸಮಸ್ಯೆಗಳು ನಿರ್ಮೂಲನೆಯಾಗಿವೆ, ಭ್ರಷ್ಟಾಚಾರ ಇಲ್ಲಿಲ್ಲ…ಆದ್ದರಿಂದ […]