ಹೆಬ್ಟಾವಿನ ಜತೆ ಕಾದಾಡಿ ಜೀವವುಳಿಸಿಕೊಂಡು ಸಾಹಸ ಮೆರೆದ ಬಾಲಕ ವೈಶಾಖ್‌

Wednesday, October 5th, 2016
python-attack

ಮಂಗಳೂರು: ದಾರಿಯಲ್ಲಿ ಸಾಗುತ್ತಿದ್ದಾಗ ಮೈಮೇಲೆ ಹಾರಿ ಸುತ್ತಿಕೊಳ್ಳಲಾರಂಭಿಸಿದ ಹೆಬ್ಟಾವಿನ ಜತೆ ಬಾಲಕನೋರ್ವ ಕಾದಾಡಿ ಜೀವವುಳಿಸಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಸಜೀಪ ಸಮೀಪದ ಕೊಳಕೆಯಲ್ಲಿ ಮಂಗಳವಾರ ನಡೆದಿದೆ. ಸಜೀಪ ಆದರ್ಶ ಆಂಗ್ಲಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿ 11ರ ಹರೆಯದ ವೈಶಾಖ್‌ ಸಾಹಸ ಮೆರೆದು ಪ್ರಾಣವುಳಿಸಿಕೊಂಡ ಬಾಲಕ. ಕೊಳಕೆ ಕೂಡೂರು ನಿವಾಸಿ ಸುರೇಶ್‌ ಅವರ ಪುತ್ರ ವೈಶಾಖ್‌ ಎಂದಿನಂತೆ ಸಂಜೆ ಶಾಲೆಯಿಂದ ಮನೆಗೆ ಬಂದು ಉಪಾಹಾರ ಸೇವಿಸಿ, ಸಮೀಪದಲ್ಲೇ ಇರುವ ತನ್ನ ಅಜ್ಜನ ಮನೆಗೆ ತೆರಳಿದ್ದ. ಸಾಗುವ ಹಾದಿ […]